ಮಂಗಳೂರು ಕ್ಷೇತ್ರ: ಖಾದರ್ ಖದರ್ರು ಇಳಿಸುವುದೇ ಬಿಜೆಪಿ?
ಮಂಗಳೂರು, ಜನವರಿ 25: ಕರಾವಳಿಯ ರಾಜಕೀಯ ವಲಯ ಈಗಾಗಲೇ ಕಾವೇರಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಈಗಾಗಲೇ ಪ್ರಚಾರದ ಕಣಕ್ಕಿಳಿದಿವೆ. ಮುಂದಿನ ಚುನಾವಣಾ ಅಖಾಡಕ್ಕಿಳಿಯುವ ಅಭ್ಯರ್ಥಿಯಾರು? ಗೆಲುವಿನ ಸಾಧ್ಯತೆ ಎಷ್ಟು? ಎಂಬ ಲೆಕ್ಕಾಚಾರ ಆರಂಭವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಕುತೂಹಲ ಕೆರಳಿಸಿರುವ ಕ್ಷೇತ್ರ ಮಂಗಳೂರು ವಿಧಾನಸಭಾ ಕ್ಷೇತ್ರ. ಈ ಹಿಂದೆ ಉಳ್ಳಾಲ ವಿಧಾನಸಭಾ ಕ್ಷೇತ್ರ ಎಂದು ಗುರುತಿಸಿ ಕೊಂಡಿದ್ದ ಈ ಕ್ಷೇತ್ರ ಪುನರ್ ವಿಂಗಡಣೆಯ ಬಳಿಕ ಮಂಗಳೂರು ವಿಧಾನಸಭಾ ಕ್ಷೇತ್ರವಾಗಿ ಬದಲಾಗಿದೆ.
ದೇಶದ ಸ್ವಾತಂತ್ರ್ಯ ಹೋರಾಟ ಇತಿಹಾಸದಲ್ಲಿ ದೇಶದ ಪ್ರಥಮ ಹೋರಾಟಗಾರ್ತಿ ಎಂದೇ ಹೇಳಲಾಗುವ ವೀರರಾಣಿ ಅಬ್ಬಕ್ಕ ಆಡಳಿದ ಪ್ರದೇಶವನ್ನು ಈ ವಿಧಾನ ಸಭಾ ಕ್ಷೇತ್ರ ಒಳಗೊಂಡಿದೆ. 16 ನೇ ಶತಮಾನದಲ್ಲಿ ಉಳ್ಳಾಲ, ಅಬ್ಬಕ್ಕ ರಾಣಿಯ ರಾಜಧಾನಿಯಾಗಿತ್ತು. ಈ ಕ್ಷೇತ್ರಕ್ಕೆ ಐತಿಹಾಸಿಕ ಹಿನ್ನೆಲೆ ಒಂದೆಡೆಯಾದರೆ ಇನ್ನೊಂದೆಡೆ ವಿಶ್ವ ಪ್ರಸಿದ್ಧ ಸೈಯದ್ ಅಹಮ್ಮದ್ ಷರೀಫ ಮದನೀ ದರ್ಗಾ ಈ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ.

ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರೇ ನಿರ್ಣಾಯಕ ಮತದಾರರು. ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯು.ಟಿ.ಖಾದರ್ ಇಲ್ಲಿಯ ಶಾಸಕರಾಗಿದ್ದಾರೆ. ಹಿಂದಿನಿಂದಲೂ ಈ ಕ್ಷೇತ್ರ ಕಾಂಗ್ರೆಸ್ ನ ಭದ್ರ ಕೋಟೆ. 1994 ರಲ್ಲಿ ಒಂದು ಬಾರಿ ಮಾತ್ರ ಬಿಜೆಪಿ ಈ ಕ್ಷೇತ್ರ ಗೆದ್ದಿತ್ತು. ಆದರೆ ನಂತರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಚಂದ್ರಹಾಸ್ ಉಳ್ಳಾಲ್ ಅವರ ಎದುರು ಯು.ಟಿ.ಖಾದರ್ 29,111 ಮತಗಳ ಅಂತರದಿಂದ ಜಯಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಕೈ ಪಾಳಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮಂಗಳೂರು ವಿಧಾನಸಭಾ ಅತ್ಯಂತ ಸೇಫ್ ಕ್ಷೇತ್ರ.

ಕಾಂಗ್ರೆಸ್ ನಿಂದ ಇಲ್ಲಿ ಯು.ಟಿ.ಖಾದರ್ ಕಣಕ್ಕಿಳಿಯುವುದು ಖಚಿತವಾಗಿದೆ. ಆದರೆ ಬಿಜೆಪಿಗೆ ಇದು ಅತ್ಯಂತ ಕಠಿಣ ಕ್ಷೇತ್ರವಾದರೂ ಆಕಾಂಕ್ಷಿಗಳ ಸಂಖ್ಯೆಗೆ ಇಲ್ಲಿ ಬರವಿಲ್ಲ. ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯ ಉಪಾಧ್ಯಕ್ಷ ರಹೀಂ ಉಚ್ಚಿಲ್, ಬಿಜೆಪಿ ಯುವ ಮುಖಂಡ ಸಂತೋಷ್ ಕುಮಾರ್ ಬೋಳಿಯಾರ್, ಚಂದ್ರಹಾಸ ಉಚ್ಚಿಲ್ ಟಿಕೆಟ್ ಆಕಾಂಕ್ಷಿಗಳಾದರೆ ಕಳೆದ ಬಾರಿ ಸ್ಪರ್ಧಿಸಿದ್ದ ಚಂದ್ರಹಾಸ್ ಉಳ್ಳಾಲ್ ಕೂಡ ಈ ಬಾರಿಯೂ ಚುನಾವಣಾ ಅಖಾಡಕ್ಕೆ ಇಳಿಯಲು ಸಿದ್ದರಾಗಿದ್ದಾರೆ.

ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿರುವುದುಕೂಡ ಯು.ಟಿ.ಖಾದರ್ ಅವರಿಗೆ ವರದಾನವಾಗುವ ಸಾದ್ಯತೆ ಇದೆ. ಆದರೆ ಈ ಕ್ಷೇತ್ರದಲ್ಲಿ ಖಾದರ್ ಅವರಿಗೆ ಸೆಡ್ಡು ಹೊಡೆಯಲು ಬಿಜೆಪಿ ಯಾರನ್ನು ಅಖಾಡಕ್ಕೆ ಇಳಿಸಲಿದೆ ಎಂಬುದೇ ಕುತೂಹಲದ ಸಂಗತಿ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications