ಪ್ರೇಮಿಸಿ ಲಗ್ನವಾಗಿದ್ದ ಯುವತಿಯನ್ನು ಎಳೆದೊಯ್ದ ಹೆತ್ತವರು
ಚಾಮರಾಜನಗರ, ಮೇ 27 : ಪೋಷಕರ ವಿರೋಧದ ನಡುವೆಯೂ ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಮನೆ ಸೇರಿದ್ದ ಯುವಕ ತನ್ನ ಮನೆಯಲ್ಲಿ ಸಂಸಾರ ಆರಂಭಿಸುತ್ತಿರುವಾಗಲೇ, ಯುವತಿಯ ಮನೆಯ ಸುಮಾರು ಇಪ್ಪತ್ತು ಮಂದಿ ಮನೆಯೊಳಕ್ಕೆ ನುಗ್ಗಿ ಯುವತಿಯನ್ನು ಎಳೆದೊಯ್ದಿರುವ ಘಟನೆ ಕೊಳ್ಳೇಗಾಲ ಪಟ್ಟಣದ ಆದರ್ಶ ಬಡಾವಣೆಯಲ್ಲಿ ನಡೆದಿದೆ.
ಆದರ್ಶನಗರ ಬಡಾವಣೆಯ ನಿವಾಸಿ ಗುತ್ತಿಗೆದಾರ ಪುಟ್ಟಸ್ವಾಮಿ ಅವರ ಮಗ ವಿನೋದಕುಮಾರ್(26) ಹಾಗೂ ಸೋಮಶೇಖರ್ ಎಂಬುವವರ ಪುತ್ರಿ ಸ್ಪೂರ್ತಿ(23) ಇಬ್ಬರು ಪ್ರೀತಿಸಿ ವಿವಾಹವಾಗಿದ್ದರು.
ಇವರು ಕಳೆದ ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಸ್ಪೂರ್ತಿಯ ಮನೆಯವರು ಆಕೆಯನ್ನು ಬೇರೊಬ್ಬ ಯುವಕನ ಜೊತೆ ವಿವಾಹ ಮಾಡಲು ಏರ್ಪಾಡು ಮಾಡುತ್ತಿದ್ದಾರೆಂಬ ವಿಷಯ ತಿಳಿದು ಪ್ರೇಮಿಗಳಿಬ್ಬರು ಮನೆ ಬಿಟ್ಟು ಹೋಗಿದ್ದರು. [ಅಯ್ಯೋ ದೇವ್ರೆ, ಇನಿಯನಿಗಾಗಿ ಗಂಡ ಮಕ್ಕಳ ಧಿಕ್ಕರಿಸಿದಳೆ]

ಮನೆ ಬಿಟ್ಟು ಬಂದ ಪ್ರೇಮಿಗಳು ಮೇ 9ರಂದು ಪೊಲೀಸರ ಸಮ್ಮುಖದಲ್ಲೇ ಚಾಮರಾಜನಗರದಲ್ಲಿ ವಿವಾಹವಾಗಿದ್ದು, ಕೆಲವು ದಿನಗಳು ಬೇರೆ ಕಡೆಯಲ್ಲಿ ವಾಸವಿದ್ದರು. ನಂತರ ವಿನೋದಕುಮಾರ್ ತನ್ನ ಮನೆಯವರನ್ನೊಪ್ಪಿಸಿ ತನ್ನ ಪತ್ನಿಯನ್ನು ಕರೆದುಕೊಂಡು ತನ್ನ ತಂದೆಯ ಮನೆಗೆ ಬಂದಿದ್ದನು. [ಮಿಸ್ಡ್ಕಾಲ್ ಪ್ರೇಮಕ್ಕೆ ಪಟ್ಟಣ ಪೊಲೀಸರ ಪೌರೋಹಿತ್ಯ]
ಎಲ್ಲ ಸರಿಹೋಗಿ ಸಂಸಾರ ಆರಂಭಿಸಬೇಕು ಎನ್ನುವಷ್ಟರಲ್ಲೇ ಯುವತಿ ಸ್ಪೂರ್ತಿಯ ತಾಯಿ ಸೇರಿದಂತೆ ಸುಮಾರು ಹದಿನೈದರಿಂದ ಇಪ್ಪತ್ತು ಜನರು ಬುಧವಾರ ಮಧ್ಯಾಹ್ನ 1.30ರ ವೇಳೆಯಲ್ಲಿ ಏಕಾಏಕಿ ವಿನೋದಕುಮಾರ್ನ ಮನೆಗೆ ನುಗ್ಗಿ ಮನೆಯ ವಸ್ತುಗಳನ್ನು ಹಾನಿಗೊಳಿಸಿ ಸ್ಪೂರ್ತಿಯನ್ನು ಬಲವಂತವಾಗಿ ಎಳೆದೊಯ್ದಿದ್ದಾರೆ. ಎಳೆದೊಯ್ಯುತ್ತಿರುವ ದೃಶ್ಯಗಳು ಮನೆಯ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಚಿತ್ರೀಕರಣಗೊಂಡಿದೆ. [ಮುಸ್ಲಿಂ ಸಂಪ್ರದಾಯದಂತೆ ಆಶಿತಾ-ಶಕೀಲ್ ನಿಖಾಹ್!]

ಘಟನೆ ಸಂಬಂಧ ವಿನೋದಕುಮಾರ್ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಘಟನಾ ಸ್ಥಳಕ್ಕೆ ಡಿವೈಎಸ್ಪಿ. ಸುರೇಶಬಾಬು, ವೃತ್ತ ನಿರೀಕ್ಷಕರಾದ ವೈ.ಅಮರನಾರಾಯಣ್ ಹಾಗೂ ಪಿಎಸ್ಐ ಬಸವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications