ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ
ಮಂಗಳೂರು: ಕರ್ನಾಟಕ ಕರಾವಳಿಗೆ ಬೆಂಗಳೂರು ಭಾಗದಿಂದ ರೈಲು ಸೇವೆ ಸುಧಾರಿಸುವಲ್ಲಿ ರೈಲ್ವೆ ಇಲಾಖೆ ಮುಂದಾಗಿದ್ದರ ಬೆನ್ನಲ್ಲೆ ತಡರಾತ್ರಿ ವಿಮಾನಯಾನ ಸಂಚಾರವು ಲಭಿಸುತ್ತಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುವವರಿಗೆ, ಇಲ್ಲವೇ ವಿದೇಶಕ್ಕೆ ತೆರಳುವ ಕರಾವಳಿ ಮಂದಿಗೆ ಬಂಪರ್ ಗುಡ್ ನ್ಯೂಸ್ ಸಿಕ್ಕಿದೆ. ಶೀಘ್ರವೇ ಬೆಂಗಳೂರು-ಮಂಗಳೂರು ಮಧ್ಯೆ ತಡರಾತ್ರಿಯು ನಿತ್ಯ ವಿಮಾನ ಸೇವೆ ಆರಂಭವಾಗಲಿದೆ.
ಹೌದು, ಇದೇ ತಿಂಗಳು ಮಾರ್ಚ್ 6 ರಿಂದ ಬೆಂಗಳೂರು-ಮಂಗಳೂರು ಮಧ್ಯೆ ಏರ್ ಇಂಡಿಯಾ ಎಕ್ಸ್ಪ್ರೆಸ್ ತಡರಾತ್ರಿ ದೈನಂದಿನ ವಿಮಾನ ಸಂಚಾರ ಆರಂಭಿಸುವುದಾಗಿ ಘೋಷಿಸಿದೆ. ವಿಶೇಷ ಸಂದರ್ಭಗಳಲ್ಲಿ ಅಲ್ಲದೆ ನಿತ್ಯವು ಎರಡು ನಗರಗಳ ಮಧ್ಯೆ ಸಂಪರ್ಕ ಸಾಧಿಸುವ ವಿಮಾನವಾಗಿದೆ. ಈ ಮೂಲಕ ಏರ್ ಇಂಡಿಯಾ ವೈಮಾನಿಕ ಸಂಸ್ಥೆ ಕರಾವಳಿ ಮಂದಿಗೆ ಸಿಹಿ ಸುದ್ದಿ ನೀಡಿದೆ.

ವಿಮಾನ ಸೇವೆಯ ವೇಳಾಪಟ್ಟಿ
ಏರ್ ಇಂಡಿಯಾ ವಿಮಾನವಾದ ಐಎಕ್ಸ್ 5971 ಬೆಂಗಳೂರಿನಿಂದ ರಾತ್ರಿ 9:25ಕ್ಕೆ ಹೊರಟು ರಾತ್ರಿ 10:40ಕ್ಕೆ ಮಂಗಳೂರಿಗೆ ಏರ್ಪೋರ್ಟ್ ತಲುಪುತ್ತದೆ. ಮರಳಿ ಅದೇ ದಿಕ್ಕಿನಲ್ಲಿ ಐಎಕ್ಸ್ 5972 ವಿಮಾನವು ಮಂಗಳೂರಿನಿಂದ ರಾತ್ರಿ 11:10ಗಂಟೆಗೆ ಹೊರಟು ರಾತ್ರಿ 12:20ಕ್ಕೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಸೇರುತ್ತದೆ.
ಸೇವೆ ವಿಸ್ತರಣೆ ಸಾಧ್ಯತೆ
ಈ ವಿಮಾನ ಸಂಚಾರ ಸೇವೆಯು ಮಾರ್ಚ್ 28ರವರೆಗೆ ಇರಲಿದೆ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ಮಾಹಿತಿ ನೀಡಿದ್ದಾರೆ. ಏರ್ ಇಂಡಿಯಾ ಸಂಸ್ಥೆಯು ಹೊಸ ಲೇಟ್ ನೈಟ್ ಫ್ಲೈಟ್ ಸೇವೆ ಆರಂಭದಿಂದಾಗಿ ಸಾಕಷ್ಟು ವಿಮಾನ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಮುಖ್ಯವಾಗಿ ತುರ್ತು ಸಂದರ್ಭದಲ್ಲಿ, ಹಠಾತ್ ಹೊರಡುವ ಪ್ಲಾನ್ ಮಾಡುವವರಿಗೆ ಬಹಳ ಅನುಕೂಲವಾಗಲಿದೆ. ಸದ್ಯ ಈ ಸೇವೆ ದಿನನಿತ್ಯ ಕಾರ್ಯಚರಿಸುತ್ತದೆ ಎಂಬ ಮಾಹಿತಿ ಇದೆ. ಮಾರ್ಚ್ ನಂತರ ಸೇವೆ ಮುಂದುವರಿಸುವ ನಿರೀಕ್ಷೆ ಇದೆ.
ಟಿಕೆಟ್ ಬುಕ್ ಬುಕ್ಕಿಂಗ್ ಮಾಹಿತಿ
ಬೆಂಗಳೂರು -ಮಂಗಳೂರು ವಿಮಾನ ಸೇವೆ ಪಡೆಯಲಿಚ್ಛಿಸುವವರು ಟಿಕೆಟ್ ಬುಕ್ ಮಾಡಬೇಕೆಂದರೆ, ಏರ್ ಇಂಡಿಯಾ ಎಕ್ಸ್ಪ್ರೆಸ್ ಅಧಿಕೃತ ವೆಬ್ಸೈಟ್, ಮೊಬೈಲ್ ಅಪ್ಲಿಕೇಶನ್ ಅಥವಾ ಟ್ರಾವೆಲ್ ಏಜೆನ್ಸಿಗಳ ಮೂಲಕ ಮಾಡಬಹುದಾಗಿದೆ. ಮುಂಚಿತವಾಗಿ ಬುಕ್ ಮಾಡಿದರೆ ಟಿಕೆಟ್ ದರ ಕಡಿಮೆ ಆಗಬಹುದು. ಆವತ್ತೆ ಆ ದಿನದ ಪ್ರಯಾಣ ದುಬಾರಿ ಆಗಲಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications