ಮಂತ್ರಾಲಯ ಮುಳುಗಡೆ ವದಂತಿ: ಮಠದ ಸ್ಪಷ್ಟನೆ ಹೀಗಿದೆ
ಮಂತ್ರಾಲಯ, ಜುಲೈ.15: ತುಂಗಭದ್ರಾ ಜಲಾಶಯದಿಂದ ಹೊರಹರಿವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂತ್ರಾಲಯ ಹಾಗೂ ಕರ್ನೂಲು ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಂಪಿ, ರಾಯಚೂರು ಜಿಲ್ಲೆಯ ಭಾಗಗಳಲ್ಲಿ ನದಿಯ ತಗ್ಗು ಪ್ರದೇಶಗಳಿಗೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಭಾರತಾದ್ಯಂತ ಅಪಾರ ಭಕ್ತರನ್ನು ಹೊದಿರುವ ರಾಘವೇಂದ್ರ ಸ್ವಾಮಿ ಮಠವು ಮಳೆಗಾಲದಲ್ಲಿ ಪ್ರವಾಹ ಭೀತಿ ಎದುರಿಸುವುದು ಸಾಮಾನ್ಯವಾಗಿದೆ. ಗುರುವಾರ ತುಂಗಭದ್ರಾ ಜಲಾಶಯಕ್ಕೆ 1.04 ಲಕ್ಷ ಕ್ಯೂಸೆಕ್ ಒಳಹರಿವು ಕಂಡುಬಂದಿದೆ ಮತ್ತು ಅಣೆಕಟ್ಟಿನಲ್ಲಿ 104 ಟಿಎಂಸಿ-ಅಡಿ ಸಾಮರ್ಥ್ಯಕ್ಕೆ ಹೋಲಿಸಿದರೆ 98.804 ಟಿಎಂಸಿ-ಅಡಿ ನೀರು ಇತ್ತು.
ತುಂಗಭದ್ರ ನದಿ ನೀರಿನ ಪರಿಣಾಮ ಜಲಾನಯನ ಪ್ರದೇಶಗಳು ಹಾನಿಗೊಳಗಾಗುವುದು ಸಾಮಾನ್ಯ. ಹೀಗಾಗಿ ಮಂತ್ರಾಲಯ ಮುಳುಗಡೆಯಾಗಿಲ್ಲ ಎಂದು ಮಠವು ತಿಳಿಸಿದೆ. ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ಮುಂಗಾರು ಮಳೆಯು ಅಧಿಕ ಮಳೆಯನ್ನು ತರುತ್ತಿದ್ದು, ತುಂಗಭದ್ರ ನದಿ ಜಲನಯನ ಪ್ರದೇಶಗಳು ಭಾರಿ ಪರಿಣಾಮ ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಪರಿಹಾರ ಕಾರ್ಯಗಳು ನಡೆಯುತ್ತಿವೆ.

ಹೀಗಾಗಿ ಭಕ್ತಾಧಿಗಳು ಭಯಬೀಳುವ ಅಗತ್ಯವಿಲ್ಲ. ಖಂಡಿತವಾಗಿ ಅವರ ಸ್ವಾಮಿಯ ದರ್ಶನವನ್ನು ಪಡೆಯಬಹುದಾಗಿದ್ದು, ಯಾತ್ರೆಯ ಯೋಜನೆಯನ್ನು ಮುಂದುವರಿಸಬಹುದು. ಎಂದಿನಂತೆ ಸ್ವಾಮಿಯ ದರ್ಶನ, ಪ್ರಸಾದ ವ್ಯವಸ್ಥೆ ಹಾಗೂ ವಸತಿ ಸೌಲಭ್ಯಗಳು ಇರುತ್ತವೆ ಎಂದು ಮಠವು ಹೇಳಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ ಎಲ್ಲಾ 30 ಕ್ರೆಸ್ಟ್ ಗೇಟ್ಗಳನ್ನು ತೆಗೆಯಲಾಗಿದ್ದು, 1.14 ಲಕ್ಷ ಕ್ಯೂಸೆಕ್ ಹೊರ ಹರಿವನ್ನು ಕೆಳಕ್ಕೆ ಬಿಡಲಾಗುತ್ತಿದೆ.
ಗುರುವಾರ ತುಂಗಭದ್ರಾ ಜಲಾಶಯಕ್ಕೆ 1.04 ಲಕ್ಷ ಕ್ಯೂಸೆಕ್ ಒಳಹರಿವು ಕಂಡುಬಂದಿದೆ ಮತ್ತು ಅಣೆಕಟ್ಟಿನಲ್ಲಿ 104 ಟಿಎಂಸಿ-ಅಡಿ ಸಾಮರ್ಥ್ಯಕ್ಕೆ ಹೋಲಿಸಿದರೆ 98.804 ಟಿಎಂಸಿ-ಅಡಿ ನೀರು ಇತ್ತು.

ಹೆಚ್ಚುವರಿ ನೀರನ್ನು ನದಿಯ ಕಡೆಗೆ ಮತ್ತು ಎಚ್ಎಲ್ಎಂಸಿ ಮತ್ತು ಎಲ್ಎಲ್ಸಿ ಕಾಲುವೆಗಳಿಗೆ ಮತ್ತು ವಿದ್ಯುತ್ ಉತ್ಪಾದನಾ ಘಟಕಗಳಿಗೆ ಬಿಡಲಾಗುತ್ತದೆ. ಕಳೆದ ವರ್ಷದ ಜುಲೈ ತಿಂಗಳ ಎರಡನೇ ವಾರಕ್ಕಿಂತ 50ಟಿಎಂಸಿ ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ ಎಂದು ಅಣೆಕಟ್ಟೆ ಕಾರ್ಯದರ್ಶಿ ನಾಗಮೋಹನ್ ತಿಳಿಸಿದ್ದರು. ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಮಠಾಧೀಶ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿ ಗುರುವಾರ ಮಠದ ಆವರಣದ ಸಮೀಪವಿರುವ ತುಂಗಭದ್ರಾ ನದಿಗೆ ಪೂಜೆ ಸಲ್ಲಿಸಿದ್ದರು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications