ವೈದ್ಯರು ಗ್ರಾಮೀಣ ಸೇವೆ ಕಡ್ಡಾಯದಿಂದ ತಪ್ಪಿಸಿಕೊಳ್ಳಲಾಗದು
ಬೆಂಗಳೂರು, ಮೇ 29: ಸರ್ಕಾರಿ ಕೋಟಾದಡಿ ಸರ್ಕಾರಿ ಕಾಲೇಜು ಅಥವಾ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆದ (2022ರ ಜುಲೈ 22ಕ್ಕೆ ಅನುಗುಣವಾಗಿ) ಎಂಬಿಬಿಎಸ್ ವಿದ್ಯಾರ್ಥಿಗಳು ಕಡ್ಡಾಯ ಗ್ರಾಮೀಣ ಸೇವೆ ಅಥವಾ ಬಾಂಡ್ಗಳ ಅನುಷ್ಠಾನದ ಕಠಿಣ ಷರತ್ತಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
ಆದ್ದರಿಂದ ಎಂಬಿಬಿಎಸ್ ಪದವೀಧರರು ಗ್ರಾಮೀಣ ಸೇವೆ ಮಾಡಲೇಬೇಕು, ಇಲ್ಲವಾದರೆ ಬಾಂಡ್ ಸಲ್ಲಿಸಲೇಬೇಕು. ಇದರಿಂದಾಗಿ 2019-2020ರ ಸಾಲಿನಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ್ದ 447 ಅರ್ಜಿದಾರ ವೈದ್ಯ ವಿದ್ಯಾರ್ಥಿಗಳಿಗೆ ಸ್ವಲ್ಪ ಹಿನ್ನಡೆಯಾಗಿದೆ.

ಬೆಂಗಳೂರಿನ ಡಾ. ಶರಣ್ಯಾ ಮೋಹನ್ ಸೇರಿದಂತೆ ರಾಜಸ್ಥಾನ, ಹರ್ಯಾಣ, ಕೇರಳ, ಗುಜರಾತ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಚೆನ್ನೈನ ವಿವಿಧ ಭಾಗಗಳ ಒಟ್ಟು 447 ವೈದ್ಯರು ಸಲ್ಲಿಸಿದ್ದ ಪ್ರತ್ಯೇಕ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಲೇವಾರಿ ಮಾಡಿದೆ.
ಉದ್ದೇಶ ಅರ್ಥಮಾಡಿಕೊಳ್ಳಿ: "ವೈದ್ಯರಿಂದ ಗ್ರಾಮೀಣ ಸೇವೆಯನ್ನು ಪ್ರೋತ್ಸಾಹಿಸಲು ವಿಶ್ವ ಆರೋಗ್ಯ ಸಂಸ್ಥೆಯು ಹಲವು ಶಿಫಾರಸುಗಳನ್ನು ಮಾಡಿದೆ. ಕಡ್ಡಾಯ ಗ್ರಾಮೀಣ ಸೇವೆಯು ಜಗತ್ತಿನ ಯಾವುದೇ ಭಾಗದಲ್ಲಿನ ವೈದ್ಯಕೀಯ ವೃತ್ತಿಗೆ ಹೊರತಾಗಿಲ್ಲ" ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ನ್ಯಾಯಪೀಠ 'ಕರ್ನಾಟಕ ಶಿಕ್ಷಣ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಕಾಯ್ದೆ-1984ರ ಕಲಂ 14ರ ಅಡಿಯಲ್ಲಿ ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರ ಸ್ವತಂತ್ರವಾಗಿದೆ' ಎಂದು ಹೇಳಿದೆ.
'ಗ್ರಾಮೀಣ ಸೇವೆಯ ಆದೇಶದ ಹಿಂದಿನ ಉದ್ದೇಶವು ಗ್ರಾಮೀಣ, ಬುಡಕಟ್ಟು ಅಥವಾ ಕಷ್ಟಕರ ಪ್ರದೇಶಗಳಲ್ಲಿ ವಾಸ ಮಾಡುವ ನಾಗರಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವುದೇ ಆಗಿದೆ. ಇಂತಹ ಪ್ರದೇಶಗಳನ್ನು ಮೇಲ್ನೋಟಕ್ಕೆ ಗಮನಿಸಿದಾಗ ಅವರೆಲ್ಲಾ ಅಗತ್ಯ ಬಿದ್ದಾಗ ತಕ್ಷಣವೇ ವೈದ್ಯರನ್ನು ತಲುಪಲು ಸರಳ ಮಾರ್ಗಗಳಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಸರ್ಕಾರದ ಸದಾಶಯದ ಭಾಗವಾಗಬೇಕು' ಎಂದು ನ್ಯಾಯಪೀಠ ಹೇಳಿದೆ.
ಕಡ್ಡಾಯ ಗ್ರಾಮೀಣ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಅರ್ಜಿದಾರರಿಗೆ ಸಂಬಂಧಿಸಿದಂತೆ, ವೈದ್ಯಕೀಯ ನಿರ್ದೇಶನಾಲಯ 2021ರ ಜೂನ್ 17ರಂದು ಹೊರಡಿಸಿದ್ದ ತಿದ್ದೋಲೆಯನ್ನು (ಕೊರಿಜೆಂಡಮ್) ನ್ಯಾಯಪೀಠ ಅಸಿಂಧುಗೊಳಿಸಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications