ರಾಮನಗರ, ಚಾಮರಾಜನಗರದಲ್ಲಿ ಶೀಘ್ರವೇ ಮೆಗಾ ಗಾರ್ಮೆಂಟ್ಸ್ ಆರಂಭ
ಬೆಂಗಳೂರು, ಆಗಸ್ಟ್ 19: ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೆಗಾ ಗಾರ್ಮೆಂಟ್ ಘಟಕಗಳು ಆರಂಭವಾಗಲಿವೆ ಎಂದು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಹೇಳಿದ್ದಾರೆ.
ರಾಜ್ಯಕ್ಕೆ ಹೂಡಿಕೆದಾರರನ್ನು ಸೆಳೆಯಲು ಪ್ರಯತ್ನ ನಡೆಸಿರುವ ಸಚಿವ ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಕೈಮಗ್ಗ ಮತ್ತು ಜವಳಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಜವಳಿ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ ನಡೆಸಿದರು.
ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಮೆಗಾ ಗಾರ್ಮೆಂಟ್ಸ್ ಘಟಕಗಳು ಪ್ರಾರಂಭವಾಗಿವೆ. ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇದೇ ರೀತಿಯ ಘಟಕಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ. 2020-21ನೇ ಸಾಲಿನ ಬಜೆಟ್ನಲ್ಲಿ ಘೋಷಿಸಲಾದ ಶಿಗ್ಗಾವಿ (ಹಾವೇರಿ ಜಿಲ್ಲೆ) ಯಲ್ಲಿ ನೂತನ ಜವಳಿ ಪಾರ್ಕ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ ಎಂದು ಮುನೇನಕೊಪ್ಪ ಹೇಳಿದರು.

ಸಂವಾದದ ವೇಳೆ ಮುನೇನಕೊಪ್ಪ ಅವರು, ಗಾರ್ಮೆಂಟ್ ನೀತಿ 2019- 24ರಲ್ಲಿ ಐದು ಲಕ್ಷ ಜನರಿಗೆ ಉದ್ಯೋಗದೊಂದಿಗೆ 10,000 ಕೋಟಿ ರೂಪಾಯಿಗಳವರೆಗೆ ಹೂಡಿಕೆಗಳನ್ನು ಆಕರ್ಷಿಸುವ ಗುರಿಯನ್ನು ಹೊಂದಲಾಗಿದೆ. ಹೊಸ ಗಾರ್ಮೆಂಟ್ ನೀತಿಯನ್ನು ಜಾರಿಗೆ ತಂದ ನಂತರ ಕರ್ನಾಟಕದಲ್ಲಿ 544 ಎಂಎಸ್ಎಂಇ ಘಟಕಗಳು ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ. ವಿವಿಧ ಜಿಲ್ಲೆಗಳಲ್ಲಿ 745 ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿದೆ ಮತ್ತು 64,000 ಜನರಿಗೆ ತರಬೇತಿ ನೀಡಲಾಗಿದೆ ಎಂದು ಅವರು ಹೇಳಿದರು.

ಇದೇ ಕ್ಷೇತ್ರದಲ್ಲಿ 21,000 ಜನರಿಗೆ ಉದ್ಯೋಗ ನೀಡಲಾಗಿದ್ದು, 1,060 ಕೋಟಿ ರೂ.ಗಳನ್ನು ಬೃಹತ್ ಯೋಜನೆಗಳಲ್ಲಿ ಹೂಡಿಕೆ ಮಾಡಲಾಗಿದೆ. ಈ ಘಟಕಗಳು 17,300 ಉದ್ಯೋಗಗಳನ್ನು ಸೃಷ್ಟಿಸಿವೆ. ರಾಣೆಬೆನ್ನೂರು ಮತ್ತು ನವಲಗುಂದದಲ್ಲಿ ಹೊಸ ಜವಳಿ ಪಾರ್ಕ್ಗಳಿಗೆ ಹೂಡಿಕೆ ಮಾಡಲು ಇಬ್ಬರು ಹೂಡಿಕೆದಾರರು ಮುಂದೆ ಬಂದಿದ್ದಾರೆ ಎಂದು ಸಚಿವ ಮುನೇನಕೊಪ್ಪ ತಿಳಿಸಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications