ಮಂಗಳೂರು ಏರ್ಪೋರ್ಟ್ನಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಸಿದ ಉಗ್ರಗಾಮಿ ಸಂಘಟನೆ
ಮಂಗಳೂರು, ಡಿಸೆಂಬರ್ 29: ರಾಜಧಾನಿ ಬೆಂಗಳೂರಿನಲ್ಲಿ ಶಾಲೆಗಳಿಗೆ ಬಾಂಬ್ ಇಟ್ಟಿದ್ದಾಗಿ ಈ ಮೇಲೆ ಸಂದೇಶ ಕಳಹಿಸಿದ್ದ ದುಷ್ಕರ್ಮಿಗಳ ಕೃತ್ಯ ಬೆಳಕಿಗೆ ಬಂದಿತ್ತು. ಇದೀಗ ನಿತ್ಯ ಸಾವಿರಾರು ಮಂದಿ ಪ್ರಯಾಣ ಮಾಡುವ ಕರಾವಳಿಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಉಗ್ರ ಸಂಘಟನೆಯೊಂದು ಸಂದೇಶ ರವಾನಿಸಿದೆ.
ಹೌದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Mangaluru Airport) ಹುಸಿ ಬಾಂಬ್ ಬೆದರಿಕೆ ಬಂದಿದೆ. ಉಗ್ರ ಸಂಘಟನೆ ಘೋಷಿಸಿಕೊಂಡವರಿಂದಲೇ ಇ-ಮೇಲ್ ಮೂಲಕ ಡಿಸೆಂಬರ್ 26ರಂದು ಸಂದೇಶ ಬಂದಿದೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು, ಸ್ಪೋಟಿಸುವುದಾಗಿ [email protected] ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿತ್ತು.

ಸಂದೇಶ ನೋಡುತ್ತಿದ್ದಂತೆ ಅದಾನಿ ಆಡಳಿತದ ಮಂಗಳೂರು ವಿಮಾನ ನಿಲ್ದಾಣದ ಮುಖ್ಯಸ್ಥುರು ಬಜಪೆ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದರು. ಪೊಲೀಸರು ಕೂಡಲೇ ಎಫ್ಐಆರ್ ದಾಖಲಿಸಿಕೊಂಡು ತನಿಖೆಗೆ ಇಳಿದರು. ಸದ್ಯ ಕೋರ್ಟ್ ಅನುಮತಿ ಸಮೇತ ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) 507 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಮಾಣ ನಿಲ್ದಾಣ ಸಂಪೂರ್ಣ ಶೋಧ
'ಫನಿಂಗ್ (FUNING) ಹೆಸರು ಉಗ್ರ ಸಂಘಟನೆಯಿಂದ ಈ ಮೇಲ್ ಐಡಿ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಡಿಸೆಂಬರ್ 26ರಂದು ಹುಸಿ ಬಾಂಬ್ ಕರೆ ಬಂದಿದೆ. ಇದನ್ನು ಏರ್ಪೋರ್ಟ್ ಆಡಳಿತ ಮಂಡಳಿಯು ಮರುದಿನ ನೋಡಿದ್ದಾರೆ.ಇವರು ನೀಡಿದ ದೂರಿನ ಮೇಲೆ ಹೈ ಅಲರ್ಟ್ ಆದ ಪೊಲೀಸರು, ನಿಲ್ದಾಣದಲ್ಲಿ ಇಂಚಿಂಚೂ ಜಾಗವನ್ನು ತಪಾಸಣೆಗೆ ಒಳಪಡಿಸಿದ್ದಾರೆ.
ಬಾಂಬ್ ಸ್ಕ್ವಾಡ್, ಭದ್ರತಾ ತಂಡದ ಸದಸ್ಯರೆಲ್ಲರು ಬಾಂಬ್ ಇಟ್ಟ ಬಗ್ಗೆ ಅಗತ್ಯ ಎಲ್ಲ ಪರಿಶೀಲನೆ ನಡೆಸಿದ್ದಾರೆ. ತೀವ್ರ ಶೋಧದ ಬಳಿಕ ಇದು ಹುಸಿ ಬಾಂಬ್ ಎಂಬುದು ಖಚಿತವಾಗಿದೆ. ಸದ್ಯ ಎಫ್ಐಆರ್ ದಾಖಲಾಗಿದ್ದು, ಎಲ್ಲ ಆಯಾಮದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಮುಂದಿನ ಹಂತದ ಕ್ರಮಗಳನ್ನು ಕೈಗೊಳ್ಳಲಿದ್ದಾರೆ.
ಏಳು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ?
ಇದರೊಂದಿಗೆ ಮುಂಬೈ, ಅಹ್ಮದಾಬಾದ್, ಲಕ್ನೊ, ಜೈಪುರ, ಗುವಾಹಟಿ, ತಿರುವನಂತಪುರಂನ ವಿಮಾನ ನಿಲ್ದಾಣಗಳು ಸೇರಿದಂತೆ ಅದಾನಿ ಗ್ರೂಪ್ ಹಾಗೂ ಖಾಸಗಿ ಮಾಲಕತ್ವದ 7 ವಿಮಾನ ನಿಲ್ದಾಣಗಳಿಗೆ ಈ ಹುಸಿ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ. ಸದ್ಯ ತನಿಖೆ ಮುಂದುವರಿದಿದ್ದು, ಇ ಮೇಲ್ ಸಂದೇಶ ಕಳುಹಿಸಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications