Manmohan Singh: ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ, ಮನಮೋಹನ್ ಸಿಂಗ್ ನಿಧನ ಹಿನ್ನೆಲೆ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಸುದ್ದಿ ಇದೀಗ ಜಗತ್ತಿನಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ಅಭಿವೃದ್ಧಿಯ ಬೆನ್ನೆಲುಬಾಗಿ, ಆಧುನಿಕ ಭಾರತದ ಅಭಿವೃದ್ಧಿ ವಿಚಾರದಲ್ಲಿ ದೊಡ್ಡ ಕೊಡುಗೆ ನೀಡಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇನ್ನಿಲ್ಲ ಎಂಬ ಸುದ್ದಿ ಸಂಚಲನ ಸೃಷ್ಟಿ ಮಾಡಿದೆ. ಈ ಸುದ್ದಿ ತಿಳಿದು ಕರ್ನಾಟಕ ಸರ್ಕಾರ ಇದೀಗ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ಹೌದು, ಕರ್ನಾಟಕ ಸರ್ಕಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಜೊತೆಗೆ 7 ದಿನಗಳ ಕಾಲ ಶೋಕಾಚರಣೆಗೆ ಕೂಡ ಆದೇಶ ಹೊರಡಿಸಿದೆ. ಇದರ ಜೊತೆಗೆ ಸರ್ಕಾರದ ಎಲ್ಲಾ ಕಾರ್ಯಕ್ರಮಗಳು ಕೂಡ ರದ್ದಾಗಿದ್ದು, ಕೇಂದ್ರ ಸರ್ಕಾರ ಕೂಡ ಇದೇ ಆದೇಶ ನೀಡಿದೆ. ಭಾರತ ಕಂಡ ಶ್ರೇಷ್ಠ ನಾಯಕರ ಸಾಲಿಗೆ ಮನಮೋಹನ್ ಸಿಂಗ್ ಅವರು ಕೂಡ ಸೇರಿದ್ದು, ವಯೋ ಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು.

ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ
ಮನಮೋಹನ್ ಸಿಂಗ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ದಿಢೀರ್ ಇಂತಹ ಬೆಳವಣಿಗೆ ನಡೆದು ಹೋಗಿದೆ. ಮನಮೋಹನ್ ಸಿಂಗ್ ಅವರು ನಿನ್ನೆ ಸಂಜೆ ದಿಢೀರ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಮಯದಲ್ಲಿ ಸಾಕಷ್ಟು ಆತಂಕ ನಿರ್ಮಾಣ ಆಗಿತ್ತು. ತುರ್ತುನಿಗಾ ಘಟಕದಲ್ಲಿ ಸಂಜೆಯಿಂದಲೂ ಮನಮೋಹನ್ ಸಿಂಗ್ ಅವರಿಗೆ ಚಿಕಿತ್ಸೆಯನ್ನು ನೀಡಲಾಗಿತ್ತು.
ಆದ್ರೆ ಚಿಕಿತ್ಸೆ ಫಲಿಸದೆ ಮನಮೋಹನ್ ಸಿಂಗ್ ಅವರು ಕೊನೆಯುಸಿರೆಳೆದ ಮಾಹಿತಿ ಹೊರಬಿದ್ದು ಈ ಸುದ್ದಿ ಜಾಗತಿಕವಾಗಿ ಕೂಡ ಹಬ್ಬಿತ್ತು. ಜಾಗತಿಕ ಗಣ್ಯರಿಂದ ಕೂಡ ಇದೀಗ, ಸಂತಾಪ ಸೂಚಿಸಲಾಗಿದ್ದು, ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮತ್ತೊಂದು ಕಡೆ ಶೋಕಾಚರಣೆ ಇರುವ ಹಿನ್ನೆಲೆಯಲ್ಲಿ ಸರ್ಕಾರದ ಕಾರ್ಯಕ್ರಮಗಳು ಕೂಡ ರದ್ದಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಗೂ ಸಚಿವರು ದೆಹಲಿಗೆ ತೆರಳಿ ಅಂತಿಮ ನಮನ ಸಲ್ಲಿಸಲಿದ್ದಾರೆ.
ಭಾರತದ ಆರ್ಥಿಕತೆಗೆ ಭದ್ರ ಬುನಾದಿ!
1992ರ ಸಮಯದಲ್ಲೇ ಭಾರತದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿಕೊಟ್ಟಿದ್ದರು ಮನಮೋಹನ್ ಸಿಂಗ್ ಅವರು. ಭಾರತೀಯರ ಅಭಿವೃದ್ಧಿಗೆ ಶ್ರಮಿಸಿದ್ದ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2004 ರಿಂದ 2014ರ ತನಕ ಭಾರತದ ಪ್ರಧಾನಿಯಾಗಿ ಕೂಡ ಕೆಲಸ ಮಾಡಿ ಸಾಕಷ್ಟು ಸುಧಾರಣೆ ತಂದಿದ್ದರು. ಭಾರತದ ಆರ್ಥಿಕ ಸ್ಥಿತಿ ಕೂಡ, ಮನಮೋಹನ್ ಸಿಂಗ್ರ ಕಾಲದಲ್ಲಿ ಸಾಕಷ್ಟು ದೊಡ್ಡ ಸುಧಾರಣೆ ಕಂಡಿತ್ತು. ಇದೀಗ ಮನಮೋಹನ್ ಸಿಂಗ್ ಅವರ ಅಗಲಿಕೆಯು ಭಾರಿ ನೋವು ತರಿಸಿದ್ದು, ಭಾರತೀಯರು ಕಂಬನಿ ಮಿಡಿದಿದ್ದಾರೆ.
1947ರ ಸ್ವಾತಂತ್ರ್ಯಕ್ಕೂ ಮೊದಲು....
ಅದು 1932ರ ಸೆಪ್ಟೆಂಬರ್ 26, ಆ ದಿನ ಭಾರತದ ಆರ್ಥಿಕತೆಯ ಲೆಜೆಂಡ್ ಮನಮೋಹನ್ ಸಿಂಗ್ ಅವರು ಜನಿಸಿದ್ದರು. ಆಗಿನ್ನೂ ಭಾರತ & ಪಾಕಿಸ್ತಾನ ಬೇರೆ ಬೇರೆ ಆಗಿರಲಿಲ್ಲ. ಅಖಂಡ ಭಾರತ ಅಸ್ತಿತ್ವದಲ್ಲಿ ಇದ್ದ ಸಮಯದಲ್ಲಿ, ಪಾಕಿಸ್ತಾನದ ಈಗಿನ ಭೂಭಾಗ ಗಾಹ್ ಭಾಗದಲ್ಲಿ ಮನಮೋಹನ್ ಸಿಂಗ್ ಅವರು ಜನಿಸಿದ್ದರು.
ಹೀಗೆ ಪಾಕಿಸ್ತಾನದ ಈಗಿನ ಭೂಭಾಗದಲ್ಲಿ ಜನಿಸಿ ಮುಂದೆ ಭಾರತದ ಪ್ರಧಾನಿ ಕೂಡ ಆದರು. 1947ರ ಸಮಯದಲ್ಲಿ, ಭಾರತ & ಪಾಕಿಸ್ತಾನ ಎಂದು ದೇಶ ವಿಭಜನೆ ಮಾಡಿ ಹೊರಟ ಬ್ರಿಟೀಷರ ನಿರ್ಧಾರದ ಪರಿಣಾಮ ಕಿಚ್ಚು ಹೊತ್ತಿತ್ತು. ಹೀಗೆ ಪಾಕಿಸ್ತಾನದ ಭೂಭಾಗದಲ್ಲಿ ವಾಸವಿದ್ದ ಮನಮೋಹನ್ ಸಿಂಗ್ ಅವರ ಕುಟುಂಬವು, ಭಾರತಕ್ಕೆ ವಲಸೆ ಬಂದು ನೆಲಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications