ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಮಳೆ ಆರ್ಭಟ; ಮಂಗಳವಾರವೂ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

|
Google Oneindia Kannada News

ಬೆಂಗಳೂರು ಆಗಸ್ಟ್ 30: ಕರ್ನಾಟಕದ ಹಲವೆಡೆ ವರುಣನ ಆರ್ಭಟ ಮಂಗಳವಾರವೂ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾನುವಾರದಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಸೋಮವಾರ ಸುರಿದ ಮಳೆಗೆ ಕೆಲವು ಕಡೆ ಪ್ರವಾಹ ಉಂಟಾಗಿ ಹಲವು ಕಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನಲ್ಲಿ ಮಳೆ ಆರ್ಭಟ: ಮಂಗಳವಾರ ಶಾಲಾ-ಕಾಲೇಜಿಗೆ ರಜೆ ಘೋಷಣೆಬೆಂಗಳೂರಿನಲ್ಲಿ ಮಳೆ ಆರ್ಭಟ: ಮಂಗಳವಾರ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಗದಗದಲ್ಲೂ ಗುಡುಗು ಸಹಿತ ಮಳೆಯಾಗುತ್ತಿರುವ ಕಾರಣ ಜಿಲ್ಲಾಧಿಕಾರಿ ಎಂ. ಎಲ್. ವೈಶಾಲಿ ಶಾಲಾ-ಕಾಲೇಜಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ ರಜೆ ಘೋಷಣೆ ಮಾಡಿದ್ದಾರೆ.

Many Districts Across Karnataka Announced Holiday Due To Rain

ಹಾವೇರಿಯಲ್ಲಿ ಜಿಲ್ಲಾಧಿಕಾರಿ ಸಂಜಯ್‌ ಶೆಟ್ಟಣ್ಣನವರ್‌ ಮಂಗಳವಾರ ಶಾಲೆಗಳಿಗೆ ಮಾತ್ರ ರಜೆ ಘೋಷಿಸಿದ್ದು, ಮುಂಬರುವ ರಜಾ ದಿನಗಳಲ್ಲಿ ತರಗತಿಗಳನ್ನು ನಡೆಸುವುದಾಗಿ ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಜಯನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೊಪ್ಪಳದಲ್ಲೂ ಮಳೆಯಾಗುತ್ತಿದ್ದು, ಶಿಕ್ಷಣ ಇಲಾಖೆ ಕೊಪ್ಪಳ ತಾಲೂಕಿಗೆ ರಜೆ ಘೋಷಣೆ ಮಾಡಿದೆ. ಉಳಿದ ತಾಲೂಕುಗಳಿಗೆ ಮಳೆ ಪ್ರಮಾಣ ನೋಡಿ ರಜೆ ನೀಡಲು ಆದೇಶಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರಿಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಬೆಂಗಳೂರು ಗ್ರಾಮಂತರ ಜಿಲ್ಲೆಯಲ್ಲೂ ರಜೆ ಘೋಷಿಸಲಾಗಿದೆ.

English summary
Indian Meteorological Department (IMD) has warned of incessant rainfall for the next four days in the state. Gadag, Koppal, Haveri, Vijayanagar Deputy commissioner announced holiday for schools,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X