ನ್ಯಾಯಾಲಯದಲ್ಲಿ ಕೆಐಎಡಿಬಿ ಪ್ರಕರಣಗಳ: ಜುಲೈ 17ರ ಒಳಗೆ ಅಂತಿಮ ವರದಿ ಸಲ್ಲಿಕೆಗೆ ಸಚಿವರು ಸೂಚನೆ
ಬೆಂಗಳೂರು, ಜೂನ್ 27: ಕರ್ನಾಟಕ ಕೈಗಾರಿಕೆ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿದ ಕೋರ್ಟ್ ಪ್ರಕರಣಗಳ ಅಂಕಿಸಂಖ್ಯೆ, ಅವುಗಳ ಸ್ಥಿತಿಗತಿ, ಸ್ವಾಧೀನ ಪ್ರಕ್ರಿಯೆಯಲ್ಲಿ ಆಗಿರುವ ಲೋಪಗಳು ಬಗ್ಗೆ ಜುಲೈ 17ರ ವೇಳೆಗೆ ಸಮಗ್ರ ವರದಿ ಸಲ್ಲಿಸಬೇಕು. ಹೀಗೆಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಕರಣ ಸಂಬಂಧ ಕೈಗಾರಿಕೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಮಂಗಳವಾರ ಸುದೀರ್ಘ ಸಭೆ ನಡೆಸಿದ ಎಂಬಿ ಪಾಟೀಲರು, ಕೆಐಎಡಿಬಿ ನಿವೇಶನ ಹಂಚಿಕೆ ಸಂಬಂಧ ಕಳೆದ 4-5 ವರ್ಷಗಳಲ್ಲಿ 1,748 ಮೊಕದ್ದಮೆಗಳು ದಾಖಲಾಗಿವೆ. ಈ ಪೈಕಿ 921 ಪ್ರಕರಣಗಳ ವಿಚಾರಣೆ ನಡೆಯುತ್ತಿವೆ.

ಒಟ್ಟು ಪ್ರಕರಣಗಳ ಪೈಕಿ 762 ಕೇಸ್ಗಳಲ್ಲಿ ಸರ್ಕಾರ ಪರ ಆದೇಶ ಬಂದಿದೆ. ಆದರೆ, ಸರ್ಕಾರ ಹಿತಾಸಕ್ತಿ ಇರುವ ಕೆಲವು ಪ್ರಕರಣಗಳಲ್ಲಿ ನಾವು ಮೇಲ್ಮನವಿಯನ್ನೇ ಸಲ್ಲಿಸಿಲ್ಲ. ಇನ್ನು ಮುಂದೆ ಇಂತಹ ಪ್ರಕರಣಗಳಲ್ಲಿ ಎಲ್ಲವನ್ನೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆಯ ಗಮನಕ್ಕೆ ತಂದು, ಸಲಹೆ ಪಡೆಯಬೇಕು. ಜೊತೆಗೆ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನೂ ಕೇಳಬೇಕು ಎಂದು ಹೇಳಿದರು.
ಅಧಿಸೂಚನೆಯನ್ನೇ ಹೊರಡಿಸಿಲ್ಲ: ಸಚಿವರು ಗರಂ
ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 10 ವರ್ಷಗಳ ಹಿಂದೆಯೇ 92 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದ್ದರೂ ಅಂತಿಮ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಇದು ಈಗ ಕಗ್ಗಂಟಾಗಿದೆ. ಇದರಲ್ಲಿ ಕೆಲವರು ಅಧಿಸೂಚನೆಯ ಪರವಾಗಿದ್ದರೆ, ಕೆಲವರು ವಿರೋಧಿಸುತ್ತಿದ್ದಾರೆ. ಇದನ್ನು ಸಮಗ್ರವಾಗಿ ಪರಿಶೀಲಿಸಿ, ಸೂಕ್ತ ರೀತಿಯಲ್ಲಿ ಬಗೆಹರಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಸರಿಯಾದ ವಿಧಿವಿಧಾನ ಅನುಸರಿಸದೆ ಇರುವುದೇ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಲು ಕಾರಣವಾಗಿವೆ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು.
ಕೈಗಾರಿಕೆಗಳ ಬಳಕೆಗೆಂದು ಸರ್ಕಾರ ಬಳಿ ಈಗ 11,000 ಎಕರೆ ಭೂಮಿ ಇದೆ. ಇದರ ಮೌಲ್ಯ 8 ರಿಂದ 10 ಸಾವಿರ ಕೋಟಿ ರೂಪಾಯಿ ಆಗುತ್ತದೆ. ರಾಜ್ಯದಲ್ಲಿ ಎಲ್ಲೆಂದರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಮಾಡುವ ಬದಲು ಬೇಡಿಕೆ ಆಧರಿಸಿ ಮಾಡಬೇಕು. ಇದರಲ್ಲಿ ರಾಜಕೀಯ ಒತ್ತಡಕ್ಕೆ ಮಣಿಯಬಾರದು.

ಇದಷ್ಟೇ ಅಲ್ಲದೇ ಒಂದು ನಿರ್ದಿಷ್ಟ ಮಾದರಿಯ ಉದ್ಯಮಗಳಿಗೆ ಮೀಸಲಿಟ್ಟಿರುವ ಜಾಗಗಳಲ್ಲಿ ಅಂತಹ ಉದ್ದಿಮೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬಾರದಿದ್ದರೆ, ಅಲ್ಲಿರುವ ಜಾಗವನ್ನು ಉಳಿದ ಉದ್ದಿಮೆಗಳಿಗೂ ಒದಗಿಸುವ ನೀತಿಯನ್ನು ಅಳವಡಿಸಿ ಕೊಳ್ಳಲಾಗುವುದು ಎಂದು ಸಚಿವರು ವಿವರಿಸಿದರು.
ಉದ್ದಿಮೆಗಳನ್ನು ಪ್ರೋತ್ಸಾಹಿಸಬೇಕು
ರಾಜ್ಯದಲ್ಲಿ ಅಗತ್ಯ ಆಧಾರಿತ ಉದ್ದಿಮೆಗಳನ್ನು ಪ್ರೋತ್ಸಾಹಿಸಬೇಕು. ಇಲ್ಲದೆ ಹೋದರೆ ಎಲ್ಲವೂ ಬರೀ ಭೂಸ್ವಾಧೀನದ ಹಂತದಲ್ಲೇ ನಿಂತು ಹೋಗುತ್ತದೆ. ನಮ್ಮಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ವಶಪಡಿಸಿಕೊಂಡಿರುವ ಜಮೀನು ದಶಕಗಳ ನಂತರವೂ ಹಾಗೆಯೇ ಉಳಿದುಕೊಂಡಿರುವುದಕ್ಕೆ ಇದೇ ಮೂಲ ಕಾರಣವಾಗಿದೆ ಎಂದು ಪಾಟೀಲ ತಿಳಿಸಿದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಆಯುಕ್ತ ಮಹೇಶ್ ಮುಂತಾದವರು ಉಪಸ್ಥಿತರಿದ್ದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ












Click it and Unblock the Notifications