ಡಾ. ರಾಜ್ ಸ್ಮಾರಕ ಲೋಕಾರ್ಪಣೆ: ಆಹ್ವಾನಿತರ ಪಟ್ಟಿ
ಬೆಂಗಳೂರು, ಅ 11: ಕುಂಟುತ್ತಾ, ತೆವಳುತ್ತಾ ಸಾಗುತ್ತಿದ್ದ ವರನಟ ಡಾ. ರಾಜಕುಮಾರ್ ಅವರ ಸ್ಮಾರಕ ಲೋಕಾರ್ಪಣೆಗೆ ಅಂತೂ ಇಂತೂ ಕಾಲ ಕೂಡಿಬಂದಿದೆ.
ಬರುವ ತಿಂಗಳು ಭಾನುವಾರ ನವೆಂಬರ್ ಒಂಬತ್ತರಂದು ರಾಜ್ ಸ್ಮಾರಕ ಲೋಕಾರ್ಪಣೆಗೆ ದಿನ ನಿಗದಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಭಾರತೀಯ ಚಿತ್ರರಂಗದ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಗಿದೆ.
ರಾಜ್ ಸ್ಮಾರಕ ನಿರ್ಮಾಣಕ್ಕೆ ಎಂಟು ವರ್ಷ ತಗುಲಿದ್ದು ವಿಷಾದನೀಯ. ಆದರೂ, ಸ್ಮಾರಕ ಸಾರ್ವಜನಿಕರಿಗೆ ಮುಕ್ತವಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ರಾಜ್ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಸಭೆಯಲ್ಲಿ ಭಾಗವಹಿಸಿದ ನಂತರ ಹೇಳಿದರು.
ಈ ಕಾರ್ಯಕ್ರಮಕ್ಕೆ ಹಿಂದಿ ಚಿತ್ರರಂಗದ ದಿಗ್ಗಜ ಅಮಿತಾಬ್ ಬಚ್ಚನ್ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ಅಲ್ಲದೇ, ದಕ್ಷಿಣಭಾರತ ಚಲನಚಿತ್ರರಂಗದ ಪ್ರಮುಖರಾದ ರಜನೀಕಾಂತ್, ಕಮಲಹಾಸನ್, ಮಮ್ಮುಟ್ಟಿ, ಚಿರಂಜೀವಿ ಜೊತೆಗೆ ಕನ್ನಡ ಚಿತ್ರೋದ್ಯಮದವರನ್ನೂ ಆಹ್ವಾನಿಸಲು ನಿರ್ಧರಿಸಲಾಗಿದೆ.
ಎರಡನೇ ಹಂತದಲ್ಲಿ ರಾಜಕುಮಾರ್ ವಸ್ತು ಸಂಗ್ರಹಾಲಯ, ಗ್ರಂಥಾಲಯ ಸೇರಿದಂತೆ ಇತರ ಅನೇಕ ಯೋಜನೆಗಳನ್ನು ರೂಪಿಸಲು ಮುಖ್ಯಮಂತ್ರಿಗಳು ಉತ್ಸುಕರಾಗಿದ್ದಾರೆಂದು ಬರಗೂರು ಹೇಳಿದ್ದಾರೆ.

ಸಭೆಯಲ್ಲಿ ಮುಖ್ಯಮಂತ್ರಿ ಹೊರತಾಗಿ ಗೃಹ ಸಚಿವ ಕೆ ಜೆ ಜಾರ್ಜ್, ಸಚಿವ ದಿನೇಶ್ ಗುಂಡೂರಾವ್, ಪಾರ್ವತಮ್ಮ ರಾಜಕುಮಾರ್, ಶಿವರಾಜ್ ಕುಮಾರ್, ಅಖಿಲ ಕರ್ನಾಟಕ ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್ ಮುಂತಾದವರು ಭಾಗವಹಿಸಿದ್ದರು.
ನಗರದ ಉತ್ತರ ಭಾಗದ ನಂದಿನಿ ಲೇಔಟಿನಲ್ಲಿರುವ ರಾಜ್ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಮಾಡಲಾದ ಕಂಠೀರವ ಸ್ಟುಡಿಯೋದಲ್ಲಿ ಸುಮಾರು ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ ಸ್ಮಾರಕ ನಿರ್ಮಿಸಲು 2006ರಲ್ಲಿ ನಿರ್ಧರಿಸಲಾಗಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications