ಮಂಗಳೂರು: ಪ್ರಧಾನಿ ಮೋದಿ ರೋಡ್ ಶೋ ವೇಳೆ ಕರಾವಳಿ ಸಂಸ್ಕೃತಿ ಅನಾವರಣ
ಪ್ರಧಾನಿ ಮೋದಿ ಈಗಾಗಲೇ ದೇಶದ ವಿವಿಧೆಡೆ ಚುನಾವಣಾ ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಅಲ್ಲದೆ ಕರ್ನಾಟಕದ ಕಲಬುರ್ಗಿಯಲ್ಲಿ ಈಗಾಗಲೇ ಒಂದು ರ್ಯಾಲಿ ನಡೆಸಿ ಆಗಿದೆ. ಈಗ ಕರಾವಳಿ ಭಾಗದತ್ತ ಮೋದಿ ಚಿತ್ತವನ್ನು ನೆಟ್ಟಿದ್ದಾರೆ.
ಭಾನುವಾರ ಪ್ರಧಾನಿ ಮೋದಿ ಅವರು ಕರ್ನಾಟಕ ಪ್ರವಾಸ ಕೈಗೊಳಲಿದ್ದಾರೆ. ಈ ವೇಳೆ ಮಂಗಳೂರಿನಲ್ಲಿ ಮೊದಲ ಬಾರಿಗೆ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ಭರದ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಕರವಾಳಿಯ ಸೊಗಡನ್ನು ಮೋದಿ ಅವರಿಗೆ ಪರಿಚಯಿಸುವ ಇರಾದೆಯನ್ನು ಇಲ್ಲಿನ ಸ್ಥಳಿಯ ನಾಯಕರು ಮಾಡಿಕೊಂಡಿದ್ದಾರೆ.

ಕರಾವಳಿಯ ಸಂಸ್ಕೃತಿ ಅನಾವರಣ
ಮಂಗಳೂರಿನಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ತೆರೆದ ವಾಹನದಲ್ಲಿ ಮೋದಿ ಮತ ಬೇಟೆಗೆ ಇಳಿಯುವಾಗಲೇ ತಮ್ಮ ಕಲೆಯನ್ನು ಪ್ರಧಾನಿಗೆ ತೋರಿಸಲು ಸ್ಥಳೀಯ ಮುಖಂಡರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಅಂತೆ, ಪ್ರಧಾನಿ ರೋಡ್ ಶೋ ನಡೆಯುವ ರಸ್ತೆಗಳ ಇಕ್ಕೆಲುಗಳಲ್ಲಿ ಕರವಾಳಿಯ ಸಂಸ್ಕೃತಿಯನ್ನು ಅನಾವರಣ ಮಾಡಲು ತಯಾರಿ ನಡೆದಿದೆ. ಇದರಂತೆ ದೈವಾರಾಧನೆಯ ತುಣುಕ, ಕಂಬಳದ ಚಿತ್ರಣ, ಹಲಿ ವೇಷ, ಭರತ ನಾಟ್ಯಗಳು ಮೋದಿಯವರ ಗಮನ ಸೆಳೆಯಲು ಯೋಜನೆ ರೂಪಿಸಿಕೊಂಡಿವೆ.
ವಿಶೇಷ ದಿನಗಳಂದು ಕಾಣುವ ಸ್ತಬ್ಧ ಚಿತ್ರಗಳನ್ನೇ ಹೋಲುವ ರೀತಿ ಕಂಬಳ ಸ್ತಬ್ಧ ಚಿತ್ರ ರೆಡಿ ಮಾಡಿಕೊಳ್ಳಲಾಗುತ್ತಿದೆ. ಕಲಾವಿದರು ರಸ್ತೆಯ ಪಕ್ಕದಲ್ಲಿ ಹುಲಿ ವೇಷ ಹಾಗೂ ಭರತ ನಾಟ್ಯವನ್ನು ಮಾಡಲಿದ್ದಾರೆ. ಇನ್ನು ದೈವಾರಾಧನೆಯ ತುಣುಕುಗಳನ್ನು ಬೃಹತ್ ಎಲ್ಇಡಿ ಪರದೆಯ ಮೇಲೆ ಪ್ರಸಾರ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗುತ್ತಿದೆ.

ಅಂದಹಾಗೆ ಕರಾವಳಿಯ ಕಲೆಯನ್ನು ಪ್ರದರ್ಶಿಸುವ ಪ್ಲ್ಯಾನ್ ಇನ್ನು ಅಂತಿಮವಾಗಿಲ್ಲ. ಮೋದಿ ಭದ್ರತಾ ಸಿಬ್ಬಂದಿಗಳು ಇದಕ್ಕೆ ಒಪ್ಪಿಗೆ ನೀಡಿದ್ದೇ ಆದಲ್ಲಿ ಈ ರೋಡ್ ಶೋ ಅಪಾರ ಜನ ಮನ್ನಣೆ ಗಳಿಸುವ ಸಾಧ್ಯತೆ ಇದೆ. ಇದು ಯಾವುದೇ ಪಕ್ಷದ ಕಾರ್ಯಕ್ರಮವಲ್ಲದೆ, ಮೋದಿ ಅಭಿಮಾನಿಗಳು ಅಭಿಮಾನದಿಂದ ಪ್ರಧಾನಿಗೆ ತಮ್ಮ ಸಂಸ್ಕೃತಿಯನ್ನು ತೋರಿಸುವ ಇರಾದೆ ಹೊಂದಿದ್ದಾರೆ.
ಭಾನುವಾರ ನಡೆಯುವ ರೋಡ್ ಶೋಗೆ ಈಗಾಗಲೇ ಎಸ್ಪಿಜಿ ಭದ್ರತಾ ಕಾರ್ಯವನ್ನು ಆರಂಭಿಸಿದೆ. ಈಗಾಗಲೇ ಜಿಲ್ಲಾಡಳಿತ, ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಹಲವು ಅಂಶಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ.

ಅರಣ್ಯಾಧಿಕಾರಿಗಳಿಗೆ ಸೂಚನೆ
ಭಾನುವಾರ ಪ್ರಧಾನಿ ಮೋದಿ ರೋಡ್ ಶೋ ನಡೆಯಲಿದ್ದು ಈ ವೇಳೆ, ಮರ ಹಾಗೂ ಕಟ್ಟಡಗಳ ಮೇಲೆ ಕಟ್ಟಿರುವ ಜೇನುಗುಡುಗಳನ್ನು ತೆರವುಗೊಳಿಸುವಂತೆ ಪೊಲೀಸ್ ಆಯುಕ್ತರ ಕಚೇರಿಯಿಂದ ಅರಣ್ಯಾಧಿಕಾರಿಗಳಿಗೆ ಸೂಚಸಿಲಾಗಿದೆ.
ಏಪ್ರಿಲ್ 14ಕ್ಕೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದು, ಆರಂಭದಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಅಲ್ಲದೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವಾದ ಬ್ಯಾಟರಾಯನಪುರ ಹಾಗೂ ಹೆಬ್ಬಾಳದಲ್ಲಿ ರೋಡ್ ಶೋ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಇದೇ ದಿನ ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರೊಂದಿಗೆ ಪ್ರಧಾನಿ ಮೋದಿ ವೇದಿಕೆ ಹಂಚಿಕೊಳ್ಳಲಿದ್ದು, ಹಳೆ ಮೈಸೂರು ಭಾಗದ ಮತದಾರರನ್ನು ಟಾರ್ಗೆಟ್ ಮಾಡಲಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications