ಮಂಗಳೂರು, ಹುಬ್ಬಳ್ಳಿಯಲ್ಲೂ ಏಪ್ರಿಲ್ 1ರಿಂದ ಬಿಪಿಒ
ನವದೆಹಲಿ, ಜ. 5: ದೇಶದ ಸಣ್ಣ ಸಣ್ಣ ನಗರಗಳಲ್ಲೂ ಬಿಪಿಒ ಆರಂಭಿಸುವ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಸಿದ್ಧಪಡಿಸಿದ್ದು, ಮಂಗಳೂರು, ಮೈಸೂರು ಹುಬ್ಬಳ್ಳಿ ಸೇರಿದಂತೆ ಕರ್ನಾಟಕದ ಚಿಕ್ಕ ನಗರಗಳಲ್ಲೂ ಬಿಪಿಒ ಆರಂಭ ಮಾಡಲಾಗುವುದು.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ದೂರಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ ಏಪ್ರಿಲ್ 1 ರಿಂದ ಆರಂಭಗೊಳ್ಳಲಿರುವ ಹೊಸ ಆರ್ಥಿಕ ವರ್ಷದ ವೇಳೆಗೆ ಸಣ್ಣ ನಗರಗಳಲ್ಲಿ ಬಿಪಿಒಗಳು ಕಾರ್ಯಾರಂಭ ಮಾಡಲಿವೆ ಎಂದು ತಿಳಿಸಿದ್ದಾರೆ.[2015ರ ಆಗಸ್ಟ್ ಒಳಗೆ ದೇಶದ ಎಲ್ಲ ಗ್ರಾಮಗಳಲ್ಲಿ ಬ್ಯಾಂಕ್]

ಕರ್ನಾಟಕ, ಉತ್ತರ ಪ್ರದೇಶ, ಬಿಹಾರ , ಒರಿಸ್ಸಾ ಸೇರಿದಂತೆ ಹಲವು ರಾಜ್ಯಗಳ ಚಿಕ್ಕ ಚಿಕ್ಕ ನಗರಗಳಲ್ಲಿ ಬಿಪಿಒ ಆರಂಭಕ್ಕೆ ಮಾರ್ಗಸೂಚಿ ತಯಾರು ಮಾಡಲಾಗುತ್ತಿದೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದ್ದು ಮಹಾನಗರಗಳಿಗೆ ವಲಸೆ ಹೋಗುತ್ತಿರುವ ಯುವಕರ ಸಂಖ್ಯೆ ಕಡಿಮೆ ಮಾಡಬಹುದು ಎಂದು ಪ್ರಸಾದ್ ಹೇಳಿದ್ದಾರೆ.
ಎಲ್ಲೆಲ್ಲಿ ಬಿಪಿಒ?
ಮಂಗಳೂರು, ಹುಬ್ಬಳ್ಳಿ, ತಿರುಚಿರಾಪಳ್ಳಿ, ವಡೋದರ ಮತ್ತು ವಿಶಾಖಪಟ್ಟಣದಲ್ಲಿ ಬಿಪಿಒ ಆರಂಭಕ್ಕೆ ಉತ್ತಮ ಅವಕಾಶವಿದೆ. ಜತೆಗೆ ಮೈಸೂರು, ಕಾನ್ಪುರ, ನಾಸಿಕ್, ಪುದುಚೇರಿ, ಸೇಲಂಗಳಲ್ಲೂ ಆಂಗ್ಲ ಭಾಷೆ ಬಲ್ಲವರಿದ್ದು ಬಿಪಿಒ ಮೂಲಕ ಉದ್ಯೋಗ ಕಲ್ಪಿಸಿಕೊಡಬಹುದು. ಬಿಪಿಒಗಳಿಗೆ ಮೂಲ ಸೌಕರ್ಯದ ಜತೆಗೆ 24 ಗಂಟೆ ವಿದ್ಯುತ್ ನೀಡುವ ಕುರಿತು ಗಮನ ಹರಿಸಲಾಗುವುದು ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಬಿಪಿಒ ಎಂದರೇನು?
ಬಿಸಿನಸ್ ಪ್ರೊಸೆಸ್ ಔಟ್ ಸೊರ್ಸಿಂಗ್ ನ್ನು ಬಿಪಿಒ ಎಂದು ಕರೆಯಲಾಗುತ್ತದೆ. ಅಂದರೆ ಇವು ಒಂದು ರೀತಿ ಕಾಲ್ ಸೆಂಟರ್ ಗಳ ರೀತಿಯಯೇ ಕೆಲಸ ನಿರ್ವಹಿಸುತ್ತವೆ. ಸರಳವಾಗಿ ಹೇಳುವುದಾದರೆ ವಿವಿಧ ಕಂಪನಿಗಳ ಗ್ರಾಹಕರ ಸಮಸ್ಯೆ ಬಗೆಹರಿಸುವ ಗುತ್ತಿಗೆ ಪಡೆದು ಸಂಭಾಷಣೆ ಮೂಲಕ ಪರಿಹಾರ ಕಲ್ಪಿಸಿಕೊಡುವುದೇ ಬಿಪಿಒದ ಪ್ರಮುಖ ಕೆಲಸ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications