ವೈದ್ಯಕೀಯ ಪರೀಕ್ಷೆ: ಮೈಕ್ರೊ ಬಯಾಲಜಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಂಗಳೂರು: ರಾಜ್ಯದಾದ್ಯಂತ ನಡೆಯುತ್ತಿರುವ ವೈದ್ಯಕೀಯ ಪರೀಕ್ಷೆಯ ದ್ವಿತೀಯ ವರ್ಷದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.
ಶನಿವಾರ ನಡೆಯುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳ ಎರಡನೆಯ ವರ್ಷದ ಮೈಕ್ರೊ ಬಯಾಲಜಿ-1 ವಿಷಯದ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ಹರಿದಾಡುತ್ತಿದೆ.
ಚಿತ್ರದುರ್ಗದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಕುರಿತು ಅನುಮಾನ ವ್ಯಕ್ತವಾಗಿದೆ.
ಶನಿವಾರ ಬೆಳಿಗ್ಗೆ 9 ಗಂಟೆಗೆ ಪರೀಕ್ಷೆ ಆರಂಭವಾಗಬೇಕಿತ್ತು. 9.10ರ ಸುಮಾರಿಗೆ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರದಾಡುತ್ತಿರುವುದು ಪತ್ತೆಯಾಗಿದೆ.

ಚಿತ್ರದುರ್ಗದ ಕೆಲ ಕಾಲೇಜುಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರಬಹುದು. ಇದರಲ್ಲಿ ವೈದ್ಯಕೀಯ ಕಾಲೇಜುಗಳ ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಚಿತ್ರದುರ್ಗ ನಗರದ ಬಸವೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿದ್ದು, ಅಲ್ಲಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರಬಹುದು ಎಂಬ ಅಭಿಪ್ರಾಯ ಕೇಳಿಬಂದಿದೆ.

ಆದರೆ, ಬಸವೇಶ್ವರ ಮೆಡಿಕಲ್ ಕಾಲೇಜಿನಿಂದ ಪತ್ರಿಕೆ ಬಹಿರಂಗವಾಗಿಲ್ಲ ಎಂದು ಕಾಲೇಜಿನ ಪರೀಕ್ಷಾ ಮುಖ್ಯಸ್ಥ ಡಾ.ಪ್ರಶಾಂತ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಬಯಲಾಗಿರುವುದು ನಿಜ. ಮೈಕ್ರೋ ಬಯಾಲಜಿ ಪರೀಕ್ಷೆ ನಡೆಯುತ್ತಿದೆ. ಈ ಕಾಲೇಜಿನಿಂದ ಯಾವುದೇ ಪತ್ರಿಕೆ ಲೀಕ್ ಆಗಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಗೆ ಒಳಪಡಲು ಸಿದ್ಧ ಎಂದು ಪ್ರಶಾಂತ್ ತಿಳಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications