ಆಗಸ್ಟ್ 25ರಿಂದ ಏಳು ದಿನ ಮಂತ್ರಾಲಯದಲ್ಲಿ ರಾಯರ ಆರಾಧನಾ ಮಹೋತ್ಸವ
ಮಂತ್ರಾಲಯ ಶ್ರೀ ಗುರುರಾಯರ 347ನೇ ಆರಾಧನಾ ಮಹೋತ್ಸವಕ್ಕೆ ಇಂದಿನಿಂದ ಚಾಲನೆ ದೊರೆತಿದೆ. ಆಗಸ್ಟ್ 25 ರಿಂದ 31 ರವಗೆ ಅಂದರೆ 7 ದಿನಗಳ ಕಾಲ ರಾಯರ ಆರಾಧನೆ ಮಹೋತ್ಸವ ನಡೆಯಲಿದೆ.
ಇದಕ್ಕಾಗಿ ರಾಯರ ಸನ್ನಿಧಾನವನ್ನು ಲಕ್ಷಾಂತರ ರೂಪಯಿ ವ್ಯಚ್ಚದಲ್ಲಿ ಸಿಂಗರಿಸಲಾಗಿದೆ. ದೇಶದ ವಿವಿಧೆಡೆಯಿಂದ ಬರುವ ಭಕ್ತರಿಗೆ ವಸತಿ ಮತ್ತು ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ.
ಆರಾಧನೆಯ ಮುಖ್ಯಘಟ್ಟ ಆಗಸ್ಟ್ 27 ರಂದು ಪೂರ್ವಾರಾಧನೆ ನಡೆಯಲಿದ್ದು, ಬೆಳಗ್ಗೆ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ ಹಾಗೂ ಚಿನ್ನದ ರಥೋತ್ಸವ ನಡೆಯಲಿದೆ. ರಾತ್ರಿ ಸಭಾ ಮಂಟಪದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಸಲ್ಲಿಸಿದವರಿಗೆ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಆಗಸ್ಟ್ 28 ರಂದು ನಡೆಯುವ ಮಧ್ಯಾರಾಧನೆ ನಿಮಿತ್ತ ಬೆಳಗ್ಗೆ ತಿರುಮಲ ತಿರುಪತಿ ದೇವಸ್ಥಾನದಿಂದ ಶೇಷವಸ್ತ್ರವನ್ನು ತಂದು ರಾಯರಿಗೆ ಸಮರ್ಪಿಸಲಾಗುತ್ತಿದೆ. ಬೃಂದಾವನವನ್ನು ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗುತ್ತಿದೆ. ಆಗಸ್ಟ್ 29 ರಂದು ನಡೆಯುವ ಉತ್ತರರಾಧನೆ ನಿಮಿತ್ತ ಬೆಳಗ್ಗೆ ರಾಯರ ಪೂಜೆ ನಂತರ ಮಹಾ ರಥೋತ್ಸವ ಜರುಗಲಿದೆ.
ಈ ಭಾರಿಯ ಮಠದ ಪ್ರಾಕಾರದ ದ್ವಾರಕ್ಕೆ 350 ಕೇಜಿ ಬೆಳ್ಳಿಯ ಹೊದಿಕೆ ಮಾಡಲಾಗಿದೆ. ರಾಯರ ಮಠಕ್ಕೆ ವಿಶೇಷ ಲೈಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಈ ಲೈಟಿಂಗ್ ಪ್ರತಿ ದಿನ ಒಂದೊಂದು ಬಣ್ಣದಲ್ಲಿ ಕಂಗೊಳಿಸಲಿದೆ. ಜೊತೆಗೆ ಮಠದಿಂದ ನಿರ್ಮಾಣಗೊಂಡಿರುವ ಆಸ್ಪತ್ರೆ ಕೂಡ ಉದ್ಘಾಟನೆಯಾಗಲಿದೆ.

ಒಟ್ಟಾರೆಯಾಗಿ ಶ್ರೀ ಮಠದಲ್ಲಿ ನಡೆಯುವ ಅದ್ದೂರಿ ಉತ್ಸವ ರಾಯರ ಆರಾಧನೆಗೆ ಸಕಲ ರೀತಿಯಲ್ಲಿ ಸಿದ್ದವಾಗಿದೆ. ಇನ್ನು ಈ ಭಾರಿ ತುಂಗಾಭದ್ರಾ ನದಿ ಮೈದುಂಬಿ ಹರಿಯುತ್ತಿರುವ ಕಾರಣ ಭಕ್ತರ ಪುಣ್ಯ ಸ್ನಾನಕ್ಕೂ ಯಾವುದೇ ಅಡ್ಡಿ ಇರುವುದಿಲ್ಲ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications