ಮಸ್ಕಿ, ಬಸವಕಲ್ಯಾಣ: ಇದುವರೆಗಿನ ಚುನಾವಣಾ ಇತಿಹಾಸ ಏನು ಹೇಳುತ್ತೆ?
ರಾಯಚೂರು ಜಿಲ್ಲೆ ಮಸ್ಕಿ ಮತ್ತು ಬೀದರ್ ಜಿಲ್ಲೆ ಬಸವಕಲ್ಯಾಣ ಅಸೆಂಬ್ಲಿ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಯಾರೇ ಗೆದ್ದರೂ, ಲೀಡ್ ಜಾಸ್ತಿ ಇರುವುದಿಲ್ಲ ಎಂದು ಸಮೀಕ್ಷೆಗಳು ಹೇಳುತ್ತಿವೆ.
ಮಸ್ಕಿಯಲ್ಲಿ ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದ ಅಭ್ಯರ್ಥಿ, ಆಪರೇಶನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದರು. ಹಾಗಾಗಿ, ಅಲ್ಲಿ ಉಪಚುನಾವಣೆ ನಡೆಯುತ್ತಿದೆ. ಇನ್ನು, ಬಸವಕಲ್ಯಾಣದ ಶಾಸಕರು ನಿಧನ ಹೊಂದಿದ್ದರಿಂದ ಅಲ್ಲಿ ಚುನಾವಣೆ ನಡೆದಿದೆ.
ಮಸ್ಕಿಯಲ್ಲಿ ಕಳೆದ ಬಾರಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಈ ಬಾರಿ ಬಿಜೆಪಿಯಿಂದ, ಅದೇ ರೀತಿ ಬಿಜೆಪಿಯಿಂದ ಸ್ಪರ್ಧಿಸಿದ್ದವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದಾರೆ. ಕ್ಷೇತ್ರಗಳ ಪುನರ್ ವಿಂಗಡಣೆಯ ನಂತರ 2008ರಲ್ಲಿ ಈ ಕ್ಷೇತ್ರ ಅಸ್ತಿತ್ವಕ್ಕೆ ಬಂದಿತ್ತು. ಈಗಿನ ಉಪ ಚುನಾವಣ ನಾಲ್ಕನೇಯದ್ದು.
ಇನ್ನು ಬಸವಕಲ್ಯಾಣ ಕ್ಷೇತ್ರ ಅಂದಿನ ಮೈಸೂರು ಪ್ರಾಂತ್ಯದಿಂದಲೂ ಅಸ್ತಿತ್ವದಲ್ಲಿತ್ತು. ಮೊದಲು ಈ ಕ್ಷೇತ್ರವನ್ನು ಕಲ್ಯಾಣಿ ವಿಧಾನಸಭಾ ಕ್ಷೇತ್ರ ಎಂದು ಕರೆಯಲಾಗಿತ್ತು. ಈ ಬಾರಿಯ ಉಪ ಚುನಾವಣೆ ಹದಿನೈದನೇ ಚುನಾವಣೆಯಾಗಿದೆ. ಈ ಎರಡು ಕ್ಷೇತ್ರದಲ್ಲಿ ಇದುವರೆಗೆ ಯಾವ ಅಭ್ಯರ್ಥಿ/ಪಕ್ಷ ಗೆದ್ದುಕೊಂಡು ಬರುತ್ತಿದೆ ಎನ್ನುವುದನ್ನು ಸ್ಲೈಡಿನಲ್ಲಿ ಮುಂದುವರಿಸಲಾಗಿದೆ:

ಮಸ್ಕಿಯಲ್ಲಿ ಇದುವರೆಗಿನ ಮೂರೂ ಚುನಾವಣೆಯಲ್ಲಿ ಗೆದ್ದವರು ಪ್ರತಾಪ್ ಗೌಡ ಪಾಟೀಲ್
ಮಸ್ಕಿಯಲ್ಲಿ ಇದುವರೆಗಿನ ಮೂರೂ ಚುನಾವಣೆಯಲ್ಲಿ ಗೆದ್ದವರು ಪ್ರತಾಪ್ ಗೌಡ ಪಾಟೀಲ್. 2008ರಲ್ಲಿ ಬಿಜೆಪಿಯಿಂದ ಮತ್ತು 2013, 2018ರಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಪ್ರತಾಪ್ ಪಾಟೀಲ್ ಜಯ ಸಾಧಿಸಿದ್ದಾರೆ. 2018ರ ಚುನಾವಣೆಯಲ್ಲಿ ಪ್ರತಾಪ್ ಗೌಡ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಬಸನಗೌಡ ತುರ್ವಿಹಾಳ ವಿರುದ್ದ ಕೇವಲ 213 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

1957ರಿಂದ 1972ರವರೆಗೆ ನಡೆದ ಚುನಾವಣೆಯಲ್ಲಿ ಮೂರು ಬಾರಿ ಕಾಂಗ್ರೆಸ್ ಗೆಲುವು
ಇನ್ನು ಬಸವಕಲ್ಯಾಣ ಅಸೆಂಬ್ಲಿ ಕ್ಷೇತ್ರಕ್ಕೆ 1957ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಅನ್ನಪೂರ್ಣ ಬಾಯಿ ಗೆಲುವು ಸಾಧಿಸಿದ್ದರು. ಇದಾದ ನಂತರ, 1962ರಲ್ಲೂ ಇವರೇ ಗೆಲುವು ಸಾಧಿಸಿದ್ದರು. 1967ರಲ್ಲಿ ಪಕ್ಷೇತರ ಅಭ್ಯರ್ಥಿ ಸಂಗನಬಸಪ್ಪ ಗೆಲುವು ಸಾಧಿಸಿದ್ದರೆ, 1972ರಲ್ಲಿ ಕಾಂಗ್ರೆಸ್ಸಿನ ಬಾಪೂರಾವ್ ಆನಂದ್ ರಾವ್ ಗೆಲುವು ಸಾಧಿಸಿದ್ದರು.

1985ರಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಬಸವರಾಜ ಅಟ್ಟೂರ (ಜನತಾ ಪಾರ್ಟಿ)
1978ರಲ್ಲಿ ಕಾಂಗ್ರೆಸ್ಸಿನ ಬಾಪೂರಾವ್, 1983ರಲ್ಲಿ ಜನತಾ ಪಾರ್ಟಿಯ ಬಸವರಾಜ ಶಂಕರಪ್ಪ ಪಾಟೀಲ, 1985ರಲ್ಲಿ ಜನತಾ ಪಾರ್ಟಿಯ ಬಸವರಾಜ ಅಟ್ಟೂರ ಗೆಲುವು ಸಾಧಿಸಿದ್ದರು. ಅಟ್ಟೂರ 1989 ಮತ್ತು 1994ರಲ್ಲೂ ಜನತಾ ಪಾರ್ಟಿಯ ಚಿಹ್ನೆಯಿಂದ ಗೆಲುವು ಸಾಧಿಸಿದ್ದರು.

2018ರಲ್ಲಿ ಕಾಂಗ್ರೆಸ್ಸಿನಿಂದ ಬಿ.ನಾರಾಯಣ ರಾವ್ ಗೆಲುವು ಸಾಧಿಸಿದ್ದರು
1999ರಲ್ಲಿ ಜೆಡಿಎಸ್ ನಿಂದ ಎಂ.ಜಿ.ಮುಲೆ, 2004ರಲ್ಲಿ ಜೆಡಿಎಸ್ ನಿಂದ ಮಲ್ಲಿಕಾರ್ಜುನ ಸಿದ್ದರಾಮಪ್ಪ ಖೂಬಾ, 2008ರಲ್ಲಿ ಬಿಜೆಪಿಯಿಂದ ಬಸವರಾಜ ಅಟ್ಟೂರ, 2013ರಲ್ಲಿ ಮತ್ತೆ ಜೆಡಿಎಸ್ ನಿಂದ ಖೂಬಾ, 2018ರಲ್ಲಿ ಕಾಂಗ್ರೆಸ್ಸಿನಿಂದ ಬಿ.ನಾರಾಯಣ ರಾವ್ ಗೆಲುವು ಸಾಧಿಸಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications