ಎಂಬಿಬಿಎಸ್ ಪ್ರವೇಶ: ಹೊಸದಾಗಿ ರಾಜ್ಯ ಕ್ರೀಡಾ ಕೋಟಾ ನಿಗದಿಗೆ ಆದೇಶ
ಬೆಂಗಳೂರು, ಡಿಸೆಂಬರ್ 20; ಎಂಬಿಬಿಎಸ್ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ರಾಜ್ಯದ ಕ್ರೀಡಾ ಕೋಟಾದ ಶ್ರೇಯಾಂಕ ಮರು ನಿಗದಿಗೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊಸದಾಗಿ ಕೋಟಾ ನಿಗದಿ ಮಾಡಿ ಆ ಕುರಿತ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್, ಸರಕಾರ ಮತ್ತು ರಾಜ್ಯ ಯುವಜನ ವ್ಯವಹಾರ ಮತ್ತು ಕ್ರೀಡಾ ಇಲಾಖೆಗೆ ಆದೇಶ ನೀಡಿದೆ.
ಆ ಮೂಲಕ 18 ವರ್ಷದ ಡೈವಿಂಗ್ ಚಾಂಪಿಯನ್ ಅದಿತಿ ದಿನೇಶ್ರಾವ್ ನೆರವಿಗೆ ಧಾವಿಸಿದೆ. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹೊಸದಾಗಿ ರೂಪಿಸುವ ranking ಅನ್ವಯ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶವನ್ನು ಖಾತ್ರಿಪಡಿಸಬೇಕು ಎಂದೂ ಸಹ ನ್ಯಾಯಪೀಠ ಕೆಇಎಗೆ ನಿರ್ದೇಶಿಸಿದೆ. ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯಪೀಠ ಈ ಆದೇಶವನ್ನು ನೀಡಿದೆ.

ಕೋರ್ಟ್ ಆದೇಶವೇನಿದೆ?; 'ಕ್ರೀಡಾ ಕೋಟಾದಡಿ ಅರ್ಹತಾ ಮಾನದಂಡ ಅತ್ಯಂತ ಸ್ಪಷ್ಟವಾಗಿದೆ, ಅದೆಂದರೆ ಅಭ್ಯರ್ಥಿಗಳು ಅಂತಾರಾಷ್ಟ್ರೀಯ ಸ್ಪರ್ಧೆಗಳು/ ಚಾಂಪಿಯನ್ಶಿಪ್ಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪದಕ/ ಕಪ್ಗಳನ್ನು ಜಯಿಸಿರಬೇಕು. ಅದರಂತೆ ಅರ್ಜಿದಾರರು ಭಾರತೀಯ ಈಜು ಫೆಡರೇಷನ್ ಆಯೋಜಿಸಿದ್ದ ಚಾಂಪಿಯನ್ಶಿಪ್ ಗಳಲ್ಲಿ 4 ಚಿನ್ನ, 3 ಬೆಳ್ಳಿ ಮತ್ತು ಒಂದು ಕಂಚಿನ ಪದಕ ಗೆದ್ದಿದ್ದಾರೆ, ಆ ಬಗ್ಗೆ ಯಾವುದೇ ತಕರಾರು ಎತ್ತಿಲ್ಲ' ಎಂದು ನ್ಯಾಯಪೀಠ ಹೇಳಿದೆ.
ಪ್ರತಿವಾದಿ ಮೂವರು ಆಟಗಾರರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಿರಬಹುದು, ಆದರೆ ಅವರು ಪದಕಗಳನ್ನು ಜಯಿಸಿಲ್ಲ, ಹಾಗಾಗಿ ಅವರು ಕ್ರೀಡಾಕೋಟಾದ ಅರ್ಹ ಮಾನದಂಡದ ವ್ಯಾಪ್ತಿಗೆ ಒಳಪಡುವುದಿಲ್ಲ. ಈ ಅಂಶವನ್ನು ಪರಿಗಣಿಸುವಲ್ಲಿ ಸಮಿತಿ ವಿಫಲವಾಗಿದೆ. ಮೊದಲು ಪ್ರಕಟಿಸಿದ್ದ ಪಟ್ಟಿಯಲ್ಲಿ ಅರ್ಜಿದಾರರು 10ನೇ ಶ್ರೇಯಾಂಕದಲ್ಲಿದ್ದರು, ಆನಂತರ ಪ್ರತಿವಾದಿಗಳಿದ್ದರು.
ಆದರೆ ಆನಂತರ ಪರಿಷ್ಕೃತ ಶ್ರೇಯಾಂಕದಲ್ಲಿ ಅರ್ಜಿದಾರರು 16ನೇ ಸ್ಥಾನದಲ್ಲಿದ್ದರು, ಅದಕ್ಕೂ ಮೊದಲಿನ ಶ್ರೇಯಾಂಕದಲ್ಲಿ ಮೂವರು ಆಟಗಾರರಿದ್ದಾರೆ. ಇದು ಸರಿಯಲ್ಲ. ಹಾಗಾಗಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹೊಸದಾಗಿ ಶ್ರೇಯಾಂಕ ನಿಗದಿಪಡಿಸಿ, ಕೆಇಎಗೆ ಸಲ್ಲಿಕೆ ಮಾಡಬೇಕೆಂದು ನ್ಯಾಯಾಲಯ ನಿರ್ದೇಶನ ನೀಡಿದೆ.
ಅರ್ಜಿದಾರರ ವಾದವೇನು?; ಎಂಬಿಬಿಎಸ್ ಸೀಟು ಸಿಗದೆ ಬಿಡಿಎಸ್ ಕೋರ್ಸ್ ಸೇರಿದ್ದ ಅರ್ಜಿದಾರ ಅಭ್ಯರ್ಥಿ ಅದಿತಿ, ಮೂವರು ಚೆಸ್ ಆಟಗಾರರಾದ ಸಾತ್ವಿಕ್ ಶಿವಾನಂದ್, ಎಸ್. ಆರ್. ಪ್ರತಿಮಾ ಮತ್ತು ಖುಷಿ ಎಂ. ಹೊಂಬಾಳ್ ಅವರಿಗೆ ಕ್ರೀಡಾಕೋಟಾದಲ್ಲಿ ಪ್ರವೇಶ ನೀಡಿರುವ ಕ್ರಮವನ್ನು ಪ್ರಶ್ನಿಸಿದ್ದರು.
ಅರ್ಜಿದಾರರ ಪರ ವಕೀಲರು, ಅಧಿಕಾರಿಗಳು ಚೆಸ್ ಅನ್ನು ಅಂತಾರಾಷ್ಟ್ರೀಯ ಕ್ರೀಡೆ ಎಂದು ಪರಿಗಣಿಸಿ ಮೂವರು ಆಟಗಾರರ ಹೆಸರನ್ನು ಅರ್ಜಿದಾರರಿಗಿಂತ ಶ್ರೇಯಾಂಕ ಪಟ್ಟಿಯಲ್ಲಿ ಮೇಲೆ ಸೇರಿಸಿ ಅವರಿಗೆ ಪ್ರವೇಶ ಸಿಗುವಂತೆ ಮಾಡಲಾಗಿದೆ. ಆ ವೇಳೆ ಕನಿಷ್ಠ ಅರ್ಜಿದಾರರಿಗೆ ತಮ್ಮ ಅಹವಾಲು ಸಲ್ಲಿಸಲೂ ಸಹ ಅವಕಾಶ ನೀಡಿಲ್ಲ ಎಂದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications