ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ.20ರ ತನಕ ಬೆಂಗಳೂರು-ಮಂಗಳೂರು ರೈಲು ಸಂಚಾರವಿಲ್ಲ

|
Google Oneindia Kannada News

Recommended Video

Mangaluru : ಬೆಂಗಳೂರು ನಡುವಿನ ರೈಲು ಸಂಚಾರ ಸೆಪ್ಟೆಂಬರ್ 20ರ ತನಕ ಬಂದ್ | Oneindia Kannada

ಬೆಂಗಳೂರು, ಸೆಪ್ಟೆಂಬರ್ 13 : ಮಂಗಳೂರು-ಬೆಂಗಳೂರು ರೈಲು ಸೇವೆಯನ್ನು ಸೆ.20ರ ತನಕ ನಿರ್ಬಂಧಿಸಲಾಗಿದೆ. ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಸಕಲೇಶಪುರ ಮತ್ತು ಸುಬ್ರಮಣ್ಯ ನಡುವೆ ರೈಲ್ವೆ ಹಳಿಯ ಮೇಲೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸಬೇಕಾದ ಕಾರಣ ರೈಲು ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಮೈಸೂರು ರೈಲ್ವೆ ವಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು-ಮಂಗಳೂರು: ತಿಂಗಳು ರೈಲು ಸಂಚಾರ ಸ್ಥಗಿತ ಸಂಭವ ಬೆಂಗಳೂರು-ಮಂಗಳೂರು: ತಿಂಗಳು ರೈಲು ಸಂಚಾರ ಸ್ಥಗಿತ ಸಂಭವ

ಆಗಸ್ಟ್‌ ತಿಂಗಳಿನಲ್ಲಿ ಸುರಿದ ಮಳೆ, ಗುಡ್ಡ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ರೈಲು ಮಾರ್ಗಕ್ಕೆ ಹಾನಿಯಾಗಿತ್ತು. ಸಕಲೇಶಪುರ-ಸುಬ್ರಮಣ್ಯ ನಡುವಿನ 57 ಕಿ.ಮೀ.ಮಾರ್ಗದಲ್ಲಿ 67 ಕಡೆ ಮಣ್ಣು ಮತ್ತು ಕಲ್ಲು ಕುಸಿದುಬಿದ್ದಿತ್ತು.

ಯಡಕುಮರಿ ರೈಲು ನಿಲ್ದಾಣದಲ್ಲಿ ಸಿಲುಕಿದ್ದ 16 ಸಿಬ್ಬಂದಿ ರಕ್ಷಣೆಯಡಕುಮರಿ ರೈಲು ನಿಲ್ದಾಣದಲ್ಲಿ ಸಿಲುಕಿದ್ದ 16 ಸಿಬ್ಬಂದಿ ರಕ್ಷಣೆ

Mangaluru-Bengaluru train service suspended till Sep 20

ಹಲವು ಕಡೆ ಮಣ್ಣು ಮತ್ತು ಕಲ್ಲುಗಳನ್ನು ತೆರವುಗೊಳಿಸಿ ರೈಲ್ವೆ ಹಳಿಗಳನ್ನು ಸರಿಪಡಿಸಲಾಗಿದೆ. ಇನ್ನೂ ಕೆಲವು ಕಡೆ ಮಣ್ಣನ್ನು ತೆರವುಗೊಳಿಸುವ ಕಾರ್ಯ ಬಾಕಿ ಇದೆ. ಆದ್ದರಿಂದ, ರೈಲ್ವೆ ಸಂಚಾರವನ್ನು ನಿರ್ಬಂಧಿಸಲಾಗಿದೆ.

21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ನೈಋತ್ಯ ರೈಲ್ವೆ21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ನೈಋತ್ಯ ರೈಲ್ವೆ

ಆಗಸ್ಟ್ 15ರ ಬಳಿಕ ಹಾಸನ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಮತ್ತು ಗುಡ್ಡ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ರೈಲು ಮಾರ್ಗಕ್ಕೆ ಹಾನಿಯಾಗಿತ್ತು. ಸಕಲೇಶಪುರದ ಯಡಕುಮರಿ ರೈಲ್ವೆ ನಿಲ್ದಾಣದಲ್ಲಿ ಹಳಿ ದುರಸ್ಥಿ ಮಾಡಲು ಹೋಗಿದ್ದ ಇಲಾಖೆಯ ನೌಕರರು ಸಿಕ್ಕಿಬಿದ್ದಿದ್ದರು.

ಗುಡ್ಡ ಕುಸಿತದ ಕಾರಣ ಬೆಂಗಳೂರು-ಮಂಗಳೂರು ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮಳೆ ಕಡಿಮೆಯಾಗಿದ್ದು, ಮಣ್ಣನ್ನು ತೆರವುಗೊಳಿಸಲಾಗುತ್ತಿದೆ.

English summary
In a press release Railway Division Mysuru said that Mangaluru-Bengaluru train services will remain suspended till September 20, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X