ಮಿಟೂ: ಅರ್ಜುನ್ ಸರ್ಜಾ-ಶೃತಿ ಹರಿಹರನ್ ನಡುವೆ ಸಂಧಾನ ವಿಫಲ
ಬೆಂಗಳೂರು, ಅಕ್ಟೋಬರ್ 25: ಕನ್ನಡ ಚಿತ್ರ ನಟಿ ಶೃತಿ ಹರಿಹರನ್ ಅವರು ಹಿರಿಯ ನಟ ಅರ್ಜುನ್ ಸರ್ಜಾ ಅವರ ಮೇಲೆ ಮಾಡಿದ್ದ ಲೈಂಗಿನ ದೌರ್ಜನ್ಯ ಆರೋಪ ವಿವಾದ ಕುರಿತು ಇಂದು ಕನ್ನಡ ಫಿಲ್ಮ್ ಛೇಂಬರ್ನಲ್ಲಿ ಆಯೋಜಿಸಿದ್ದ ಸಂಧಾನ ಸಭೆ ಫಲಪ್ರದವಾಗಿಲ್ಲ.
ಹಿರಿಯ ನಟ ಅಂಬರೀಶ್, ಫಿಲ್ಮ್ ಚೇಂಬರ್ ಅಧ್ಯಕ್ಷ ಚಿನ್ನೇಗೌಡ, ನಿರ್ಮಾಪಕರ ಸಂಘದ ಮುನಿರತ್ನ, ರಾಕ್ಲೈನ್ ವೆಂಕಟೇಶ್, ಸಾ.ರಾ.ಗೋವಿಂದ್ ಅವರ ನೇತೃತ್ವದಲ್ಲಿ ಸಂಧಾನ ಸಭೆ ಆಯೋಜಿಸಲಾಗಿತ್ತು. ಅದರಲ್ಲಿ ಶೃತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಇಬ್ಬರೂ ಭಾಗವಹಿಸಿದ್ದರು.
ಪ್ರಕರಣ ಈಗಾಗಲೇ ನ್ಯಾಯಾಲಯದ ಮೆಟ್ಟಿಲು ಏರಿಬಿಟ್ಟಿದೆ ಹಾಗಾಗಿ ಕೂಲಂಕುಷವಾಗಿ ನಾವು ಮಾತುಕತೆ ನಡೆಸಿದ್ದೇವೆ. ಇಬ್ಬಿರಿಗೂ ತಮ್ಮ ಅಭಿಪ್ರಾಯ ತಿಳಿಸಲು ಕಾಲಾವಕಾಶ ನೀಡಿದ್ದೇವೆ ಎಂದು ಸಂಧಾನ ಸಭೆ ಬಳಿಕ ಅಂಬರೀಶ್ ಅವರು ಹೇಳಿದರು.

ಇಬ್ಬರೂ ಪರಸ್ಪರ ವಿವಾದ ಮರೆತು ಅನ್ಯೋನ್ಯದಿಂದ ಹೋಗಲಿ ಎಂಬ ಉದ್ದೇಶದಿಂದ ಈ ಸಂಧಾನ ಸಭೆ ಆಯೋಜಿಸಲಾಗಿತ್ತು. ಇಬ್ಬರೂ ತಮ್ಮ ಪರವಾದ ವಾದಗಳನ್ನು ಮಂಡಿಸಿದರು ಹಾಗಾಗಿ, ಇಬ್ಬರೂ ಇನ್ನಷ್ಟು ಸಮಯ ಪಡೆದು ಕುಟುಂಬದ ಜೊತೆ ಚರ್ಚಿಸಿ ಉತ್ತಮ ನಿರ್ಣಯಕ್ಕೆ ಬನ್ನಿ' ಎಂದು ಸಲಹೆ ನೀಡಿದ್ದಾಗಿ ಹೇಳಿದ್ದರು.
ಪ್ರಿಯಾಂಕ ಉಪೇಂದ್ರ ಅವರು ಫೈರ್ ಕಮಿಟಿಗೆ ರಾಜೀನಾಮೆ ನೀಡಿದ್ದಾರೆ ಅದು ಫೈರ್ ಕಮಿಟಿ ಸರಿ ಇಲ್ಲ ಎಂಬುದನ್ನು ತೋರಿಸುತ್ತದೆ ಎಂದ ಅಂಬರೀಶ್ ಅವರು ಚೇತನ್ ನೇತೃತ್ವದ ಫೈರ್ ಕಮಿಟಿ ವಿರುದ್ಧ ಅಸಮಾಧಾನ ಹೊರಹಾಕಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications