Get Updates
Get notified of breaking news, exclusive insights, and must-see stories!

ಕರ್ನಾಟಕ ಸರ್ಕಾರ: ಮಹೀಂದ್ರ, ಜಿಂದಾಲ್, ಟಾಟಾ, ಬ್ಲ್ಯಾಕ್ ಸ್ಟೋನ್, ಆರ್ ಪಿಜಿ ಗ್ರೂಪ್ ಮುಖ್ಯಸ್ಥರ ಭೇಟಿ

ಮುಂಬೈ, ಡಿಸೆಂಬರ್ 20: ಕರ್ನಾಟಕ ರಾಜ್ಯದಲ್ಲಿ ಭಾರೀ ಬಂಡವಾಳ ಹೂಡಿಕೆಗೆ ಆಕರ್ಷಿಸಲು ರಾಜ್ಯ ಸರ್ಕಾರದ ಸಚಿವರು ಮುಂಬೈ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿ ದೇಶದ ಪ್ರಮುಖ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಇರುವ ವಿಫುಲ ಅವಕಾಶ, ಸಹಕಾರ ಕುರಿತು ರಾಜ್ಯದ ಪರವಾಗಿ ಸಚಿವರು ತಿಳಿಸಿದ್ದಾರೆ.

ಹೌದು, ರಾಜ್ಯದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಅವರು ಮುಂಬೈಗೆ ಖುದ್ದು ಭೇಟಿ ನೀಡಿದ್ದಾರೆ. ಮಂಗಳವಾರ ಹಲವು ದೈತ್ಯ ಕಂಪನಿಗಳ ಪ್ರಮುಖರೊಂದಿಗೆ ಬಂಡವಾಳ ಹೂಡಿಕೆ ಕುರಿತು ಚರ್ಚೆ ನಡೆಸಿದರು.

MB Patil Led Delegation Held Discussions with Tata Group, Mahendra, JSW, RPG About Investment State

ಪ್ರವಾಸದ ಮೊದಲ ದಿನದಂದು ಅವರು ಮಹೀಂದ್ರ, ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್ ಡಬ್ಲ್ಯು), ಟಾಟಾ, ಬ್ಲ್ಯಾಕ್ ಸ್ಟೋನ್ ಮತ್ತು ಆರ್ ಪಿಜಿ ಗ್ರೂಪ್ ನ ಪ್ರಮುಖರನ್ನು ಭೇಟಿ ಮಾಡಿ, ರಾಜ್ಯದಲ್ಲಿರುವ ಹೂಡಿಕೆಗೆ ಪೂರಕವಾದ ನೀತಿ, ಉತ್ತೇಜನ, ಪ್ರೋತ್ಸಾಹ ಕ್ರಮಗಳು, ವಿಶೇಷ ರಿಯಾಯಿತಿಗಳು, ಸೌಲಭ್ಯಗಳೆಲ್ಲವನ್ನೂ ವಿವರಿಸಿದರು.

ಈ ಮಹತ್ವಾಕಾಂಕ್ಷಿ ಮಾತುಕತೆಯಲ್ಲಿ ಮಹೀಂದ್ರ ಸಮೂಹದ ಪರವಾಗಿ ಅದರ ಅಂಗಸಂಸ್ಥೆಗಳಾದ ಆಟೋ ಅಂಡ್ ಫಾರಂ ವಿಭಾಗದ ಅಧ್ಯಕ್ಷ ವಿನೋದ್ ಸಹಾಯ್, ಜಿಂದಾಲ್ ಸಮೂಹದ ಅಧ್ಯಕ್ಷ ಸಜ್ಜನ್ ಜಿಂದಾಲ್ ಮತ್ತು ಪಾರ್ಥ ಜಿಂದಾಲ್, ಟಾಟಾ ಸಮೂಹದ ಮುಖ್ಯಸ್ಥ ಎನ್. ಚಂದ್ರಶೇಖರನ್, ಆರ್ ಪಿಜಿ ಸಮೂಹದ ಉಪಾಧ್ಯಕ್ಷ ಅನಂತ್ ಗೊಯೆಂಕ ಪಾಲ್ಗೊಂಡಿದ್ದರು. ಸಚಿವರು ಬುಧವಾರ ಕೂಡ ಬಿರ್ಲಾ ಮತ್ತು ರಿಲಯನ್ಸ್ ಉದ್ಯಮ ಸಮೂಹ ಸೇರಿದಂತೆ ಹಲವು ಕಂಪನಿಗಳ ಪ್ರಮುಖರನ್ನು ಭೇಟಿ ಮಾಡಿದರು.

ಅಮೆರಿಕಾ ಪ್ರವಾಸದಿಂದ ಭಾರೀ ಹೂಡಿಕೆ

ಎಂಬಿ ಪಾಟೀಲ ಅವರು, ಇತ್ತೀಚೆಗೆ ರಾಜ್ಯಕ್ಕೆ ಬಂಡವಾಳ ಆಕರ್ಷಿಸಬೇಕೆಂಬ ಉದ್ದೇಶದೊಂದಿಗೆ ಅಮೆರಿಕಕ್ಕೆ 12 ದಿನಗಳ ಭೇಟಿ ನೀಡಿದರು. 25ಕ್ಕೂ ಹೆಚ್ಚು ಕಂಪನಿಗಳ ಪ್ರಮುಖರೊಂದಿಗೆ ಮಾತುಕತೆ ನಡೆಸಿದ್ದರು. ಈ ಉಪಕ್ರಮದಿಂದಾಗಿ ರಾಜ್ಯಕ್ಕೆ 25 ಸಾವಿರ ಕೋಟಿ ರೂ. ಮೊತ್ತದ ಹೂಡಿಕೆ ಖಾತ್ರಿಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು.

MB Patil Led Delegation Held Discussions with Tata Group, Mahendra, JSW, RPG About Investment State

ಈ ಸಂದರ್ಭದಲ್ಲಿ ಉದ್ಯಮಿಗಳೊಂದಿಗೆ ಮಾತನಾಡಿದ ಎಂಬಿ ಪಾಟೀಲ್ ಅವರು, ಕರ್ನಾಟಕವು ಅತ್ಯುತ್ತಮವಾದ ಕೈಗಾರಿಕಾ ನೀತಿಯನ್ನು ಹೊಂದಿದೆ. ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿದ್ಯುನ್ಮಾನ, ಸೆಮಿ ಕಂಡಕ್ಟರ್ ಉತ್ಪಾದನೆ, ಆರೋಗ್ಯ ಸೇವೆಗಳು, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣ, ಮಾನವ ಸಂಪನ್ಮೂಲ ಅಭಿವೃದ್ಧಿ, ನೈಸರ್ಗಿಕ ಸಂಪನ್ಮೂಲ ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ ಇತ್ಯಾದಿ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ.

ಬಂಡವಾಳ ಹೂಡಿಕೆಗೆ ಆಹ್ವಾನ

ನೇರ ವಿದೇಶಿ ಹೂಡಿಕೆ ಆಕರ್ಷಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ಸಂಶೋಧನೆ, ಆವಿಷ್ಕಾರ ಮತ್ತು ನಾವೀನ್ಯತೆ ಸೂಚ್ಯಂಕದಲ್ಲಿ ಕೂಡ ಗಮನಾರ್ಹ ಜಾಲವನ್ನು ಹೊಂದಿದೆ. ಹೀಗಾಗಿ, ಈಗಾಗಲೇ ರಾಜ್ಯದಲ್ಲಿ ಹೂಡಿಕೆ ಮಾಡಿರುವ ಕಂಪನಿಗಳು ಮತ್ತಷ್ಟು ಕ್ಷೇತ್ರಗಳಲ್ಲಿ ಬಂಡವಾಳ ತೊಡಗಿಸಬೇಕು ಎಂದು ಹೇಳಿದರು.

ಅಲ್ಲದೆ, ರಾಜ್ಯ ಸರ್ಕಾರ ಬೆಂಗಳೂರಿನ ಸಮೀಪದಲ್ಲಿ ಅತ್ಯಾಧುನಿಕ ಮತ್ತು ವಿಶ್ವ ದರ್ಜೆಯ ಜ್ಞಾನ, ಆರೋಗ್ಯ, ಸಂಶೋಧನೆ ಮತ್ತು ನಾವೀನ್ಯ ಸಿಟಿ (ಕೆಎಚ್ಐಆರ್ ಸಿಟಿ)ಯನ್ನು 2,000 ಎಕರೆ ವಿಸ್ತೀರ್ಣದಲ್ಲಿ ಸ್ಥಾಪಿಸುತ್ತಿದೆ. ಇದರ ಜತೆಯಲ್ಲೇ ಮೂಲಸೌಕರ್ಯ ಅಭಿವೃದ್ಧಿಗೂ ಆದ್ಯತೆ ಕೊಡುತ್ತಿದೆ. ಒಂಬತ್ತು ಉದ್ಯಮ ವಲಯಗಳನ್ನು ಗುರುತಿಸಿದ್ದು, ಅವುಗಳ ರಚನಾತ್ಮಕ ಅಭಿವೃದ್ಧಿಗೆ ವಿಷನ್ ಗ್ರೂಪ್ಸ್ ರಚಿಸಲಾಗಿದೆ.

ಬಿಯಾಂಡ್ ಬೆಂಗಳೂರು ಸೇರಿದಂತೆ ಹಲವು ಉಪಕ್ರಮಗಳ ಮೂಲಕ ರಾಜ್ಯದ ಎಲ್ಲ ಭಾಗಗಳಲ್ಲಿ ಕೈಗಾರಿಕಾ ಬೆಳವಣಿಗೆ ಆಗಬೇಕೆಂಬ ಗುರಿ ಇಟ್ಟುಕೊಂಡಿದೆ. ಜೊತೆಗೆ ಉದ್ಯಮಿಗಳಿಗೆ ಯಾವುದೇ ಅಡಚಣೆ ಇಲ್ಲದೆ ಏಕಗವಾಕ್ಷಿ ವಿಧಾನದಲ್ಲಿ ಅಗತ್ಯ ಅನುಮತಿಗಳನ್ನೆಲ್ಲ ನೀಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಇದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+