ಎಂ.ಸಿ.ನಾಣಯ್ಯ ತಟಸ್ಥ, ಕೊಡಗಿನಲ್ಲಿ ಜೆಡಿಎಸ್ ಒಡೆದ ಮನೆ!
ಮಡಿಕೇರಿ, ಡಿಸೆಂಬರ್ 21 : ವಿಧಾನಪರಿಷತ್ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದರೂ, ಕೊಡಗಿನಲ್ಲಿ ಜೆಡಿಎಸ್ ಒಡೆದ ಮನೆಯಾಗಿದೆ. ಕಳೆದ ಕೆಲವು ವರ್ಷಗಳಿಂದ ಜಿಲ್ಲೆಯಲ್ಲಿ ಅಸ್ತಿತ್ವಕ್ಕಾಗಿ ಹೋರಾಟ ಮಾಡುತ್ತಲೇ ಬಂದಿರುವ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ಬೆಳೆಯಲು ಸಾಧ್ಯವಾಗಿಲ್ಲ.
ಒಂದು ಕಾಲದಲ್ಲಿ ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ನೇತೃತ್ವದಲ್ಲಿ ಒಂದಷ್ಟು ಮುಖಂಡರು ಪಕ್ಷದಲ್ಲಿದ್ದು ಜಿಲ್ಲೆಯಲ್ಲಿ ಕಾರ್ಯಕರ್ತರ ಪಡೆಯೂ ಇತ್ತು. ಟಿ.ಪಿ.ರಮೇಶ್, ಬಿ.ಎ.ಜೀವಿಜಯ, ವಿ.ಪಿ.ಶಶಿಧರ್ ಮೊದಲಾದ ಘಟಾನುಘಟಿ ನಾಯಕರಿದ್ದರು. [ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕೃತ!]

ಜನತಾದಳ ಹೋಳಾದಾಗ ಒಂದಷ್ಟು ಮಂದಿ ತಟಸ್ಥರಾದರೆ ಮತ್ತೆ ಕೆಲವರು ಬೇರೆ ಪಕ್ಷಗಳಿಗೆ ವಲಸೆ ಹೋದರು. ಈ ಸಂದರ್ಭ ಎಂ.ಸಿ.ನಾಣಯ್ಯ ಅವರು ತಟಸ್ಥರಾಗಿ ಉಳಿದು ಬಿಟ್ಟರು. ಇದರ ನಡುವೆಯೂ ಪಕ್ಷಕ್ಕಾಗಿ ಹೋರಾಟ ಮಾಡಿಕೊಂಡು ಬಂದಿದ್ದ ವಿ.ಪಿ.ಶಶಿಧರ್ ಇತ್ತೀಚೆಗಷ್ಟೇ ಕಾಂಗ್ರೆಸ್ನತ್ತ ಮುಖ ಮಾಡಿದರು. ಸದ್ಯ, ಜೆಡಿಎಸ್ನಲ್ಲಿ ಪ್ರಭಾವಿ ನಾಯಕರೇ ಇಲ್ಲದಂತಾಗಿದೆ. ['ಪರಿಷತ್ ಚುನಾವಣೆ ಸೋಲಿನ ಹೊಣೆ ಹೊರುವುದಿಲ್ಲ']
ಕಳೆದ ಬಾರಿ ಎಂ.ಸಿ.ನಾಣಯ್ಯ ಅವರಿಗೆ ವಿಧಾನಪರಿಷತ್ನಲ್ಲಿ ಸ್ಥಾನ ನೀಡಲಾಗಿತ್ತು. ಅದರ ಋಣ ತೀರಿಸುವ ಸಲುವಾಗಿ ಎಂ.ಸಿ.ನಾಣಯ್ಯ ಅವರು ಪಕ್ಷಕ್ಕಾಗಿ ಒಂದಷ್ಟು ಕೆಲಸ ಮಾಡಿದ್ದರು. ಈ ಬಾರಿ ಎಂ.ಸಿ.ನಾಣಯ್ಯ ಅವರನ್ನು ಕಡೆಗಣಿಸಲಾಗಿದೆ. ಪರಿಣಾಮ ಜೆಡಿಎಸ್ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದುವರೆಗೆ ಎಲ್ಲೂ ಕಾಣಿಸಿಕೊಳ್ಳದ ಸಂಕೇತ್ ಪೂವಯ್ಯ ಮುಖ್ಯವಾಹಿನಿಗೆ ಬಂದಿದ್ದು, ಚುನಾವಣೆಗೆ ಟಿಕೆಟ್ ಪಡೆದಿದ್ದಾರೆ. [ಪರಿಷತ್ ಚುನಾವಣೆ : ಕಣದಲ್ಲಿರುವ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ]
ಇದು ಸುಮಾರು 26 ವರ್ಷಗಳ ಕಾಲ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಪ್ರಭಾವಿ ನಾಯಕ ಎಂಬ ಹೆಗ್ಗಳಿಕೆ ಪಡೆದಿದ್ದ ಎಂ.ಸಿ.ನಾಣಯ್ಯ ಅವರ ಅತೃಪ್ತಿಗೆ ಕಾರಣವಾಗಿದೆ. ಅವರು ಒಂದಷ್ಟು ಅತೃಪ್ತರನ್ನು ಸೇರಿಸಿ ಸಭೆ ನಡೆಸಿ ತಟಸ್ಥರಾಗಿ ಇರಲು ತೀರ್ಮಾನಿಸಿದ್ದಾರೆ. ಇದು ಜೆಡಿಎಸ್ನಲ್ಲಿ ಎಲ್ಲವೂ ಸರಿಯಿಲ್ಲ ಎಂದು ಬಹಿರಂಗಪಡಿಸಿದೆ.
ಎಂ.ಸಿ.ನಾಣಯ್ಯ ಅವರ ವರ್ತನೆಯಿಂದ ಸಿಡಿಮಿಡಿಗೊಂಡಿರುವ ವಿಧಾನಪರಿಷತ್ನ ಜೆಡಿಎಸ್ ಅಭ್ಯರ್ಥಿ ಸಂಕೇತ್ ಪೂವಯ್ಯ ಅವರು, ಎಂ.ಸಿ.ನಾಣಯ್ಯ ಮತ್ತು ಅವರ ಬೆಂಬಲಿಗರು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಪಕ್ಷದ ವರಿಷ್ಠರಿಗೆ ದೂರು ನೀಡಲು ಮುಂದಾಗಿದ್ದಾರೆ.
ಜೀವಿಜಯ ಅವರ ವಿಶೇಷ ಪ್ರಯತ್ನದಿಂದಾಗಿ ಜೆಡಿಎಸ್ ಕೊಡಗಿನಲ್ಲಿ ಉಳಿದುಕೊಂಡಿದೆ ಎಂದಿರುವ ಸಂಕೇತ್ ಪೂವಯ್ಯ ಅವರು ಜಿಲ್ಲೆಗೆ ಎಂ.ಸಿ. ನಾಣಯ್ಯ ಅವರ ಕೊಡುಗೆ ಏನು? ಎಂದು ಪ್ರಶ್ನಿಸಿದ್ದಾರೆ. ಒಟ್ಟಾರೆ ಜೆಡಿಎಸ್ನಲ್ಲಿನ ಒಡಕು ಬಿಜೆಪಿ ಮತ್ತು ಕಾಂಗ್ರೆಸ್ಗೆ ವರದಾನವಾಗುವುದಂತು ಖಚಿತ. ಡಿಸೆಂಬರ್ 27ರಂದು ವಿಧಾನಪರಿಷತ್ ಚುನಾವಣೆಗೆ ಮತದಾನ ನಡೆಯಲಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications