ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ ಕಡ್ಡಾಯ; ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟ
ಬೆಂಗಳೂರು, ಏಪ್ರಿಲ್ 25: ಕೋವಿಡ್ ಪ್ರಕರಣಗಳ ಕಡಿಮೆ ಸಂಖ್ಯೆ ಕಡಿಮೆಯಾಗಿದ್ದರಿಂದ ರಾಜ್ಯದಲ್ಲಿ ಕೋವಿಡ್ -19 ನಿರ್ಬಂಧಗಳನ್ನು ಫೆಬ್ರವರಿ 28, 2022ರಿಂದ ತೆಗೆದುಹಾಕಲಾಗಿತ್ತು. ಮತ್ತು ಸಾರ್ವಜನಿಕರ ದೈನಂದಿನ ಜೀವನ ದೃಷ್ಟಿಯಿಂದ ಎಲ್ಲಾ ಚಟುವಟಿಕೆಗಳನ್ನು ತೆರೆಯಲಾಗಿತ್ತು.
ಆದರೆ ಪ್ರಸ್ತುತ, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವನ್ನು ಗಮನಿಸಲಾಗಿದ್ದು, ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರತಿದಿನ ಸ್ವಲ್ಪ ಹೆಚ್ಚಳವಾಗುತ್ತಿವೆ. ಅಲ್ಲದೆ ಕರ್ನಾಟಕದಲ್ಲಿಯೂ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೋಮವಾರ ಹೊಸದಾಗಿ ಸಣ್ಣ ಪ್ರಮಾಣದ ಮಾರ್ಗಸೂಚಿ/ ನಿರ್ಬಂಧಗಳ ಆದೇಶ ಹೊರಡಿಸಿದೆ.
ಇದೇ ವೇಳೆ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳು ಮಾಸ್ಕ್ ಅನ್ನು ಪುನಃ ಪರಿಚಯಿಸಿವೆ. ಇದರ ಅನುಸರಣೆ ಮಾಡದಿದ್ದರೆ ದಂಡ ಪ್ರಯೋಗಕ್ಕೆ ಆದೇಶಿಸಿದೆ. ಪೂರ್ವಭಾವಿ ಹೆಜ್ಜೆಯಾಗಿ ಕೋವಿಡ್ ಪ್ರಕರಣಗಳ ಉಲ್ಬಣವನ್ನು ಕಡಿಮೆ ಮಾಡಲು, ರಾಜ್ಯ ಕೋವಿಡ್- 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನ ಮೇರೆಗೆ ಮಾರ್ಗಸೂಚಿ ಆದೇಶವನ್ನು ಹೊರಡಿಸಲಾಗಿದೆ.

ಹೊಸ ಮಾರ್ಗಸೂಚಿಯಲ್ಲಿ ಏನಿದೆ?
ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣ ಸಮಯದಲ್ಲಿ ಜನರು ಮುಖ ಕವಚ/ಮಾಸ್ಕ್ ಧರಿಸುವುದು ಕಡ್ಡಾಯ. ಇದೆ ವೇಳೆ ಹಾಗೆಯೇ ಉಗುಳುವುದು ದಂಡದೊಂದಿಗೆ ಶಿಕ್ಷಾರ್ಹವಾಗಿರುತ್ತದೆ. ಸ್ಥಳೀಯ ಅಧಿಕಾರಿಗಳು ಅದರ ಕಾನೂನುಗಳು, ನಿಯಮಗಳು ಅಥವಾ ನಿಬಂಧನೆಗಳಿಗೆ ಅನುಗುಣವಾಗಿ ಆದೇಶ ಹೊರಡಿಸುವುದು.

Recommended Video
ಇದಲ್ಲದೆ, ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 2 ಅಡಿ ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications