ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ದೇವಾಲಯದಲ್ಲಿ ಹೊಸ ವಿವಾದ, ಕನ್ನಡಿಗರ ಆಕ್ರೋಶ!
Mantralaya Temple: ಶ್ರೀ ರಾಘವೇಂದ್ರ ಸ್ವಾಮಿ (ರಾಯರು) ಕನ್ನಡಿಗರ ಆರಾಧ್ಯ ದೈವರಾಗಿದ್ದಾರೆ. ಆದರೆ ಇದೀಗ ಮಂತ್ರಾಲಯದ ವಿಚಾರವಾಗಿ ಆಂಧ್ರಪ್ರದೇಶದ ತೆಲುಗು ಭಾಷಿಕರು ಅನವಶ್ಯಕವಾಗಿ ವಿವಾದವೊಂದನ್ನು ಸೃಷ್ಟಿ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ.
ರಾಯರನ್ನು ಕನ್ನಡಿಗರು ಸ್ಮರಿಸುವ ಹಾಗೂ ಭಕ್ತಿಯಿಂದ ಹೇಳುವ ಪ್ರಮುಖ ಸಾಲುಗಳಾದ "ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ರತಾಯಚ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ" ಎನ್ನುವ ವಿಶೇಷ ಸಾಲುಗಳ ಬಗ್ಗೆ ಆಂಧ್ರಪ್ರದೇಶದ ತೆಲುಗು ಭಾಷಿಕರು ಅನಗತ್ಯ ವಿವಾದವನ್ನು ಸೃಷ್ಟಿ ಮಾಡುತ್ತಿದ್ದಾರೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿ ಭಾಗದಲ್ಲಿರುವ ಮಂತ್ರಾಲಯ ದೇವಾಲದಯ ವಿಚಾರದಲ್ಲಿ ಇದೀಗ ಭಾಷಾ ವಿವಾದ ಸೃಷ್ಟಿಯಾಗಿದೆ. ಇದನ್ನು ತೆಲುಗು ಭಾಷಿಕರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಸೃಷ್ಟಿ ಮಾಡಿದ್ದು, ಇದಕ್ಕೆ ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

Andhra & Amaravati Updates ಎನ್ನುವ ಸೋಷಿಯಲ್ ಮೀಡಿಯಾ ಖಾತೆಯಿಂದ 📍ಮಂತ್ರಾಲಯ, ಆಂಧ್ರಪ್ರದೇಶ .. ಮಾನ್ಯ ಮುಖ್ಯಮಂತ್ರಿಗಳೇ, ಮಾನ್ಯ ಉಪಮುಖ್ಯಮಂತ್ರಿಗಳೇ, ತೆಲುಗು ಮಂಡಳಿ ಎಲ್ಲಿದೆ ಸರ್? ಮಂತ್ರಾಲಯ ಆಂಧ್ರಪ್ರದೇಶದ ಒಂದು ಭಾಗ, ಅಲ್ಲಿ ತೆಲುಗು ಭಾಷೆಯನ್ನು ಸಂಪೂರ್ಣವಾಗಿ ಹೇಗೆ ತ್ಯಜಿಸಬಹುದು? ಮೊದಲು, ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಕನ್ನಡದಲ್ಲಿ ಬರೆದಿರುವ "ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ರತಾಯಚ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ" ಎನ್ನುವ ಬರಹವಿರುವ ಫೋಟೋವನ್ನು ಪೋಸ್ಟ್ ಮಾಡಿ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಹಲವು ತೆಲುಗು ಭಾಷಿಕರು ಸಹಮತ ವ್ಯಕ್ತಪಡಿಸಿ ಟ್ಯಾಗ್ ಮಾಡುತ್ತಿದ್ದು. ಇದೀಗ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮಂತ್ರಾಲಯದ ಪ್ರವೇಶದ್ವಾರದಲ್ಲಿ "ತೆಲುಗು ಭಾಷೆಯ"ಬರಹ ದೊಡ್ಡದಾಗಿ, ಸ್ಪಷ್ಟವಾದ ರೀತಿಯಲ್ಲಿ ಪ್ರದರ್ಶಿಸಬೇಕು. ಇತರ ಭಾಷೆಗಳನ್ನು ಸಹ ತೋರಿಸಬಹುದು, ಯಾವುದೇ ಆಕ್ಷೇಪಣೆ ಇಲ್ಲ, ಆದರೆ ದಯವಿಟ್ಟು ತೆಲುಗು ಭಾಷೆಯನ್ನು ಪ್ರಮುಖವಾಗಿ ಹೈಲೈಟ್ ಮಾಡಿ, ಏಕೆಂದರೆ ಅದು ನಮ್ಮ ಗುರುತು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಮತ್ತೊಬ್ಬ ತೆಲುಗು ನೆಟ್ಟಿಗರು ಟ್ವೀಟ್ ಮಾಡಿದ್ದಾರೆ.
ಅಲ್ಲದೇ ಗೂಗಲ್ ಮ್ಯಾಪ್ನಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠ ಎನ್ನುವ ಬದಲು ಶ್ರೀ ರಾಘವೇಂದ್ರ ಸ್ವಾಮಿವಾರಿ ಮಠಂ ಎಂದು ಬದಲಾಯಿಸಿ ಎನ್ನುವ ಅಭಿಯಾನವೂ ಸಹ ಕಳೆದ ಕೆಲವು ದಿನಗಳಿಂದ ನಡೆಯುತ್ತಿದೆ. ಆಂಧ್ರಪ್ರದೇಶದ ರಾಯಲಸೀಮಾ ಜಿಲ್ಲೆಯ ಇತರ ರಾಜ್ಯಗಳೊಂದಿಗೆ ಗಡಿ ಹಂಚಿಕೊಳ್ಳುವ ಪ್ರದೇಶಗಳಿಗೆ ನಮ್ಮ ಭಾಷೆಯಲ್ಲಿ ಹೆಸರುಗಳು ಇರಬೇಕು.
ಈಗ ಮಂತ್ರಾಲಯವನ್ನು ನಮ್ಮ ತೆಲುಗು ಭಾಷೆಗೆ ಬದಲಾಯಿಸಲಾಗಿದೆ, ಅದೇ ರೀತಿ, ಬೇರೆ ಯಾವುದೇ ಪ್ರದೇಶವು ನಮ್ಮ ಅಧಿಕೃತ ಭಾಷೆಯಲ್ಲಿಲ್ಲದಿದ್ದರೂ ತೆಲುಗು ಹೊರತುಪಡಿಸಿ ಬೇರೆ ಭಾಷೆಯಲ್ಲಿದ್ದರೆ, ಅವು ತೆಲುಗಿನಲ್ಲಿವೆ ಎಂದು ಖಚಿತಪಡಿಸಿಕೊಳ್ಳೋಣ ಎಂದು ಟ್ವೀಟ್ ಮಾಡಲಾಗಿದೆ.
📍మంత్రాలయం, ఆంధ్రప్రదేశ్
— Andhra & Amaravati Updates (@AP_CRDANews) December 9, 2025
గౌరవనీయులైన ముఖ్యమంత్రి గారు, గౌరవనీయులైన ఉప ముఖ్యమంత్రి గారు, తెలుగు బోర్డు ఎక్కడ ఉంది సార్? మంత్రాలయం ఆంధ్రప్రదేశ్లో భాగం, అక్కడ తెలుగును పూర్తిగా ఎలా వదిలేస్తారు? ముందుగా ఈ విషయంలో తగిన చర్యలు తీసుకోండి.@ncbn @AndhraPradeshCM @PawanKalyan… pic.twitter.com/I39CTv6jfT
ಒಟ್ಟಾರೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗ ಹಾಗೂ ರಾಯಚೂರಿನಿಂದ ಕೂಗಳತೆಯ ದೂರದಲ್ಲಿರುವ ರಾಯರ ಸನ್ನಿಧಾನದ ಬಗ್ಗೆ ಇದೀಗ ಅನವಶ್ಯಕವಾದ ವಿವಾದ ಸೃಷ್ಟಿಯಾಗಿದೆ. ದಶಕಗಳಿಂದ ಕನ್ನಡದಲ್ಲಿರುವ ಬೋರ್ಡ್ನ ಬಗ್ಗೆ ಈಗ ವಿವಾದವೇಕೆ ಎಂದು ಕನ್ನಡಿಗರು ಪ್ರಶ್ನೆ ಮಾಡಿದ್ದಾರೆ.
ಮಂತ್ರಾಲಯ ಆಂಧ್ರಪ್ರದೇಶದಲ್ಲಿದೆ: ಮಂತ್ರಾಲಯ ರಾಯರ ಸನ್ನಿಧಾನವು ಆಂಧ್ರಪ್ರದೇಶದಲ್ಲಿ ಇದೆ. ಇಲ್ಲಿ ಕನ್ನಡದ ಬೋರ್ಡ್ ಯಾಕೆ ಎಂದು ತೆಲುಗು ಭಾಷಿಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications