ಮಂಗಳೂರು ಕುಕ್ಕರ್ ಬ್ಲಾಸ್ಟ್ ಕೇಸ್: ತನಿಖೆಯಾಗದೇ ಪ್ರಯಾಣಿಕನನ್ನು ಭಯೋತ್ಪಾದಕ ಎನ್ನುವುದೇ?
ಮಂಗಳೂರು, ಡಿಸೆಂಬರ್ 15: ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿರುವುದರ ಬಗ್ಗೆ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಫೋಟ ಸಂಭವಿಸಿದ ತಕ್ಷಣವೇ ರಾಷ್ಟ್ರವ್ಯಾಪಿ ಸುದ್ದಿಯಾಯಿತು, ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆಯನ್ನು ವಹಿಸಿಕೊಂಡಿತು. ಆದರೆ ಘಟನೆಯ ಬಗ್ಗೆ ತನಿಖೆ ನಡೆಸದೆ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದ ಪ್ರಯಾಣಿಕನನ್ನು "ಭಯೋತ್ಪಾದಕ" ಎಂದು ಕರೆದಿರುವ ಬಗ್ಗೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
"ಈ ಭಯೋತ್ಪಾದಕರು ಯಾರು? ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದರ ಬಗ್ಗೆ ತನಿಖೆಯಿಲ್ಲದೆ ಅವರು ಒಬ್ಬರನ್ನು ಭಯೋತ್ಪಾದಕರೆಂದು ಹೇಗೆ ಕರೆಯುತ್ತಾರೆ?, ಒಂದು ವೇಳೆ ವಿವರವಾಗಿ ಅವರು ಮಾಹಿತಿಯನ್ನು ಹೋಗಿದ್ದರೆ ನಮಗೆ ತಿಳಿಯುತ್ತದೆ. ಇದು ಮುಂಬೈ, ದೆಹಲಿ, ಪುಲ್ವಾಮಾದಲ್ಲಿ ನಡೆದಂತಹ ಭಯೋತ್ಪಾದಕ ಕೃತ್ಯವೇ?'' ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಈ ಬಾಂಬ್ ಸ್ಫೋಟವನ್ನು "ಬೇರೆ ಉದ್ದೇಶದಲ್ಲಿ ಯೋಜಿಸಲಾಗಿದೆ" ಎಂದು ಕಾಂಗ್ರೆಸ್ ನಾಯಕ ವಾದಿಸಿದರು.

ಬಾಂಬ್ ಸ್ಫೋಟ ಪ್ರಕರಣಕ್ಕೆ ಬೇರೆ ಬಣ್ಣ:
ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೆಲವರು ತಪ್ಪು ಮಾಡಿರಬಹುದು. ಆದರೆ ಇದನ್ನು ಬೇರೆ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಬಿಜೆಪಿಯು ಈ ಘಟನೆಯನ್ನು ಮತ ಸೆಳೆಯಲು ಬಳಸಿಕೊಳ್ಳುತ್ತಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದರು. ಬಿಜೆಪಿಯವರು ಮತ ಸೆಳೆಯಲು ಈ ರೀತಿ ಮಾಡುತ್ತಿದ್ದಾರೆ. ಇದು ಹೆಚ್ಚು ಮತ ಗಳಿಸುವ ಅವರ ತಂತ್ರವಷ್ಟೇ. ಇಂತಹ ಪ್ರಯೋಗವನ್ನು ಯಾರೂ ಮಾಡಿಲ್ಲ, ಇದು ದೇಶದ ಇತಿಹಾಸಕ್ಕೆ ನಾಚಿಕೆಗೇಡು ಎಂದು ಡಿಕೆಶಿ ಹೇಳಿದರು.
ಡಿಕೆಶಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ:
ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದ ಹೇಳಿಕೆಗೆ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ವಕ್ತಾರ ಎಸ್ ಪ್ರಕಾಶ್, ಕಾಂಗ್ರೆಸ್ ನಾಯಕ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. "ಭಯೋತ್ಪಾದಕರು ಯಾರು ಎಂಬುದನ್ನು ಪೊಲೀಸರು ತನಿಖೆಯ ನಂತರ ನಿರ್ಧರಿಸುತ್ತಾರೆ. ಇಷ್ಟು ವರ್ಷಗಳ ಕಾಲ ಸಚಿವರಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಮೂಲಭೂತವಾದ ಗೊತ್ತಿಲ್ಲದಿದ್ದರೆ ಅದು ತುಂಬಾ ದುರದೃಷ್ಟಕರ ಎಂದರು.
ಭಯೋತ್ಪಾದನಾ ಚಟುವಟಿಕೆ ಆರೋಪಿಗಳ ಬೆಂಬಲಕ್ಕೆ ಬರುವುದು ತುಂಬಾ ಅಪಾಯಕಾರಿ. ಅವರು ಕರ್ನಾಟಕದ ಜನರ ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ. ಅವರ ಅಸಡ್ಡೆ ಹೇಳಿಕೆಗೆ ಅವರು ಕ್ಷಮೆಯಾಚಿಸಬೇಕು' ಎಂದು ಬಿಜೆಪಿ ವಕ್ತಾರ ಎಸ್ ಪ್ರಕಾಶ್ ಹೇಳಿದರು.












Click it and Unblock the Notifications