ಮುಖ್ಯಮಂತ್ರಿ ಯಡಿಯೂರಪ್ಪಗೆ ಸಲಹೆಗಾರರ ನೇಮಕ

Recommended Video

      ಮುಖ್ಯಮಂತ್ರಿ ಯಡಿಯೂರಪ್ಪಗೆ ಸಲಹೆಗಾರರ ನೇಮಕ | BS Yeddyurappa | Oneindia Kannada

      ಬೆಂಗಳೂರು, ಆಗಸ್ಟ್ 30: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಲಹೆಗಾರರನ್ನಾಗಿ ಮೋಹನ ಆ. ಲಿಂಬಿಕಾಯಿ ಮತ್ತು ಮಹದೇವ ಪ್ರಕಾಶ್ ಅವರನ್ನು ನೇಮಿಸಲಾಗಿದೆ.

      ಹುಬ್ಬಳ್ಳಿಯ ನಿವಾಸಿ ಮೋಹನ ಲಿಂಬಿಕಾಯಿ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆರ್‌ಎಸ್ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

      ವಿಧಾನಪರಿಷತ್ ಸದಸ್ಯರೂ ಆಗಿದ್ದ ಮೋಹನ ಲಿಂಬಿಕಾಯಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತರ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಯಡಿಯೂರಪ್ಪ ಅವರು ಕೆಜೆಪಿ ಸೇರ್ಪಡೆಯಾಗಿದ್ದಾಗ ಮೋಹನ ಅವರೂ ಬಿಜೆಪಿ ತೊರೆದು ಕೆಜೆಪಿ ಸೇರಿಕೊಂಡಿದ್ದರು. ಬಳಿಕ ಯಡಿಯೂರಪ್ಪ ಅವರೊಂದಿಗೆ ಬಿಜೆಪಿಗೆ ಮರಳಿದ್ದರು. ಪಶ್ಚಿಮ ಪದವೀಧರ ಕ್ಷೇತ್ರದಿಂದ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾಗಿದ್ದರು.

      Media And Legal Advisors Appointed For CM BS Yediyurappa

      ಹಾಗೆಯೇ, ಬೆಂಗಳೂರಿನ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರನ್ನು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಇಬ್ಬರ ನೇಮಕಾತಿಯನ್ನೂ ತಕ್ಷಣದಿಂದ ಜಾರಿಗೆ ಬರುವಂತೆ ಮಾಡಲಾಗಿದೆ.

      ಅನೇಕ ವರ್ಷಗಳಿಂದ ಪತ್ರಿಕಾ ರಂಗದಲ್ಲಿರುವ ಮಹದೇವ ಪ್ರಕಾಶ್ ಅವರು ರಾಜಕೀಯ ವಿಶ್ಲೇಷಕರು ಹಾಗೂ ಅಂಕಣಕಾರರಾಗಿದ್ದಾರೆ. ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+