ಪೊಲೀಸರ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ
ಬೆಂಗಳೂರು, ಜೂನ್ 04 : ಇತಿಹಾಸದಲ್ಲೇ ಮೊದಲ ಬಾರಿಗೆ ಸಾಮೂಹಿಕ ರಜೆ ಹಾಕಿ ಕರ್ನಾಟಕದ ಪೊಲೀಸರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪ್ರತಿಭಟನೆ ನಡೆಸದಂತೆ ಸರ್ಕಾರ ಪೊಲೀಸರಿಗೆ ಎಚ್ಚರಿಕೆ ನೀಡಿದೆ. ಪ್ರತಿಭಟನೆ ನಡೆಸುವವರನ್ಪೊನು ವಜಾಗೊಳಿಸುವುದಾಗಿ ಹೇಳಿದೆ. ಪೊಲೀಸರ ಪ್ರತಿಭಟನೆಯ ಕ್ಷಣ-ಕ್ಷಣದ ಮಾಹಿತಿ ಇಲ್ಲಿದೆ.
ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘ ಜೂನ್ 4ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಿದೆ. ಪೊಲೀಸರ ಪ್ರತಿಭಟನೆ ತಡೆಯಲು ಸರ್ಕಾರ ಎಸ್ಮಾ ಕಾಯ್ದೆ ಜಾರಿಗೆ ತಂದಿದೆ. ಮಹಾಸಂಘದ ಅಧ್ಯಕ್ಷ ಶಶಿಧರ್ ವೇಣುಗೋಪಾಲ್ ಅವರನ್ನು ಗುರುವಾರವೇ ಬಂಧಿಸಲಾಗಿದೆ. [ಪೊಲೀಸರ 31 ಬೇಡಿಕೆಗಳು]

ಪೊಲೀಸರು ಪ್ರತಿಭಟನೆ ನಡೆಸಲಿರುವ ಹಿನ್ನಲೆಯಲ್ಲಿ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಗಡಿ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಇಂಡೋ ಟಿಬೆಟನ್ ಗಡಿ ಪೊಲೀಸ್ ಪಡೆಗೆ ಸೇರಿದ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. [ಎಸ್ಮಾ ಎಂದರೇನು?]
* ಧಾರವಾಡದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, 'ಸರ್ಕಾರ
ಸರ್ಕಾರ ಪೊಲೀಸರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದೆ ಎಂದು ದೂರಿದರು. ರಾಜಕಾರಣಿಗಳಿಗಿಂತ ಹೆಚ್ಚಾಗಿ ಐಪಿಎಸ್ ಅಧಿಕಾರಿಗಳು ಕೆಳ ಮಟ್ಟದ ಅಧಿಕಾರಿಗಳನ್ನು ಶೋಷಣೆ ಮಾಡುತ್ತಿದ್ದಾರೆ. ರಜೆ ಪಡೆಯಲು ಹಿರಿಯ ಅಧಿಕಾರಿಗಳಿಗೆ ಲಂಚ ಕೊಡಬೇಕಾದ ಪರಿಸ್ಥಿತಿ ಇದೆ' ಎಂದು ಕುಮಾರಸ್ವಾಮಿ ಆರೋಪ ಮಾಡಿದರು.
* ಮಹಿಳಾ ಸಂಘಟನೆಗಳ ಸದಸ್ಯರು ಪೂರ್ಣಿಮಾ ಅವರ ಜೊತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಎಸ್ಮಾ ಜಾರಿಯಲ್ಲಿರುವ ಕಾರಣ ಪ್ರತಿಭಟನೆ ನಡೆಸದಂತೆ ಸೂಚಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.[ಪೊಲೀಸರ ಪ್ರತಿಭಟನೆ : ಶಶಿಧರ್ ವೇಣುಗೋಪಾಲ್ ಬಂಧನ]
* ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ವೇಣುಗೋಪಾಲ್ ಅವರ ಪತ್ನಿ ಪೂರ್ಣಿಮಾ ಅವರು ಪತಿಯ ಪರವಾಗಿ ಫ್ರೀಡಂಪಾರ್ಕ್ನಲ್ಲಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
* ಹುಬ್ಬಳ್ಳಿಯಲ್ಲಿ ಠಾಣೆಯಲ್ಲೇ ಕೂತ ಸಂಚಾರಿ ಪೊಲೀಸರು, ರಸ್ತೆಗಳಲ್ಲಿ ಸಂಚಾರ ದಟ್ಟಣೆ
* 'ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಎಲ್ಲಿಯೂ ಪ್ರತಿಭಟನೆ ನಡೆಯುತ್ತಿಲ್ಲ' ಎಂದು ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
* 'ಜಿಲ್ಲೆಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿ ಪ್ರತಿಭಟನೆ ನಡೆಸುವುದಿಲ್ಲ. ಎಲ್ಲ ಪೊಲೀಸರು ಕರ್ತವ್ಯಕ್ಕೆ ಹಾಜರಾಗುತ್ತಾರೆ. ಮಂಗಳೂರು ನಗರಕ್ಕೆ ಬಿಎಸ್ಎಫ್ ತುಕಡಿಯನ್ನು ಕರೆಸಿಕೊಳ್ಳಲಾಗಿದೆ' ಎಂದು ಎಸ್ಪಿ ಭೂಷಣ್ ಬೊರಸೆ ಹೇಳಿದರು.
* ಮೈಸೂರು, ಚಿಕ್ಕಮಗಳೂರು, ಬೆಂಗಳೂರು, ರಾಮನಗರದಲ್ಲಿ ಪೊಲೀಸರ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ಸಕ್ಕಿದೆ. ಎಂದಿನಂತೆ ಕೆಲಸಕ್ಕೆ ಸಿಬ್ಬಂದಿ ಹಾಜರಾಗಿದ್ದಾರೆ. ಸಂಚಾರಿ ಪೊಲೀಸರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ.
* ಪೊಲೀಸ್ ವಸತಿ ಗೃಹಗಳಿಗೆ ತೆರಳದಂತೆ ಮಾಧ್ಯಮದವರಿಗೆ ನಿರ್ಬಂಧ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications