ನಾನು-ಯಡಿಯೂರಪ್ಪ ಒಂದೇ ಜೀವ, ಎರಡು ದೇಹ ಅಂದರಪ್ಪೋ ಈಶ್ವರಪ್ಪ
ಕೊಪ್ಪಳದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಮತ್ತೊಮ್ಮೆ ರಾಗ ಬದಲಿಸಿದ್ದಾರೆ. ನಾನು ಹಾಗೂ ಬಿಎಸ್ ವೈ ಒಂದೇ ಜೀವ ಎರಡು ದೇಹ ಇದ್ದಂತೆ ಎಂದಿದ್ದಾರೆ.
ಕೊಪ್ಪಳ, ಮೇ 17: ಈ ಸುದ್ದಿಯನ್ನು ಅರ್ಥೈಸಿಕೊಳ್ಳುವುದು ಹೇಗೆ ಅಂತ ಫುಲ್ ಕನ್ ಫ್ಯೂಸ್ ಆಗುತ್ತಿದೆ. ಏಕೆಂದರೆ ಇದು ವಿಧಾನಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಅವರಿಗೆ ಸಂಬಂಧಿಸಿದ್ದು. ಇಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಎಂಥ ಮಾತು ಹೇಳಿದ್ದಾರೆ ಗೊತ್ತಾ? ಯಡಿಯೂರಪ್ಪ ಹಾಗೂ ನಾನು ಒಂದೇ ಜೀವ-ಎರಡು ದೇಹ ಇದ್ದ ಹಾಗೆ. ಹಿಂದೆಯೂ ಹಾಗೇ ಇದ್ದೆವು. ಈಗಲೂ ಹಾಗೇ ಇದ್ದೀವಿ. ಮುಂದೇಯೂ ಹೀಗೇ ಇರ್ತೀವಿ ಎಂದಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಣ್ಣ ಬ್ರಿಗೇಡ್ ನಲ್ಲಿ ನಾನು ಪದಾಧಿಕಾರಿ ಏನಲ್ಲ. ಹಿಂದುಳಿದವರು-ದಲಿತರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನ್ಯಾಯ ಒದಗಿಸಲಿಲ್ಲ ಎಂಬ ಸಿಟ್ಟಿದೆ. ಅದನ್ನು ಹೊರಹಾಕಲು ಹುಟ್ಟಿಕೊಂಡ ಸಂಘಟನೆಯೇ ರಾಯಣ್ಣ ಬ್ರಿಗೇಡ್ ಎಂದು ಅವರು ಹೇಳಿದ್ದಾರೆ.[ಕಾಂಗ್ರೆಸ್ ಹುಳುಕು ತೋರಿಸಲು ಹೋದ ಬಿಜೆಪಿ ಬಣ್ಣ ಬಯಲು]

ಆದರೆ, ಬ್ರಿಗೇಡ್ ಕೆಲಸವನ್ನು ನಾನು ನಿಲ್ಲಿಸುವುದಿಲ್ಲ. ಸಂಘಟನೆಯಿಂದ ಕರೆದಾಗ ಖಂಡಿತಾ ಹೋಗ್ತೀನಿ. ಇನ್ನು ಸಂಘಟನೆ ಬಗ್ಗೆ ಯಡಿಯೂರಪ್ಪ ಅವರಿಗೆ ಇರುವ ಅಸಮಾಧಾನದ ಬಗ್ಗೆ ಅವರನ್ನೇ ಕೇಳಬೇಕು ಎಂದು ಹೇಳಿದ ಈಶ್ವರಪ್ಪ, ರಾಜ್ಯ ಬಿಜೆಪಿಯಲ್ಲಿ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳಿವೆ ಎಂದು ಕೂಡ ಹೇಳಿದರು. ಆದರೆ ಅದನ್ನು ಸರಿ ಮಾಡಿಕೊಳ್ತೀವಿ. ಮುಂದಿನ ವಿಧಾನಸಭೆ ಚುನಾವಣೆಗೆ ಬಿಎಸ್ ವೈ ನೇತೃತ್ವ ವಹಿಸುತ್ತಾರೆ ಎಂದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications