Siddaramaiah Oath: ಸಿದ್ದರಾಮಯ್ಯ ಎಂಬ ಹೆಸರಿನ ನಾನು.......ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು, ಮೇ 20: ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್‌ ಜನಸಾಗರದ ಮಧ್ಯೆ ಪ್ರಮಾಣ ವಚನ ಸ್ವೀಕರಿಸಿದರು.

ಮಾಜಿ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು 2ನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತೆ ಅಧಿಕಾರ ವಹಿಸಿಕೊಂಡರು. ಅವರೊಂದಿಗೆ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಕೂಡ ಪ್ರಮಾಣವಚನ ಸ್ವೀಕರಿಸಿದರು. ಈ ಇಬ್ಬರಿಗೂ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಪ್ರಮಾಣವಚನ ಬೋಧಿಸಿದರು.

Me Siddaramaiah Taking Oath as The Chief Minister of Indian State of Karnataka

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಬಳಿಕ ಸಚಿವರಾಗಿ ಬಬಲೇಶ್ವರ ಕ್ಷೇತ್ರದ ಶಾಸಕ, ಮಾಜಿ ಸಚಿವ ಎಂಬಿ ಪಾಟೀಲ್‌, ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ, ಯಮಕನಮರಡಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಸತೀಶ್‌ ಜಾರಕಿಹೊಳಿ, ಮಾಜಿ ಸಚಿವ ಕೆಜೆ ಜಾರ್ಜ್‌, ಬಿಟಿಎಂ ಕ್ಷೇತ್ರದ ಶಾಸಕ ರಾಮಲಿಂಗರೆಡ್ಡಿ, ಕೊರಟಗೆರೆ ಕ್ಷೇತ್ರಸ ಶಾಸಕ ಡಾ.ಜಿ. ಪರಮೇಶ್ವರ್‌, ದೇವನಹಳ್ಳಿ ಕ್ಷೇತ್ರದ ಕೆಎಚ್‌ ಮುನಿಯಪ್ಪ ಹಾಗೂ ಚಾಮರಾಜಪೇಟೆ ಕ್ಷೇತ್ರದ ಜಮೀರ್‌ ಅಹಮದ್‌ ಖಾನ್‌ ಅವರು ಪ್ರಮಾಣವಚನ ಸ್ವೀಕರಿಸಿದರು.

2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳ ಒಗ್ಗಟ್ಟಿನ ಬಲದ ಮಧ್ಯೆ ಇಬ್ಬರು ಹಿರಿಯ ನಾಯಕರ ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ಉನ್ನತ ನಾಯಕರು ಮತ್ತು ಅನೇಕ ವಿರೋಧ ಪಕ್ಷದ ನಾಯಕರು ಭಾಗವಹಿಸಿದ್ದರು. ಕೆಲವೇ ದಿನಗಳ ಹಿಂದೆ, ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದು, ಬಿಜೆಪಿಯನ್ನು 66 ಕ್ಕೆ ಇಳಿಸಿತ್ತು.

ಈ ಸಮಾರಂಭದಲ್ಲಿ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌, ಬಿಹಾರ ಸಿಎಂ ನಿತಿಶ್‌ ಕುಮಾರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಭೂಪೇಶ್‌ ಬಘೇಲಾ, ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್, ತೇಜಸ್ವಿ ಯಾದವ್‌, ನಟ ಕಮಲ್‌ ಹಾಸನ್‌, ನಟ ಶಿವರಾಜ್‌ ಕುಮಾರ್‌ ಇತ್ತಿತರ ಗಣ್ಯರು ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಮಾತನಾಡಿ, ಕಾಂಗ್ರೆಸ್ಸಿನ ವಿಜಯದ ನಂತರ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆದ್ದಿತು ಎಂದು ಅನೇಕ ವಿಷಯಗಳನ್ನು ಬರೆಯಲಾಗಿದೆ, ವಿಭಿನ್ನ ವಿಶ್ಲೇಷಣೆಗಳನ್ನು ಮಾಡಲಾಗಿದೆ. ಆದರೆ ನಾವು ಬಡವರು, ದಲಿತರು ಮತ್ತು ಆದಿವಾಸಿಗಳು ಹಿಂದುಳಿದವರ ಜೊತೆ ನಿಂತಿದ್ದರಿಂದ ಕಾಂಗ್ರೆಸ್ ಗೆದ್ದಿದೆ ಎಂದು ನಾನು ಹೇಳಲು ಬಯಸುತ್ತೇನೆ. ನಾವು ಸತ್ಯವನ್ನು ಹೊಂದಿದ್ದೇವೆ, ಬಡವರು. ಬಿಜೆಪಿ ಬಳಿ ಹಣ, ಪೋಲೀಸ್ ಎಲ್ಲವೂ ಇತ್ತು ಆದರೆ ಕರ್ನಾಟಕದ ಜನರು ತಮ್ಮ ಎಲ್ಲಾ ಶಕ್ತಿಯನ್ನು ಸೋಲಿಸಿದ್ದಾರೆ ಎಂದು ಹೇಳಿದರು.

ನಾವು ನಿಮಗೆ 5 ಭರವಸೆಗಳನ್ನು ನೀಡಿದ್ದೇವೆ. . ನಾವು ಸುಳ್ಳು ಭರವಸೆ ನೀಡುವುದಿಲ್ಲ ಎಂದು ಹೇಳಿದ್ದೆ. ನಾವು ಹೇಳಿದ್ದನ್ನು ಮಾಡುತ್ತೇವೆ. 1-2 ಗಂಟೆಗಳಲ್ಲಿ ಕರ್ನಾಟಕ ಸರ್ಕಾರದ ಮೊದಲ ಸಂಪುಟ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಈ 5 ಭರವಸೆಗಳು ಕಾನೂನಾಗಲಿವೆ. ನಾವು ನಿಮಗೆ ಸ್ವಚ್ಛ, ಭ್ರಷ್ಟರಹಿತ ಸರ್ಕಾರವನ್ನು ನೀಡುತ್ತೇವೆ ಎಂದು ಹೊಸದಾಗಿ ಚುನಾಯಿತ ಕರ್ನಾಟಕ ಸರ್ಕಾರದ ಪ್ರಮಾಣವಚನ ಸಮಾರಂಭದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+