ಮಂಗಳೂರು - ಬೆಂಗಳೂರು ಮಾರ್ಗದ ರೈಲು ಪ್ರಯಾಣಿಕರಿಗೆ ತಪ್ಪದ ಸಂಕಷ್ಟ
ಮಂಗಳೂರು: ಮಂಗಳೂರು - ಬೆಂಗಳೂರು ಮಾರ್ಗವಾಗಿ ಸಂಚರಿಸುವ ರೈಲು ಪ್ರಯಾಣಿಕರು ನಿತ್ಯವೂ ಸಮಸ್ಯೆ ಎದುರಿಸುವಂತಾಗಿದೆ. ಮಂಗಳೂರು - ಬೆಂಗಳೂರು ರೈಲು ವಿಳಂಬವು ಹೆಚ್ಚಾಗುತ್ತಿದ್ದು, ಈ ಮಾರ್ಗದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಸಮಸ್ಯೆ ಆಗುತ್ತಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಜನ ಅಸಮಾಧಾನ ಹೊರ ಹಾಕಿದ್ದಾರೆ.
ರಾಜ್ಯದ ಎರಡು ಪ್ರಮುಖ ನಗರಗಳಾದ ಮಂಗಳೂರು - ಬೆಂಗಳೂರಿನ ನಡುವೆ ರೈಲು ಸಂಚಾರದಲ್ಲಿ ವಿಳಂಬವಾಗುತ್ತಿದ್ದು, ನಿತ್ಯವೂ ಈ ಭಾಗದಲ್ಲಿ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ ಎಂದು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ Dakshina Kannada District Railway Users (@dkdistrictrail) ಎನ್ನುವ ಖಾತೆಯಿಂದ ಟ್ವೀಟ್ ಮಾಡಲಾಗಿದೆ. ಈ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಹೌದು ಈ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಮಾರ್ಗದಲ್ಲಿ ರೈಲು ವಿಳಂಬ ಕಾರ್ಯಾಚರಣೆಯಿಂದಾಗಿ ಸಾವಿರಾರು ಪ್ರಯಾಣಿಕರಿಗೆ ಸಮಸ್ಯೆ ಆಗುತ್ತಿದೆ. ಬೆಂಗಳೂರು ಮತ್ತು ಮಂಗಳೂರು ನಡುವೆ ಚಲಿಸುವ ರೈಲುಗಳು ನಿರಂತರವಾಗಿ ತಡವಾಗಿ ಬರುತ್ತಿರುವುದು ಪ್ರಯಾಣಿಕರು, ವಿದ್ಯಾರ್ಥಿಗಳು, ಕಚೇರಿಗೆ ಹೋಗುವವರು ಮತ್ತು ನಿಗದಿತ ಪ್ರಯಾಣಕ್ಕಾಗಿ ಈ ಸೇವೆಗಳನ್ನು ಅವಲಂಬಿಸಿರುವ ರೋಗಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಲಾಗಿದ್ದು, ಸಮಸ್ಯೆ ಶೀಘ್ರ ಪರಿಹರಿಸುವಂತೆ ಮನವಿ ಮಾಡಲಾಗಿದೆ.
ರೈಲು ಸಂಖ್ಯೆ 16511/12 SMVT ಬೆಂಗಳೂರು - ಕಣ್ಣೂರು ಎಕ್ಸ್ಪ್ರೆಸ್ ಮತ್ತು ರೈಲು ಸಂಖ್ಯೆ 16585/86 SMVT ಬೆಂಗಳೂರು - ಮುರುಡೇಶ್ವರ ಎಕ್ಸ್ಪ್ರೆಸ್ ಹೆಚ್ಚಿನ ದಿನಗಳಲ್ಲಿ ಸರಾಸರಿ ಮೂವತ್ತು ನಿಮಿಷಗಳಿಗಿಂತ ಹೆಚ್ಚು ವಿಳಂಬದೊಂದಿಗೆ ಚಲಿಸುತ್ತಿವೆ. ಆದರೆ ಹಲವಾರು ಸಂದರ್ಭಗಳಲ್ಲಿ ಈ ರೈಲು ಮಂಗಳೂರು ತಲುಪುವ ಸಮಯಕ್ಕೆ ಒಂದು ಗಂಟೆಯನ್ನು ದಾಟಿದೆ. ಇನ್ನು ರೈಲು ಸಂಖ್ಯೆ 17377/78 ವಿಜಯಪುರ - ಮಂಗಳೂರು ಎಕ್ಸ್ಪ್ರೆಸ್ ಸಹ ಇದರಿಂದ ಹೊರತಾಗಿಲ್ಲ. ತಾಂತ್ರಿಕ ಕಾರಣಕ್ಕೆ ಅಥವಾ ಅಪರೂಪಕ್ಕೆ ರೈಲು ವಿಳಂಬವಾಗಬಹುದು. ಆದರೆ ನಿತ್ಯವೂ ಈ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವಿಳಂಬವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ.
Mangaluru–Bengaluru Train Delays: Passengers Continue to Suffer Daily
— Dakshina Kannada District Railway Users (@dkdistrictrail) January 6, 2026
Mangaluru–Bengaluru train delays have sadly become a routine rather than an exception, causing daily inconvenience to thousands of passengers. A news report published in Udayavani paper on January 5 clearly… pic.twitter.com/cSOMsuFosc
ಇಲ್ಲಿನ ಶಿರಾಡಿ ಘಾಟ್ ವಿಭಾಗದಲ್ಲಿ ಕ್ರಾಸಿಂಗ್ ವ್ಯವಸ್ಥೆಯಲ್ಲಿನ ಬದಲಾವಣೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಈ ಹಿಂದೆ, ರೈಲು ಸಂಖ್ಯೆ 16595/96 ಕೆಎಸ್ಆರ್ ಬೆಂಗಳೂರು-ಕಾರವಾರ ಪಂಚಗಂಗಾ ಎಕ್ಸ್ಪ್ರೆಸ್ನ ಕ್ರಾಸಿಂಗ್ ಅನ್ನು ಶಿರಿಬಾಗಿಲು ಪ್ರದೇಶದಲ್ಲಿ ನಿರ್ವಹಿಸಲಾಗುತ್ತಿತ್ತು. ಆದರೆ ಈಗ ಅದನ್ನು ಸುಬ್ರಹ್ಮಣ್ಯ ರಸ್ತೆಗೆ ಸ್ಥಳಾಂತರಿಸಲಾಗಿದೆ. ಈ ಬದಲಾವಣೆಯು ಘಾಟ್ ವಿಭಾಗದಲ್ಲಿ ರೈಲುಗಳ ಸುಗಮ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ ಮತ್ತು ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ಪ್ಯಾಸೆಂಜರ್ ಮತ್ತು ವಿಜಯಪುರ - ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ಸೇರಿದಂತೆ ಹಲವಾರು ಸೇವೆಗಳ ಮೇಲೆ ಪರಿಣಾಮ ಬೀರಿದೆ. ಒಂದು ರೈಲು ವಿಳಂಬವಾದಾಗ, ಅದರ ಪರಿಣಾಮವು ಇಡೀ ವಿಭಾಗದಲ್ಲಿ ಮೇಲಾಗುತ್ತಿದೆ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಕಳೆದ ಒಂದು ವಾರದ ಅವಧಿಯಲ್ಲಿ ನಿರ್ದಿಷ್ಟ ಸಮಯಕ್ಕೆ ರೈಲು ಬಂದಿಲ್ಲ. ರೈಲು ಸಂಖ್ಯೆ 16511 SMVT ಬೆಂಗಳೂರು - ಕಣ್ಣೂರು ಎಕ್ಸ್ಪ್ರೆಸ್ ನಿಯಮಿತವಾಗಿ ಸುಮಾರು ನಲವತ್ತರಿಂದ ಐವತ್ತು ನಿಮಿಷಗಳ ವಿಳಂಬದೊಂದಿಗೆ ಮಂಗಳೂರು ಸೆಂಟ್ರಲ್ಗೆ ತಲುಪುತ್ತಿದೆ. ಕಬಕ ಪುತ್ತೂರಿನಂತಹ ನಿಲ್ದಾಣಗಳಲ್ಲಿ ಇನ್ನೂ ಹೆಚ್ಚಿನ ವಿಳಂಬವಾಗುತ್ತಿದೆ.
ರಿಟರ್ನ್ ಸೇವೆ, ರೈಲು ಸಂಖ್ಯೆ 16512, ಹೆಚ್ಚಿನ ದಿನಗಳಲ್ಲಿ ವಿಶೇಷವಾಗಿ ಸುಬ್ರಹ್ಮಣ್ಯ ರಸ್ತೆ ಮತ್ತು ಹಾಸನದ ನಂತರ ಮೂವತ್ತರಿಂದ ನಲವತ್ತೈದು ನಿಮಿಷಗಳ ವಿಳಂಬವಾಗಿ ಬರುತ್ತಿದೆ ಎಂದು ಹೇಳಲಾಗಿದೆ. ಈ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು ಎಂದು ಆಗ್ರಹಿಸಲಾಗಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications