ಪಹಲ್ಗಾಮ್ ಉಗ್ರರ ದಾಳಿ ಸಮರ್ಥಿಸಿಕೊಂಡ ಮಂಗಳೂರಿನ ಕಿಡಿಗೇಡಿ
ಮಂಗಳೂರು, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಇಬ್ಬರು ಕನ್ನಡಿಗರು ಸೇರಿದಂತೆ ಸುಮಾರು 28 ಪ್ರವಾಸಿಗರು ಉಗ್ರರ ದಾಳಿಗೆ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಿಂದ ಸಂಪೂರ್ಣ ದೇಶವೇ ತಲ್ಲಣಿಸಿ ಹೋಗಿದೆ. ದೇಶದ ಪ್ರತಿಯೊಬ್ಬರು ಕೂಡ ಉಗ್ರರ ವಿರುದ್ಧ ಪ್ರತಿಕಾರಕ್ಕೆ ಕಾಯುತ್ತಿರುವ ಸಂದರ್ಭದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡಿದ್ದಾನೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ಸಮರ್ಥಿಸಿಕೊಂಡು ಕಿಡಿಗೇಡಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ವಿಕೃತಿ ಮೆರೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈಗಾಗಲೇ ಈ ಕಿಡಿಗೇಡಿಯ ವಿರುದ್ಧ ದೂರು ದಾಖಲಾಗಿದ್ದು, ಪೋಸ್ಟ್ ಹಾಕಿದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ನಿಚ್ಚು ಮಂಗಳೂರು ಫೇಸ್ಬುಕ್ ಖಾತೆಯಲ್ಲಿ ಉಗ್ರರ ಕೃತ್ಯಕ್ಕೆ ಬೇರೆಯೇ ವ್ಯಾಖ್ಯಾನ ಮಾಡಲಾಗಿದೆ. 2023ರಲ್ಲಿ ಮಹಾರಾಷ್ಟದ ಪಾಲ್ಗರ್ನಲ್ಲಿ ಚೇತನ್ ಸಿಂಗ್ ಎನ್ನುವಾತ ನೀವು ಮುಸ್ಲಿಮರಾ ಅಂತಾ ಕೇಳಿ ಮೂವರು ಮುಸ್ಲಿಮರನ್ನು ಹತ್ಯೆ ಮಾಡಿರುವುದು ನೆನಪಿಸಿಕೊಳ್ಳಬೇಕು. ಅಂದು ಆರೋಪಿ ಚೇತನ್ ಸಿಂಗ್ ಎನ್ನುವಾತನಿಗೆ ಸಾರ್ವಜನಿಕವಾಗಿ ಹಗ್ಗ ಹಾಕಿದ್ದರೆ ಇಂದು ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ ಎಂದು ಕಾಶ್ಮೀರದಲ್ಲಿ ಉಗ್ರರು ಧರ್ಮ ಕೇಳಿ ಹತ್ಯೆ ಮಾಡಿರುವುದನ್ನು ಸಮರ್ಥನೆ ಮಾಡಿಕೊಂಡಿದ್ದಾನೆ.
ಕಿಡಿಗೇಡಿಯ ಈ ಪೋಸ್ ವೈರಲ್ ಆಗುತ್ತಿದ್ದಂತೆ ನಿಚ್ಚು ಮಂಗಳೂರು ಫೇಸ್ಬುಕ್ ಖಾತೆಯ ವಿರುದ್ಧ ಹಾಗೂ ಖಾತೆ ಹೊಂದಿರುವವರ ವಿರುದ್ಧ ಉಳ್ಳಾದ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ. ಈ ವಿವಾದಾತ್ಮಕ ಫೇಸ್ಬುಕ್ ಪೋಸ್ಟ್ ಸಂಬಂಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 192 ಮತ್ತು 353 (1) (ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಆ ಫೇಸ್ಬುಕ್ ಖಾತೆಯ ಡಿಪಿಯಲ್ಲಿರುವ ವ್ಯಕ್ತಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಪ್ಯಾಂಟ್ ಬಿಚ್ಚಿ ಚೆಕ್ ಮಾಡಿ ಕೊಂಡ ಉಗ್ರರು
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಅಟ್ಟಹಾಸ ಮೆರೆದಿರುವ ಉಗ್ರರು ಧರ್ಮ ಕೇಳಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಮೊದಲು ಪ್ರವಾಸಿಗರನ್ನು ಮಾತನಾಡಿಸಿದ ಉಗ್ರರು ಬಳಿಕ ಅವರ ಧರ್ಮಗಳನ್ನು ತಿಳಿದುಕೊಂಡು ದಾಳಿ ಮಾಡಲು ಆರಂಭಿಸಿದ್ದಾರೆ. ಇಬ್ಬರು ಸ್ಥಳೀಯರು ಸೇರಿ ಒಟ್ಟು 8 ಉಗ್ರರು ಎಕೆ-47 ಗನ್ ಬಳಸಿ ಓಪನ್ ಫೈರ್ ಮಾಡಿದ್ದಾರೆ. ಉಗ್ರರು ಧರ್ಮವನ್ನು ತಿಳಿದುಕೊಂಡು ದಾಳಿ ಮಾಡಿರುವುದು ತಿಳಿದು ಬಂದಿದ್ದು, ನೀವು ಹಿಂದೂಗಳಾ ಎಂದು ಕೇಳಿ ಪ್ರವಾಸಿಗರನ್ನು ಟಾರ್ಗೆಟ್ ಮಾಡಿದ್ದಾರೆ. ಹಿಂದೂ ಪ್ರವಾಸಿಗರನ್ನೇ ಕೊಲ್ಲುವ ಉದ್ದೇಶವಿಟ್ಟುಕೊಂಡು ದಾಳಿ ಮಾಡಿದ್ದ ಉಗ್ರರು, ಗುಂಡೇಟಿಗೂ ಮುನ್ನ ಪ್ರತಿಯೊಬ್ಬ ವ್ಯಕ್ತಿಯ ಧರ್ಮ ಕೇಳಿ ಬಳಿಕ ಪ್ಯಾಂಟ್ ಬಿಚ್ಚಿಸಿ ಧರ್ಮ ಚೆಕ್ ಮಾಡಿ ಕೊನೆಗೆ ಹತ್ಯೆ ಮಾಡಿದ್ದಾರೆ ಎನ್ನುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications