#ಮಿಟೂ: ಕರ್ನಾಟಕ ಬಿಜೆಪಿ ಮಾಜಿ ಸಚಿವನ ಮೇಲೆ ಲೈಂಗಿಕ ಕಿರುಕುಳ ಆರೋಪ
Recommended Video

ಬೆಂಗಳೂರು, ಅಕ್ಟೋಬರ್ 19: ಕರ್ನಾಟಕ ರಾಜ್ಯ ರಾಜಕಾರಣಕ್ಕೂ #ಮಿಟೂ ಬಿಸಿ ತಟ್ಟಿದ್ದು ಬಿಜೆಪಿಯ ಮತ್ತು ಆರ್ಎಸ್ಎಸ್ನಲ್ಲಿ ಗುರುತಿಸಿಕೊಂಡ ಮುಖಂಡ ಹಾಗೂ ಮಾಜಿ ಮಂತ್ರಿ ಒಬ್ಬರ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಲಾಗಿದೆ.
ಬಾಗಲಕೋಟೆ ಮೂಲದ ಮಹಿಳೆ ಒಬ್ಬರು ಬಿಜೆಪಿ ಮಾಜಿ ಸಚಿವರೊಬ್ಬರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾರೆ ಜೊತೆಗೆ ಆರ್ಎಸ್ಎಸ್ ಮುಖಂಡರೆನಿಸಿಕೊಂಡವರು ತಮ್ಮೊಂದಿಗೆ ಕೆಟ್ಟದಾಗಿ ನಡೆದುಕೊಂಡ ಬಗ್ಗೆಯೂ ಬರೆದುಕೊಂಡಿದ್ದಾರೆ.

ಒಟ್ಟು ಮೂರು ಪ್ರಕರಣಗಳ ಬಗ್ಗೆ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದ ಅವರು, ಆ ನಂತರ ಅವುಗಳನ್ನು ಡಿಲೀಟ್ ಮಾಡಿದ್ದಾರೆ ಆದರೆ ಅದರ ಸ್ಕ್ರೀನ್ ಶಾಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಮಾಜಿ ಸಚಿವರೊಬ್ಬರು ತಮ್ಮ ಮೊಬೈಲ್ ಸಂಖ್ಯೆ ಪಡೆದು ಐಶಾರಾಮಿ ಹೊಟೆಲ್ಗೆ ಕರೆದು, ಅಲ್ಲಿ ರೂಮ್ ಬುಕ್ ಮಾಡುತ್ತೇನೆ ಎಂದಿದ್ದರು ಎಂದು ಸಹ ಆ ಮಹಿಳೆ ಬರೆದಿದ್ದಾರೆ. ತಾವು ಪ್ರತಿಭಟಿಸಿ ಅಲ್ಲಿಂದ ಹೊರಟಾಗ 50 ಸಾವಿರ ರೂಪಾಯಿಯನ್ನು ತನ್ನ ಬ್ಯಾಗಿಗೆ ಆ ಮಾಜಿ ಸಚಿವ ಹಾಕಿದ್ದರು ಎಂದು ಸಹ ಅವರು ಬರೆದುಕೊಂಡಿದ್ದಾರೆ.
#ಮಿಟೂ ಅಡಿಯಲ್ಲಿ ಆರೋಪ ಮಾಡುತ್ತಿರುವ ಮಹಿಳೆ ಬಿಜೆಪಿಯ ಸಕ್ರಿಯ ಸದಸ್ಯರು ಎನ್ನಲಾಗಿದೆ. ಹಲವು ಬಿಜೆಪಿ ಸಭೆ ಮತ್ತು ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಾರೆ.
ಯಡಿಯೂರಪ್ಪ ಅವರಿಗೆ ಸಿಎಂ ಸ್ಥಾನ ಸಿಗದೇ ಹೋದಾಗ ಬಿಜೆಪಿ ನಡೆಸಿದ್ದ ಪ್ರತಿಭಟನೆ ಸಮಯದಲ್ಲಿ ನಡೆದ ಕೆಟ್ಟ ಘಟನೆ ಬಗ್ಗೆಯೂ ಅವರು ಬರೆದುಕೊಂಡಿದ್ದು, ಬಿಜೆಪಿಯ ಇಬ್ಬರು ಪ್ರಮುಖರು ಬೇಕೆಂದೇ ನನ್ನನ್ನು ಕೆಟ್ಟದಾಗಿ ಮುಟ್ಟಿದರು ಎಂದು ಹೇಳಿದ್ದಾರೆ.
ಈ ಆರೋಪಗಳನ್ನು ಮಾಡಿದ ಕೆಲವೇ ನಿಮಿಷಗಳನ್ನು ಅವರು ಅದನ್ನು ತಮ್ಮ ಫೇಸ್ಬುಕ್ ಖಾತೆಯಿಂದ ಅಳಿಸಿಹಾಕಿದ್ದಾರೆ. ಮಾಧ್ಯಮಗಳು ನನಗೆ ಕಿರುಕುಳ ನೀಡುತ್ತಿವೆ, ನಾನು ಹೇಳದ ಹೆಸರುಗಳನ್ನು ಅವರು ಸುದ್ದಿಗಳಲ್ಲಿ ಉಲ್ಲೇಖಿಸುತ್ತಿದ್ದಾರೆ ಹಾಗಾಗಿ ನಾನು ಪೋಸ್ಟ್ಗಳನ್ನು ಡಿಲೀಟ್ ಮಾಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications