ಸಿಎಂ ಕುರ್ಚಿ ಮೇಲೆ ಡಜನ್‍ಗಟ್ಟಲೆ ನಾಯಕರು ಹೋರಾಟ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು, ನವೆಂಬರ್‌ 06: ಕರ್ನಾಟಕದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಸಿಎಂ ಕುರ್ಚಿ ಮೇಲೆ ಡಜನ್‍ಗಟ್ಟಲೆ ಜನರು ಕಣ್ಣಿಟ್ಟು ಹೋರಾಟ ಮಾಡುತ್ತಿದ್ದಾರೆ. ಆದ್ದರಿಂದ ಸಿದ್ದರಾಮಯ್ಯನವರು ಸಿಎಂ ಆಗಿ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ ಎಂಬ ಅರ್ಥದಲ್ಲಿ ಪ್ರಧಾನಿಯವರು ಹೇಳಿಕೆ ನೀಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ವಿಶ್ಲೇಷಿಸಿದರು.

ಗ್ಯಾರಂಟಿ ಘೋಷಿಸಿದ್ದು, ಅಧಿಕಾರಕ್ಕೆ ಬಂದು ನುಡಿದಂತೆ ನಡೆದಿಲ್ಲ. ಯಾವುದೇ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ ಎಂದಿದ್ದಾರೆ. ನಾವೇನೂ ಗ್ಯಾರಂಟಿ ವಿರೋಧಿಗಳು ಅಲ್ಲ. ಖಜಾನೆಯಲ್ಲಿರುವ ಹಣ ಗಮನಿಸದೆ ಜನರಿಗೆ ಕೊಟ್ಟ ಆಶ್ವಾಸನೆ ಉಳಿಸಿಕೊಳ್ಳುವುದು ಹೇಗೆ? ನಿಜವಾಗಿ ನಾವು ಕೊಟ್ಟ ಆಶ್ವಾಸನೆಗಳನ್ನು ಉಳಿಸಿಕೊಳ್ಳಲು ಸಾಧ್ಯವೇ ಎಂಬುದನ್ನು ವಿವೇಚಿಸಬೇಕಾಗಿತ್ತು. ಮತ್ತು ಆ ನಿಟ್ಟಿನಲ್ಲಿ ಪರಿಜ್ಞಾನ ಇರಬೇಕಿತ್ತು ಎಂದು ಹೇಳಿದ್ದಾರೆ.

chalavadi-narayanaswamy

ಸಂಪೂರ್ಣವಾಗಿ ಇಡೀ ಸರಕಾರವು ಭ್ರಷ್ಟಾಚಾರದ ಕೂಪದಲ್ಲಿ ತುಂಬಿ ಹೋಗಿದೆ. ಭ್ರಷ್ಟಾಚಾರದ ಕಾರಣದಿಂದ ರಾಜ್ಯ ದಿವಾಳಿ ಆಗಿದೆ. ಬರ ಪರಿಸ್ಥಿತಿ ತೀವ್ರವಾಗಿದೆ. ಕುಡಿಯುವ ನೀರಿನ ಸಮಸ್ಯೆಯೂ ಹೆಚ್ಚಾಗಿದೆ. ಇವೆಲ್ಲವನ್ನೂ ಸರಕಾರ ಗಮನಿಸುತ್ತಿಲ್ಲ ಎಂಬುದನ್ನು ಎಚ್ಚರಿಕೆಯ ರೂಪದಲ್ಲಿ ಪ್ರಧಾನಿಯವರು ತಿಳಿಸಿದ್ದಾರೆ. ಆದರೆ, ಸಿದ್ದರಾಮಯ್ಯನವರು ಅದನ್ನು ಬೇರೆ ರೀತಿಯಲ್ಲಿ ತೆಗೆದುಕೊಂಡು ಪುರಾವೆ ಕೇಳುತ್ತಿದ್ದಾರೆ. ಏನು ಪುರಾವೆ ಬೇಕಿತ್ತು ನಿಮಗೆ ಎಂದು ಪ್ರಶ್ನಿಸಿದರು.

5 ಗ್ಯಾರಂಟಿ ಕೊಟ್ಟಿದ್ದೀರಲ್ಲ? ಯಾವ ಗ್ಯಾರಂಟಿ ಸರಿಯಾಗಿ ಜನರಿಗೆ ತಲುಪಿದೆ ಹೇಳಿ? ಎಂದು ಕೇಳಿದರು. ಸಿಎಂ ಪ್ರತಿದಿನ ಸುಳ್ಳು ಹೇಳುತ್ತಾರೆ. ನಿಮ್ಮ ಡಿಸಿಎಂ ಡಿ.ಕೆ.ಶಿವಕುಮಾರರನ್ನು ನಂಬುತ್ತೀರಾ? ಸಿಎಂ ರವರು ಶಿವಕುಮಾರರಿಗೆ ಗೌರವ ಕೊಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯವರಿಗೆ ಸುಳ್ಳು ಹೇಳಲು ಬರುವುದಿಲ್ಲ ಎಂದು ಶಿವಕುಮಾರರು ಹೇಳಿದ್ದಾರೆ. ನಾವಾದರೆ ಶೇ 40 ಕಮಿಷನ್ ಬಗ್ಗೆ ಜನರಿಗೆ ತಿಳಿಸಿ, 135 ಸೀಟು ಗೆದ್ದಿದ್ದಾಗಿ ತಿಳಿಸಿದ್ದಾರೆ. ಅವರ ಸರ್ಟಿಫಿಕೇಟ್ ಇದೆ. ಸಿಎಂ ಯಾಕೆ ತಪ್ಪು ಮಾಹಿತಿ ಕೊಡುತ್ತಾರೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಸಿದ್ದರಾಮಯ್ಯ ಪ್ರತಿದಿನ ಸುಳ್ಳು ಹೇಳಿ ಸುಳ್ಳುರಾಮಯ್ಯ ಆಗಿದ್ದಾರೆ. ಬರ ಪರಿಸ್ಥಿತಿಗೆ ಮೊನ್ನೆ 5 ಸಾವಿರ ಕೋಟಿ ಬಿಡುಗಡೆ ಮಾಡಿದ ಹೇಳಿಕೆ ಕೊಟ್ಟಿದ್ದರು. ವಾಸ್ತವವಾಗಿ ಬಿಡುಗಡೆ ಆದುದು 124 ಕೋಟಿ ಎಂದು ಟೀಕಿಸಿದರು.

ಬರದ ವಿಚಾರದಲ್ಲಿ ಸಿದ್ದರಾಮಯ್ಯನವರು ಜನರ ಮೂಗಿಗೆ ತುಪ್ಪ ಸವರುತ್ತಿದ್ದಾರಾ ಎಂದು ಪ್ರಶ್ನಿಸಿದ ಅವರು, ನಿಮ್ಮ ಆಡಳಿತ ಎಲ್ಲಿ ಹೋಗಿದೆ? ನಿಮ್ಮ ಆಡಳಿತದ ಅರಿವು ಜನರಿಗೆ ಆಗಿದೆ ಎಂದು ತಿಳಿಸಿದರು. ಪಂಚರಾಜ್ಯ ಚುನಾವಣೆಗೆ ಇಲ್ಲಿಂದ ದುಡ್ಡು ಕಳಿಸುತ್ತಿದ್ದೀರಿ. ಬರ ಪರಿಸ್ಥಿತಿ ಬಗ್ಗೆ ಅವಲೋಕನ ಮಾಡಲು ನಿಮ್ಮ ಸಚಿವರೇ ಬರುತ್ತಿಲ್ಲ ಎಂದು ಹೇಳಿದರು.

5 ಗಂಟೆ ರೈತರಿಗೆ ಕರೆಂಟ್ ಸರಬರಾಜು ಎಂದರೂ 2 ಗಂಟೆ ಕೊಡಲು ಸಾಧ್ಯವಾಗುತ್ತಿಲ್ಲ. ವಿದ್ಯುತ್ ಅಸಮರ್ಪಕ ಸರಬರಾಜಿನಿಂದ ಟಿ.ಸಿ.ಗಳು ಸುಟ್ಟು ಹೋಗುತ್ತಿವೆ. ರೈತರಿಗೆ ಕೆಟ್ಟ ಪರಿಸ್ಥಿತಿ ಇದೆ. ದರಿದ್ರವನ್ನೇ ಹೊತ್ತು ಬಂದಿದ್ದಾರೆ. ಇನ್ನೈದು ವರ್ಷ ಕಾಂಗ್ರೆಸ್ ಆಡಳಿತ ಮಾಡಿದರೆ ಆ ದರಿದ್ರವು ರಾಜ್ಯವನ್ನೇ ನಿರ್ನಾಮ ಮಾಡಲಿದೆ ಎಂದು ಜನರು ಮಾತನಾಡುತ್ತಿದ್ದಾರೆ ಎಂದರು.

ಸುಮಂಗಲೆಯರಿಗೆ ತಾಳಿ, ಕಾಲುಂಗುರ ಬಹಳ ಮುಖ್ಯ. ಒಂದು ಪರೀಕ್ಷೆಗಾಗಿ ತಾಳಿ, ಕಾಲುಂಗುರ ತೆಗೆಸುತ್ತೀರಲ್ಲವೇ? ನಿಮಗೆ ನಾಚಿಕೆ ಆಗಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ಮಹಿಳೆಯರಿಗೆ ಗೌರವ ಕೊಡುವುದೇ ಆದರೆ, ಇದನ್ನೆಲ್ಲ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದರು. ಪರೀಕ್ಷಾ ನ್ಯೂನತೆ ಸರಿಪಡಿಸುವುದನ್ನು ಬಿಟ್ಟು ತಾಳಿ, ಕಾಲುಂಗುರ ತೆಗೆಸುವುದು ಯಾವ ಸಂಸ್ಕೃತಿ ಎಂದು ಕಿಡಿಕಾರಿದರು. ಇಂಥ ಕೆಟ್ಟ ಪರಂಪರೆಯ ಸರಕಾರ ಇರಬೇಕೇ ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+