ಡಾ. ರಾಜ್ ಸ್ಮಾರಕ ಲೋಕಾರ್ಪಣೆ: ಆಹ್ವಾನಿತರ ಪಟ್ಟಿ
ಬೆಂಗಳೂರು, ಅ 11: ಕುಂಟುತ್ತಾ, ತೆವಳುತ್ತಾ ಸಾಗುತ್ತಿದ್ದ ವರನಟ ಡಾ. ರಾಜಕುಮಾರ್ ಅವರ ಸ್ಮಾರಕ ಲೋಕಾರ್ಪಣೆಗೆ ಅಂತೂ ಇಂತೂ ಕಾಲ ಕೂಡಿಬಂದಿದೆ.
ಬರುವ ತಿಂಗಳು ಭಾನುವಾರ ನವೆಂಬರ್ ಒಂಬತ್ತರಂದು ರಾಜ್ ಸ್ಮಾರಕ ಲೋಕಾರ್ಪಣೆಗೆ ದಿನ ನಿಗದಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಭಾರತೀಯ ಚಿತ್ರರಂಗದ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಗಿದೆ.
ರಾಜ್ ಸ್ಮಾರಕ ನಿರ್ಮಾಣಕ್ಕೆ ಎಂಟು ವರ್ಷ ತಗುಲಿದ್ದು ವಿಷಾದನೀಯ. ಆದರೂ, ಸ್ಮಾರಕ ಸಾರ್ವಜನಿಕರಿಗೆ ಮುಕ್ತವಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ರಾಜ್ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಸಭೆಯಲ್ಲಿ ಭಾಗವಹಿಸಿದ ನಂತರ ಹೇಳಿದರು.
ಈ ಕಾರ್ಯಕ್ರಮಕ್ಕೆ ಹಿಂದಿ ಚಿತ್ರರಂಗದ ದಿಗ್ಗಜ ಅಮಿತಾಬ್ ಬಚ್ಚನ್ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ಅಲ್ಲದೇ, ದಕ್ಷಿಣಭಾರತ ಚಲನಚಿತ್ರರಂಗದ ಪ್ರಮುಖರಾದ ರಜನೀಕಾಂತ್, ಕಮಲಹಾಸನ್, ಮಮ್ಮುಟ್ಟಿ, ಚಿರಂಜೀವಿ ಜೊತೆಗೆ ಕನ್ನಡ ಚಿತ್ರೋದ್ಯಮದವರನ್ನೂ ಆಹ್ವಾನಿಸಲು ನಿರ್ಧರಿಸಲಾಗಿದೆ.
ಎರಡನೇ ಹಂತದಲ್ಲಿ ರಾಜಕುಮಾರ್ ವಸ್ತು ಸಂಗ್ರಹಾಲಯ, ಗ್ರಂಥಾಲಯ ಸೇರಿದಂತೆ ಇತರ ಅನೇಕ ಯೋಜನೆಗಳನ್ನು ರೂಪಿಸಲು ಮುಖ್ಯಮಂತ್ರಿಗಳು ಉತ್ಸುಕರಾಗಿದ್ದಾರೆಂದು ಬರಗೂರು ಹೇಳಿದ್ದಾರೆ.

ಸಭೆಯಲ್ಲಿ ಮುಖ್ಯಮಂತ್ರಿ ಹೊರತಾಗಿ ಗೃಹ ಸಚಿವ ಕೆ ಜೆ ಜಾರ್ಜ್, ಸಚಿವ ದಿನೇಶ್ ಗುಂಡೂರಾವ್, ಪಾರ್ವತಮ್ಮ ರಾಜಕುಮಾರ್, ಶಿವರಾಜ್ ಕುಮಾರ್, ಅಖಿಲ ಕರ್ನಾಟಕ ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್ ಮುಂತಾದವರು ಭಾಗವಹಿಸಿದ್ದರು.
ನಗರದ ಉತ್ತರ ಭಾಗದ ನಂದಿನಿ ಲೇಔಟಿನಲ್ಲಿರುವ ರಾಜ್ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಮಾಡಲಾದ ಕಂಠೀರವ ಸ್ಟುಡಿಯೋದಲ್ಲಿ ಸುಮಾರು ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ ಸ್ಮಾರಕ ನಿರ್ಮಿಸಲು 2006ರಲ್ಲಿ ನಿರ್ಧರಿಸಲಾಗಿತ್ತು.
-
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications