Manmohan Singh Death: 'ಮನಮೋಹನ್ ಸಿಂಗ್ ಕರ್ನಾಟಕದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ಕೊಟ್ಟವರು'
ಬೆಂಗಳೂರು, ಡಿಸೆಂಬರ್ 27: ಮನಮೋಹನ್ ಸಿಂಗ್ ಅವರು ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದವರು. ನರ್ಮ್ ಯೋಜನೆ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಮನಮೋಹನ್ ಸಿಂಗ್ ಅವರ ಕಾರ್ಯವೈಖರಿ ಕುರಿತು ಸುದ್ದಿಗಾರರ ಜೊತೆಗೆ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಬೆಂಗಳೂರಿನ ಅನೇಕ ಮೇಲ್ಸೇತುವೆಗಳು ಇವರು ನೀಡಿದ ಕೊಡುಗೆಗಳು. ಮನ ಮೋಹನ್ ಸಿಂಗ್ ಅವರ ಬಗ್ಗೆ ಮಾತನಾಡಲು ಒಂದು ದಿನವೂ ಸಾಲುವುದಿಲ್ಲ. ಅವರು ದೇಶದ ಎಲ್ಲಾ ವರ್ಗದ ಜನರಿಗೆ ಮರೆಯಲಾಗದ ಕೊಡುಗೆ ಕೊಟ್ಟಿದ್ದಾರೆ. ರೈತರ ಸಾಲಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತವರು ಎಂದು ಸ್ಮರಿಸಿದರು.

ಪ್ರತಿ ಕೆಲಸದಲ್ಲಿಯೂ ಗಾಂಭೀರ್ಯತೆ ಪ್ರಾಮಾಣಿಕತೆಯನ್ನು ಉಳಿಸಿಕೊಂಡಿದ್ದವರು ಮನಮೋಹನ್ ಸಿಂಗ್ ಅವರು. ಅವರ ಆಡಳಿತ ಕಾಲದಲ್ಲಿ ಬಡವರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ನರೇಗಾ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಉದ್ಯೋಗ ಗ್ಯಾರಂಟಿ ಸೃಷ್ಟಿ ಮಾಡಿದವರು. ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು ಸೇರಿದಂತೆ ಈ ದೇಶವನ್ನು ಗಟ್ಟಿಗೊಳಿಸುವ ಅನೇಕ ಕಾಯ್ದೆಗಳನ್ನು ನೀಡಿದವರು ಎಂದರು.
ಗಾಂಧಿ ಭಾರತ' ಕಾರ್ಯಕ್ರಮ ಅಂಗವಾಗಿ ಬೆಳಗಾವಿಯಲ್ಲಿ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ ಉಳಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಶುಕ್ರವಾರ ಬೆಳಿಗ್ಗೆ ಮಾಹಿತಿ ನೀಡಲಾಗುವುದು. ಸಾಕಷ್ಟು ಜನರು ದೀಪಾಲಂಕಾರವನ್ನು ವೀಕ್ಷಿಸುತ್ತಿದ್ದಾರೆ. ಈ ಕಾರಣಕ್ಕೆ ಉಳಿಸಿಕೊಳ್ಳುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಶುಕ್ರವಾರ ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಮಾಡಲಾಗುವುದು. ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಗೌರವ ಸಲ್ಲಿಸಬೇಕು. ಹೊರ ಊರುಗಳಿಂದ ಹೊರಡುವ ಅನೇಕ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕರುಗಳ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರುಗಳು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು ಎಂದು ತಿಳಿಸಿದರು. ನಾನು ಪಕ್ಷದ ಅಧ್ಯಕ್ಷನಾಗಿ ಮನಮೋಹನ್ ಸಿಂಗ್ ಅವರ ಅಂತಿಮ ದರ್ಶನದಲ್ಲಿ ಭಾಗವಹಿಸುವುದು ನಮ್ಮ ಕರ್ತವ್ಯ. ರಾಜ್ಯದ ಹಿರಿಯ ನಾಯಕರು ಸೇರಿದಂತೆ ಒಂದಷ್ಟು ಮಂದಿ ದೆಹಲಿಗೆ ತೆರಳಲಿದ್ದೇವೆ. ನಾವೆಲ್ಲರೂ ಅವರ ಮಾರ್ಗದರ್ಶನದಲ್ಲಿ ಹಾಗೂ ಕೈ ಕೆಳಗೆ ಕೆಲಸ ಮಾಡಿದವರು ಎಂದು ಹೇಳಿದರು.
ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಮನಮೋಹನ್ ಸಿಂಗ್ ಕೇವಲ ರಾಜಕಾರಣಿ ಅಲ್ಲ. ಅವರೊಬ್ಬ ದೇಶ ಹಾಗೂ ಈ ಜಗತ್ತು ಕಂಡ ಮಹಾನ್ ಆರ್ಥಿಕ ತಜ್ಞ. ಇಂದು ಭಾರತ ಜಾಗತಿಕ ಮಟ್ಟದಲ್ಲಿ ಆರ್ಥಿಕ ಪ್ರಗತಿ ಸಾಧಿಸಿದ್ದರೆ ಅದಕ್ಕೆ ಪ್ರಮುಖ ಕಾರಣ ಮನಮೋಹನ್ ಸಿಂಗ್ ಅವರ ಕ್ರಾಂತಿಕಾರಿ ನೀತಿಗಳು. ದೇಶ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾಗ ಜಾಗತೀಕರಣಕ್ಕೆ ಒಡ್ಡಿಕೊಳ್ಳುವ ಮೂಲಕ ದೇಶವನ್ನು ಕಾಪಾಡಿದ ಆಪದ್ಭಾಂದವ.
ಇದೇ ಕಾರಣಕ್ಕೆ ಸೋನಿಯಾ ಗಾಂಧಿ ಅವರು ತಮ್ಮ ಪಾಲಿಗೆ ಬಂದ ಪ್ರಧಾನಿ ಹುದ್ದೆಯನ್ನು ಮನಮೋಹನ್ ಸಿಂಗ್ ಅವರಿಗೆ ಬಿಟ್ಟುಕೊಟ್ಟರು. ಯುಪಿಎ ಮೊದಲ ಹಾಗೂ ಎರಡನೇ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ನರೇಗಾ, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು, ಆಹಾರ ಭದ್ರತಾ ಕಾಯ್ದೆಯಂತಹ ಕ್ರಾಂತಿಕಾರಿ ಯೋಜನೆಗಳನ್ನು ದೇಶದ ಜನತೆಗೆ ಕೊಟ್ಟಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications