Toilets in Karnataka: ರಾಜ್ಯದಲ್ಲಿ ಹಲವು ಸಾರ್ವಜನಿಕ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿಲ್ಲ!
'ನೀರಿನ ಕೊರತೆಯಿಂದ ಈಗಾಗಲೇ ಶೇ.90ಕ್ಕೂ ಹೆಚ್ಚು ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಹೊಸ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವುದನ್ನು ನಿಲ್ಲಿಸಿ'
ಬೆಂಗಳೂರು, ಫೆಬ್ರವರಿ. 21: ನಿರ್ವಹಣೆ ಕೊರತೆಯಿಂದ ರಾಜ್ಯದಲ್ಲಿ ಹಲವು ಸಾರ್ವಜನಿಕ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಕೊಂಡಿದ್ದಾರೆ.
ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ 250 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದು, 2023ರ ಆಗಸ್ಟ್ 15ಕ್ಕೆ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಬಸವರಾಜ ಬೊಮ್ಮಾಯಿ ಮಾತಿಗೆ ಪ್ರತಿಕ್ರಿಯಿ ನೀಡಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸರ್ಕಾರ ನಾನಾ ಯೋಜನೆಗಳಡಿ ಶೌಚಾಲಯ ನಿರ್ಮಿಸಿಕೊಡುತ್ತಿದ್ದರೂ ನಿರ್ವಹಣೆಯ ನೈಜ ಸಮಸ್ಯೆ ಬಗೆಹರಿಯುತ್ತಿಲ್ಲ. ಯಾವುದೇ ಪಂಚಾಯಿತಿ ಅಥವಾ ಏಜೆನ್ಸಿಗೆ ಜವಾಬ್ದಾರಿ ವಹಿಸಿದರೆ ಮಾತ್ರ ನಿರ್ವಹಣೆ ಸಾಧ್ಯ, ತಪ್ಪಿದಲ್ಲಿ ಶೌಚಾಲಯ ನಿರ್ಮಾಣ ಮಾಡಿದರೇ ಮಾತ್ರ ಅದರ ಉದ್ದೇಶ ಈಡೇರುವುದಿಲ್ಲ ಎಂದಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ನೀರಿನ ಅಸಮರ್ಪಕ ಲಭ್ಯತೆ, ಶೌಚಾಲಯಗಳ ನಿರ್ವಹಣೆಯಲ್ಲಿ ಪ್ರಮುಖ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.
"ಸಾರ್ವಜನಿಕ ಶೌಚಾಲಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ. ನೀರಿನ ಕೊರತೆಯ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ. ಈಗಾಗಲೇ ಶೇ.90ಕ್ಕೂ ಹೆಚ್ಚು ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಹೊಸ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವುದನ್ನು ನಿಲ್ಲಿಸಿ" ಎಂದು ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿಗೆ ಒತ್ತಾಯಿಸಿದ್ದಾರೆ.
ಆರಂಭದಲ್ಲಿ ಸರ್ಕಾರವು ಸುಲಭ ಶೌಚಾಲಯ ಯೋಜನೆ ಮೂಲಕ ಸಮಸ್ಯೆಯನ್ನು ಪರಿಹರಿಸಲು ಸದುದ್ದೇಶದಿಂದ ಪ್ರಯತ್ನಿಸಿದರೂ ಅದು ಫಲ ನೀಡಲಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

"ಶೌಚಾಲಯಗಳ ನಿರ್ವಹಣೆಯಲ್ಲಿ ನಾವು ಸಾರ್ವಜನಿಕರನ್ನು ಪಾಲುದಾರರಾಗಿ ತೊಡಗಿಸಿಕೊಳ್ಳಬೇಕು. ಹೀಗಾಗಿ, ಈ ವರ್ಷದ ಬಜೆಟ್ನಲ್ಲಿ ನಿರ್ವಹಣಾ ವೆಚ್ಚವನ್ನು ದ್ವಿಗುಣಗೊಳಿಸಲು ನಿರ್ಧರಿಸಿದ್ದೇವೆ. ಪ್ರತಿ ಶೌಚಾಲಯದ ನಿರ್ವಹಣೆಗೆ ಪ್ರತಿ ತಿಂಗಳು ನಿರ್ದಿಷ್ಟ ಮೊತ್ತವನ್ನು ಪಾವತಿಸುತ್ತೇವೆ. ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳಿಗೆ (ಎಸ್ಡಿಎಂಸಿ) ಶೌಚಾಲಯಗಳ ನಿರ್ವಹಣೆ ಜವಾಬ್ದಾರಿಯನ್ನು ನೀಡಲಾಗುವುದು" ಎಂದಿದ್ದಾರೆ.
ಇನ್ನು, ಇತ್ತೀಚಿನ ಬಜೆಟ್ ಮಂಡನೆ ವೇಳೆ, ಬೆಂಗಳೂರಿನ ನಗರದ ಬೃಹತ್ ವಾಣಿಜ್ಯ ಮಳಿಗೆಗಳು, ಮಾರುಕಟ್ಟೆಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ 'She Toilet' ಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ನರೇಗಾ ಸಂಯೋಜನೆಯೊಂದಿಗೆ 250 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ 7,750 ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಶೌಚಾಲಯದ ಸಂಪೂರ್ಣ ಬೇಡಿಕೆಯನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಮಾರ್ಚ್ 2023ರ ಅಂತ್ಯದಲ್ಲಿ 2,169 ಶೌಚಾಲಯಗಳು ಪೂರ್ಣಗೊಳ್ಳಲಿವೆ. ಉಳಿದ 5,581 ಶೌಚಾಲಯಗಳನ್ನು 2023-24ನೇ ಸಾಲಿನಲ್ಲಿ ನಿರ್ಮಿಸಲಾಗುವುದು. ಇದಕ್ಕೆ ಒಟ್ಟು 80 ಕೋಟಿ ರೂ. ಹಂಚಿಕೆ ಮಾಡಿದ್ದು, ಅದರಲ್ಲಿ 50 ಕೋಟಿ ರೂ. ಗಳನ್ನು ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒದಗಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.
-
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications