ಚುನಾವಣೆಗೂ ಮುನ್ನ ನಾಪತ್ತೆಯಾದ ಮಾಯಾವತಿ, ಓವೈಸಿ, ಪವಾರ್
ಬೆಂಗಳೂರು, ಏಪ್ರಿಲ್ 12: ಕರ್ನಾಟಕ ವಿಧಾನಸಭೆ ಚುನಾವಣೆಯ ಅಚ್ಚರಿಯ ಬೆಳವಣಿಗೆಯಲ್ಲಿ ಬಿಎಸ್ಪಿ ನಾಯಕಿ ಮಾಯಾವತಿ, ಎಐಎಂಐಎಂನ ಅಸಾದುದ್ದೀನ್ ಓವೈಸಿ ಮತ್ತು ಎನ್ ಸಿಪಿಯ ಶರದ್ ಪವಾರ್ ನಾಪತ್ತೆಯಾಗಿದ್ದಾರೆ. ಈ ಹಿಂದೆ ಈ ಮೂರು ಜನ ನಾಯಕರು ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟಿದ್ದರು ಮತ್ತು ಈ ಸಂಬಂಧ ಕಾರ್ಯೋನ್ಮುಖರಾಗಿದ್ದರು. ಆದರೆ ಅವರೀಗ ಚುನಾವಣಾ ಕಣದಿಂದ ಹಿಂದೆ ಸರಿದಂತೆ ಭಾಸವಾಗುತ್ತಿದೆ.
ಮಾಯಾವತಿ ಜೆಡಿಎಸ್ ವರಿಷ್ಠ ದೇವೇಗೌಡರ ಜತೆ ಕೈ ಜೋಡಿಸಿದ್ದು ಹಳೆ ಕಥೆ. 224 ಸ್ಥಾನಗಳಲ್ಲಿ 20 ಸ್ಥಾನಗಳನ್ನು ಜೆಡಿಎಸ್ ಪಕ್ಷ ಬಿಎಸ್ಪಿಗೆ ಬಿಟ್ಟು ಕೊಟ್ಟಿತ್ತು. ಇದಾದ ಬಳಿಕ ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಮಾಯಾವತಿ ಭಾಗವಹಿಸಿ ಕೇಂದ್ರ ಬಿಜೆಪಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಾಯಾವತಿ ವಾಗ್ದಾಳಿ ನಡೆಸಿದ್ದರು.

ಬಿಜೆಪಿಯ 'ಬಿ' ಟೀಂ
ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನ ಮತಗಳನ್ನು ತಿಂದು ಬಿಎಸ್ಪಿ ಬಿಜೆಪಿಗೆ ಸಹಾಯ ಮಾಡುತ್ತಿದೆ ಎಂಬ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರಂತೂ ಮಾಯಾವತಿಯವರನ್ನು ಬಿಜೆಪಿಯ 'ಬಿ' ಟೀಂ ಎಂಬ ಆರೋಪವನ್ನೂ ಮಾಡಿದ್ದರು.
ಹಾಗೆ ನೋಡಿದರೆ ಮಾಯಾವತಿ ಕರ್ನಾಟಕದಲ್ಲಿ ಅರ್ಧ ಡಜನ್ ನಷ್ಟು ಸಮಾವೇಶಗಳನ್ನು ಉದ್ದೇಶಿಸಿ ಭಾಷಣ ಮಾಡಬೇಕಾಗಿತ್ತು. ಜೆಡಿಎಸ್ ಅಂತೂ ಬಿಎಸ್ಪಿ ಜತೆಗಿನ ಮೈತ್ರಿಯನ್ನೇ ತನ್ನ ಘನ ಸಾಧನೆ ಎಂಬಂತೆ ಬಿಂಬಿಸಿತ್ತು. ಆದರೆ ಏಕಾಏಕಿ ಮಾಯಾವತಿಯವರ 'ಆನೆ' ಎಲ್ಲೂ ಕಾಣಿಸುತ್ತಿಲ್ಲ. ಬಿಎಸ್ಪಿ ಅಭ್ಯರ್ಥಿಗಳಂತೂ ಇನ್ನೂ ಪ್ರಚಾರವನ್ನೇ ಆರಂಭಿಸಿಲ್ಲ. ಹೀಗಾಗಿ ಮೈತ್ರಿಯ ಕಥೆ ಏನು ಎಂಬುದು ತಿಳಿಯುತ್ತಿಲ್ಲ.

ಮನಸ್ಸು ಬದಲಾಯಿಸಿದ್ರಾ ಮಾಯಾವತಿ?
ಇಂಥಹದ್ದೊಂದು ಬೆಳವಣಿಗೆಗೆ ಕಾರಣ ಮನಸ್ಸು ಬದಲಾಯಿಸಿ ಮಾಯಾವತಿ ಎನ್ನಲಾಗಿದೆ. ಗೋರಖ್ ಪುರ್ ಮತ್ತು ಫುಲ್ಪುರ್ ಲೋಕಸಭೆ ಉಪಚುನಾವಣೆಗಳಲ್ಲಿ ಎಸ್ಪಿಗೆ ಬೆಂಬಲ ನೀಡಿದ್ದರಿಂದ ಬಿಜೆಪಿ ನೆಲಕಚ್ಚಿತ್ತು. ಬಿಜೆಪಿಯನ್ನು ಸೋಲಿಸಿದ ನಂತರ ಕಮಲ ಪಕ್ಷವನ್ನು ಸೋಲಿಸಲು ಸಾಧ್ಯ ಎಂಬ ಧೈರ್ಯ ಅವರಿಗೆ ಬಂದಂತೆ ಕಾಣಿಸುತ್ತಿದೆ. ಹಾಗಾಗಿ ಅವರು ತನ್ನ ವಿರೋಧಿ ಬಿಜೆಪಿ ಕಾಂಗ್ರೆಸ್ ಅಲ್ಲ ಎಂಬ ತೀರ್ಮಾನಕ್ಕೂ ಬಂದಿರಬಹುದು.
ಇನ್ನು ಅವರ ಪಕ್ಷದವರೂ ಕೂಡ ಕರ್ನಾಟಕದಲ್ಲಿ ಮಾಯಾವತಿ ತಟಸ್ಥ ಧೋರಣೆ ತಾಳುವುದು ಉತ್ತಮ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹಾಗೆ ನೋಡಿದರೆ ಕರ್ನಾಟಕದಲ್ಲಿ ತಟಸ್ಥ ಧೋರಣೆ ತಾಳಲು ಹೊರಟವರಲ್ಲಿ ಮಾಯಾವತಿ ಮೊದಲಿಗರೇನೂ ಅಲ್ಲ.

ಓವೈಸಿ ಎಲ್ಲಿ?
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಎನ್ ಸಿಪಿಯ ಶರದ್ ಪವಾರ್ ಕೂಡ ಮೌನಕ್ಕೆ ಶರಣಾಗಿದ್ದಾರೆ. ವಿಶೇಷವೆಂದರೆ ಈ ಇಬ್ಬರೂ ಜೆಡಿಎಸ್ ಜತೆ ಕೈ ಜೋಡಿಲಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.
ಆರಂಭದಲ್ಲಿ ಎಐಎಂಐಎಂ ಜತೆ ಮೈತ್ರಿಗೆ ಕಾಂಗ್ರೆಸ್ ಉತ್ಸುಕವಾಗಿತ್ತು. ಆದರೆ ಕಾಂಗ್ರೆಸ್ ಬೇಡಿಕೆಯನ್ನು ಓವೈಸಿ ತಳ್ಳಿ ಹಾಕಿದ್ದರು. 50 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಐಎಂಐಎಂ ಮುಂದಾಗತ್ತು. ಇದರ ನಡುವೆಯೇ ಓವೈಸಿ ಮತ್ತು ಜೆಡಿಎಸ್ ಜತೆ ಮಾತುಕತೆಗಳು ನಡೆಯುತ್ತಿದ್ದವು. ಆದರೆ ಅಲ್ಲಿಂದ ಮುಂದೆ ಯಾವ ಬೆಳವಣಿಗಳೂ ನಡೆದ ಬಗ್ಗೆ ವರದಿಗಳು ಬಂದಿಲ್ಲ.

ಬಿಜೆಪಿಗೆ ಲಾಭ ಮಾಡುವ ಮನಸ್ಸು ಎನ್ ಸಿಪಿಗಿಲ್ಲ
ಇನ್ನು ಎನ್ ಸಿಪಿಯದ್ದು ಇದೇ ಕಥೆ. ದೇದೇಗೌಡರು ಬೆಳಗಾವಿ ಮತ್ತು ಬಿಜಾಪುರ ಭಾಗದಲ್ಲಿ ಎನ್ ಸಿಪಿಗೆ 7 ಸ್ಥಾನಗಳನ್ನು ಬಿಟ್ಟುಕೊಡಲು ಹೊರಟಿದ್ದರು. ಇಲ್ಲಿ ಉಭಯ ಪಕ್ಷಗಳು ಬೃಹತ್ ಸಮಾವೇಶ ನಡೆಸಲೂ ಮುಂದಾಗಿದ್ದವು. ಆದರೆ ಕನ್ನಡ ವಿರೋಧಿ ಎಂಇಎಸ್ ಜತೆ ಶರದ್ ಪವಾರ್ ಕೈಜೋಡಿಸಿದ್ದಾರೆ ಎನ್ನುವ ಆರೋಪದಿಂದ ದೇವೇಗೌಡರು ಗರಂ ಆಗಿದ್ದರು. ಇದರಿಂದ ಈ ಮೈತ್ರಿಯೂ ಮುರಿದು ಬಿದ್ದಿದೆ.
ಇದಲ್ಲದೆ ಪವಾರ್ ಗೆ ಕಾಂಗ್ರೆಸ್ ಮತಗಳನ್ನು ಕಿತ್ತುಕೊಂಡು ಬಿಜೆಪಿಗೆ ಸಹಾಯ ಮಾಡುವುದರ ಬಗ್ಗೆಯೂ ಅಷ್ಟಾಗಿ ಮನಸ್ಸಿಲ್ಲ.
ಈ ಬಗ್ಗೆ ದೇವೇಗೌಡರು ಮಾಧ್ಯಮವೊಂದಕ್ಕೆ ನೀಡಿದ ಪ್ರತಿಕ್ರಿಯೆ ಪ್ರಕಾರ ಬಿಎಸ್ಪಿ ಜೊತೆಗಿನ ಮೈತ್ರಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಆದರೆ ಉಳಿದ ವಿವರಗಳನ್ನು ಅವರು ನೀಡಿಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications