ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​​ಗು, ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇದೆಯೇ?: ಸಿದ್ದರಾಮಯ್ಯ ಏನಂದ್ರು?

ಮೈಸೂರು, ಮಾರ್ಚ್ 02: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್​​ಗು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್​​ಗೂ ಸಾಮ್ಯತೆ ಇಲ್ಲ. ಮಂಗಳೂರಿನಲ್ಲಿ ಕುಕ್ಕರನಲ್ಲಿ ಆದ ಬ್ಲಾಸ್ಟ್, ಬೆಂಗಳೂರಿನಲ್ಲಿ ಯಾವ ಕುಕ್ಕರ್​​ನಲ್ಲೂ ಬ್ಲಾಸ್ಟ್ ಆಗಿಲ್ಲ. ತನಿಖೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ನಿವಾಸದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ. ಸ್ಫೋಟವಾಗಿರುವುದು ನಿಜ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪಮುಖ್ಯಮಂತ್ರಿ , ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ನಾನೂ ಕೂಡ ಸ್ಥಳಕ್ಕೆ ತೆರಳಲಿದ್ದೇನೆ ಎಂದರು.

Mangaluru Cooker Bomb Blast And Bengaluru Rameshwaram Cafe Bomb Blast Not Same Says CM Siddaramaiah

ಅಲ್ಪಸಂಖ್ಯಾತರ ತುಷ್ಟೀಕರಣದಿಂದಾಗಿ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂದು ಬಿಜೆಪಿ ನಾಯಕರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ರಾಜಕೀಯವಾದ ಹೇಳಿಕೆ ನೀಡಿದ್ದಾರೆ. ಅವರ ಕಾಲದಲ್ಲಿಯೂ ಬಾಂಬ್ ಸ್ಪೋಟವಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟವಾದಾಗ ಏನು ಮಾಡಿದ್ದರು? ಆಗಲೂ ತುಷ್ಟೀಕರಣದಿಂದಾಗಿ ಆಗಿತ್ತೇ ಎಂದು ಪ್ರಶ್ನಿಸಿದರು. ಸ್ಪೋಟದ ಘಟನೆಯನ್ನು ನಾನು ಖಂಡಿಸುತ್ತೇನೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದರು. ಭಯೋತ್ಪಾದಕ ಕೃತ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿ ತನಿಖೆ ಇನ್ನೂ ನಡೆಯುತ್ತಿದೆ ಎಂದರು.

ವಿಧಾನ ಸೌಧದ ಪ್ರಕರಣ ಕುರಿತು ಎಫ್.ಎಸ್.ಎಲ್ ವರದಿಯನ್ನು ಸರ್ಕಾರ ಬಹಿರಂಗ ಮಾಡುತ್ತಿಲ್ಲ. ಸತ್ಯವನ್ನು ತಿರುಚುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ಇಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಯೇ ತೀರುತ್ತದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+