Singapore Ship: ಸಿಂಗಾಪುರ್ ಕಂಟೈನರ್ ಹಡಗಿನಲ್ಲಿ ಬೃಹತ್ ಬೆಂಕಿ, 18 ಮಂದಿ ರಕ್ಷಣೆ, 4 ಮಂದಿ ಕಾಣೆ
ಮಂಗಳೂರು, ಜೂನ್ 10: ಅರಬ್ಬಿ ಸಮುದ್ರ ಮಾರ್ಗವಾಗಿ ಶ್ರೀ ಲಂಕಾದ ಕೊಲಂಬೊ ದಿಂದ ಮುಂಬೈಗೆ ಬರುತ್ತಿದ್ದ ಕಂಟೈನರ್ ಹಡಗಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನೀರ ಮಧ್ಯ ನಡೆದ ಈ ದರುಂತದಲ್ಲಿ ಒಟ್ಟು 04 ಮಂದಿ ಕಾಣೆಯಾಗಿದ್ದಾರೆ. ಹಡಗಿನಲ್ಲಿದ್ದ 18 ಮಂದಿ ಸಿಬ್ಬಂದಿಗಳನ್ನು ಭಾರತೀಯ ನೌಕ ಪಡೆ ರಕ್ಷಣೆ ಮಾಡಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಾಣೆಯಾದವರಿಗೆ ಶೋಧ ಕಾರ್ಯ ಮುಂದುವರಿದಿದೆ.
ಮುಂಬೈಗೆ ಹೋಗುತ್ತಿದ್ದ ಸಿಂಗಾಪುರ ಕಂಟೈನರ್ ಹಡಗು (Singapore's MV Wan Hai 503) ಇದಾಗಿದೆ. ಕೇರಳದ ಬೇಪೋರ್ ಕಡಲ ತೀರದಿಂದ 78 ನಾಟಿಕಲ್ ಮೈಲ್ಸ್ ದೂರದ ಆಳದಲ್ಲಿ ಘಟನೆ ಸಂಭವಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಲರ್ಟ್ ಆದ ನೌಕಾಪಡೆ ಹಲವು ಜೀವ ಉಳಿಸಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐವರನ್ನು ದಾಖಲಿಸಲಾಗಿದೆ.

ಕಾಣೆಯಾದವರ ಹುಡುಕಾಟ
ಸಣ್ಣ ಪುಟ್ಟ ಗಾಯಗಳಾದವರಿಗೆ ಮಂಗಳೂರು ಕರಾವಳಿಯ ಕೋಸ್ಟ್ ಗಾರ್ಡ್ ಆರೋಗ್ಯ ಸಿಬ್ಬಂದಿಗಳಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾಣೆಯಾದವರಿಗಾಗಿ ಸಮುದ್ರದ ಆಳದಲ್ಲಿ ತೀವ್ರ ಹುಡುಕಾಟ ಮುಂದುವರಿಸಿದೆ. ಸಮುದ್ರ ಮಧ್ಯ ಹೊತ್ತಿ ಉರಿದ ಕಂಟೈನರ್ ಹಡಗಿನ ಬೆಂಕಿ ಜ್ವಾಲೆಯನ್ನು ಭಾರತೀಯ ನೌಕಾ ಪಡೆಯ ಐಸಿಜಿಎಸ್ ಸಚೇತ್ ಮತ್ತು ಐಸಿಜಿಎಸ್ ಪ್ರೆಹರಿ ಕೂಡಿಕೊಂಡು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆಗೆ ನಾಡಿನ ಜನರು ಕಳವಳ ವ್ಯಕ್ತಪಡಿಸಿದ್ದಾರೆ.
ತೈವಾನ್, ಮ್ಯಾನ್ಮಾರ್, ಇಂಡೋನೇಷಿಯಾದ ಹಾಗೂ ಚೀನಾದವರು ಸೇರಿ ಒಟ್ಟು 18 ಮಂದಿ ಸಹ ಇದ್ದರು ಎನ್ನಲಾಗಿದೆ. ಇದರಲ್ಲಿ ಬಹುತೇಕರನ್ನು ರಕ್ಷಿಸಲಾಗಿದೆ. ಆದರೆ ಕಾಣೆಯಾಗಿರುವವರಿಗಾಗಿ ಹುಡುಕಾಟ ಆರಂಭವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications