ಮಂಗಳೂರು, ಹುಬ್ಬಳ್ಳಿಯಲ್ಲೂ ಏಪ್ರಿಲ್ 1ರಿಂದ ಬಿಪಿಒ
ನವದೆಹಲಿ, ಜ. 5: ದೇಶದ ಸಣ್ಣ ಸಣ್ಣ ನಗರಗಳಲ್ಲೂ ಬಿಪಿಒ ಆರಂಭಿಸುವ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಸಿದ್ಧಪಡಿಸಿದ್ದು, ಮಂಗಳೂರು, ಮೈಸೂರು ಹುಬ್ಬಳ್ಳಿ ಸೇರಿದಂತೆ ಕರ್ನಾಟಕದ ಚಿಕ್ಕ ನಗರಗಳಲ್ಲೂ ಬಿಪಿಒ ಆರಂಭ ಮಾಡಲಾಗುವುದು.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ದೂರಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ ಏಪ್ರಿಲ್ 1 ರಿಂದ ಆರಂಭಗೊಳ್ಳಲಿರುವ ಹೊಸ ಆರ್ಥಿಕ ವರ್ಷದ ವೇಳೆಗೆ ಸಣ್ಣ ನಗರಗಳಲ್ಲಿ ಬಿಪಿಒಗಳು ಕಾರ್ಯಾರಂಭ ಮಾಡಲಿವೆ ಎಂದು ತಿಳಿಸಿದ್ದಾರೆ.[2015ರ ಆಗಸ್ಟ್ ಒಳಗೆ ದೇಶದ ಎಲ್ಲ ಗ್ರಾಮಗಳಲ್ಲಿ ಬ್ಯಾಂಕ್]

ಕರ್ನಾಟಕ, ಉತ್ತರ ಪ್ರದೇಶ, ಬಿಹಾರ , ಒರಿಸ್ಸಾ ಸೇರಿದಂತೆ ಹಲವು ರಾಜ್ಯಗಳ ಚಿಕ್ಕ ಚಿಕ್ಕ ನಗರಗಳಲ್ಲಿ ಬಿಪಿಒ ಆರಂಭಕ್ಕೆ ಮಾರ್ಗಸೂಚಿ ತಯಾರು ಮಾಡಲಾಗುತ್ತಿದೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದ್ದು ಮಹಾನಗರಗಳಿಗೆ ವಲಸೆ ಹೋಗುತ್ತಿರುವ ಯುವಕರ ಸಂಖ್ಯೆ ಕಡಿಮೆ ಮಾಡಬಹುದು ಎಂದು ಪ್ರಸಾದ್ ಹೇಳಿದ್ದಾರೆ.
ಎಲ್ಲೆಲ್ಲಿ ಬಿಪಿಒ?
ಮಂಗಳೂರು, ಹುಬ್ಬಳ್ಳಿ, ತಿರುಚಿರಾಪಳ್ಳಿ, ವಡೋದರ ಮತ್ತು ವಿಶಾಖಪಟ್ಟಣದಲ್ಲಿ ಬಿಪಿಒ ಆರಂಭಕ್ಕೆ ಉತ್ತಮ ಅವಕಾಶವಿದೆ. ಜತೆಗೆ ಮೈಸೂರು, ಕಾನ್ಪುರ, ನಾಸಿಕ್, ಪುದುಚೇರಿ, ಸೇಲಂಗಳಲ್ಲೂ ಆಂಗ್ಲ ಭಾಷೆ ಬಲ್ಲವರಿದ್ದು ಬಿಪಿಒ ಮೂಲಕ ಉದ್ಯೋಗ ಕಲ್ಪಿಸಿಕೊಡಬಹುದು. ಬಿಪಿಒಗಳಿಗೆ ಮೂಲ ಸೌಕರ್ಯದ ಜತೆಗೆ 24 ಗಂಟೆ ವಿದ್ಯುತ್ ನೀಡುವ ಕುರಿತು ಗಮನ ಹರಿಸಲಾಗುವುದು ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಬಿಪಿಒ ಎಂದರೇನು?
ಬಿಸಿನಸ್ ಪ್ರೊಸೆಸ್ ಔಟ್ ಸೊರ್ಸಿಂಗ್ ನ್ನು ಬಿಪಿಒ ಎಂದು ಕರೆಯಲಾಗುತ್ತದೆ. ಅಂದರೆ ಇವು ಒಂದು ರೀತಿ ಕಾಲ್ ಸೆಂಟರ್ ಗಳ ರೀತಿಯಯೇ ಕೆಲಸ ನಿರ್ವಹಿಸುತ್ತವೆ. ಸರಳವಾಗಿ ಹೇಳುವುದಾದರೆ ವಿವಿಧ ಕಂಪನಿಗಳ ಗ್ರಾಹಕರ ಸಮಸ್ಯೆ ಬಗೆಹರಿಸುವ ಗುತ್ತಿಗೆ ಪಡೆದು ಸಂಭಾಷಣೆ ಮೂಲಕ ಪರಿಹಾರ ಕಲ್ಪಿಸಿಕೊಡುವುದೇ ಬಿಪಿಒದ ಪ್ರಮುಖ ಕೆಲಸ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications