ನೀರಿಗಾಗಿ ಹೋರಾಟ: ಬಿಜೆಪಿಗೂ ಆಹ್ವಾನಿಸಿದ ಡಿಕೆ ಸುರೇಶ್

ಬೆಂಗಳೂರು, ಜನವರಿ 6: ಮೇಕೆದಾಟು ಆಣೆಕಟ್ಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸಲು ಸಿದ್ಧವಾಗುತ್ತಿದೆ. ಇತ್ತ ಬಿಜೆಪಿ ಕೊರೊನಾ ಹೆಚ್ಚಳದಿಂದಾಗಿ ಕರ್ಫ್ಯೂ ಸೇರಿದಂತೆ ಗುಂಪು ಸೇರದಿರಲು ಸೂಚನೆ ನೀಡಿದೆ. ಕೊರೊನಾ ನಿಯಮ ಮೀರಿದರೆ ಅಂಥವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು," ಪಾದಯಾತ್ರೆಗೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ. ಎಲ್ಲಾ ಪಕ್ಷದವರಿಗೂ ಸಾರ್ವಜನಿಕರಿಗೂ ಒಂದೇ ಕ್ರಮ ಅನ್ವಯವಾಗುತ್ತದೆ. ರಾಜಕೀಯ ಪಕ್ಷಗಳಿಗೆ ಒಂದು ಜನಸಾಮಾನ್ಯರಿಗೊಂದು ನಿಯಮ ತರಲು ಆಗುವುದಿಲ್ಲ. ಕೊರೊನಾ ನಿಯಮ ಎಲ್ಲರಿಗೂ ಒಂದೇ. ನಿಯಮ ಮೀರಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ. ಜನರ ಬದುಕು ಮುಖ್ಯ. ರಾಜಕಾರಣ ಆಮೇಲೆ ಮಾಡಿಕೊಳ್ಳಲಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರು ಹಿರಿಯ ರಾಜಕಾರಣಿಗಳು. ಅವರು ಈ ಬಗ್ಗೆ ಯೋಚನೆ ಮಾಡಬೇಕು. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ರೆ ಕಾನೂನು ಕ್ರಮ ಖಂಡಿತ" ಎಂದು ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

Recommended Video

      ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಸಲ್ಲಾ - ಸಿದ್ದು | Oneindia Kannada

      ಆದರೆ ಇತ್ತ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾದಯಾತ್ರೆ ಮಾಡೇ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಗೃಹ ಸಚಿವರು ಪಾದಯಾತ್ರೆಗೆ ಅನುಮತಿಸಲಾಗುವುದಿಲ್ಲ ಎಂದು ಹೇಳಿದ್ದಾರೆ ಎಂದು ಪ್ರಶ್ನಿಸಿದ್ದಕ್ಕೆ ಸಿದ್ದರಾಮಯ್ಯ, ಅವರಿಗೆ ಕ್ರಮ ತೆಗೆದುಕೊಳ್ಳಲು ಬಿಡಿ. (ಲೆಟ್ ದೆಮ್ ಟೇಕ್ ಆಕ್ಷನ್) ನಾವು ಯಾವುದೇ ಅನುಮತಿ ಪಡೆದು ಪಾದಯಾತ್ರೆ ಮಾಡುವುದಿಲ್ಲ ಎಂದು ಖಡಕ್‌ ಆಗಿ ಹೇಳಿದ್ದಾರೆ.

      Mekedatu Dam Project: DK Suresh invited to BJP to Padayatra

      ಇನ್ನೂ ಈ ಬಗ್ಗೆ ಮಾತನಾಡಿದ ಡಿಕೆ ಸುರೇಶ್, 'ಮೇಕೆದಾಟು ಯೋಜನೆ ಅನುಷ್ಠಾನವಾಗಬೇಕು ಎಂದು 160 ಕಿ.ಮೀ ಪಾದಯಾತ್ರೆ ಮಾಡಲಾಗುತ್ತದೆ. ಬಿಜೆಪಿ ತಮ್ಮ ಅನುಕೂಲಕ್ಕೆ ತಕ್ಕಂತೆ ಕರ್ಫ್ಯೂ ಜಾರಿ ಮಾಡಿದೆ. ನೀರಿಗಾಗಿ ನಡಿಗೆಗೆ ಬಿಜೆಪಿ ನಾಯಕರಿಗೂ ಆಹ್ವಾನಿಸುತ್ತೇವೆ. ನಾವು ಯಾರ ವಿರುದ್ಧವೂ ಪಾದಯಾತ್ರೆ ಮಾಡುತ್ತಿಲ್ಲ' ಎಂದಿದ್ದಾರೆ.

      Mekedatu Dam Project: DK Suresh invited to BJP to Padayatra

      ರಾಜ್ಯದಲ್ಲಿ ಸ್ಫೋಟವಾಗುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಪ್ರಕರಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಇದೇ ವೇಳೆ ಪಾದಯಾತ್ರೆ ನಡೆಸಿದರೆ ಕೊರೊನಾ ಹರಡಲು ರಹದಾರಿ ಮಾಡಿಕೊಟ್ಟಂತಾಗುವುದಿಲ್ಲವೆ? ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಕಾಂಗ್ರೆಸ್ ನಾಯಕರು ಮಾತ್ರ ನಾವು ಕೋವಿಡ್ ನಿಯಮ ಪಾಲಿಸಿ ಪಾದಯಾತ್ರೆ ಮಾಡಿಯೇ ಮಾಡುವುದಾಗಿ ಹೇಳುತ್ತಲೇ ಬರುತ್ತಿದ್ದಾರೆ.ಮುಂದಿನ 2023ರ ವಿಧಾನಸಭಾ ಚುನಾವಣೆಗೆ ತಯಾರಾಗುತ್ತಿರುವ ಕಾಂಗ್ರೆಸ್‌ಗೆ ಹಳೇ ಮೈಸೂರು ಭಾಗದಲ್ಲಿ ರಾಜಕೀಯವಾಗಿ ಲಾಭ ತಂದುಕೊಡಬಹುದು ಎಂಬ ಭ್ರಮೆಯಿದ್ದು, ಹೀಗಾಗಿ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಹೋರಾಟಕ್ಕಿಳಿದಿದೆ. ಪಾದಯಾತ್ರೆಯ ಪೂರ್ವಭಾವಿ ಸಭೆಯನ್ನು ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರದಲ್ಲಿ ಮಾಡುವ ಮೂಲಕ ಪಕ್ಷದ ಸಂಘಟನೆಗೂ ಒತ್ತು ನೀಡಲಾಗಿದೆ.

      Mekedatu Dam Project: DK Suresh invited to BJP to Padayatra

      11 ದಿನಗಳ ಪಾದಯಾತ್ರೆ ಇದಾಗಿದೆ. ಕನಕಪುರ ಸೇರಿದಂತೆ 4 ರಿಂದ 5 ಜಿಲ್ಲೆಗಳ ಕಾರ್ಯಕರ್ತರನ್ನು ಪಾದಯಾತ್ರೆಯಲ್ಲಿ ತೊಡಗಿಸಿಕೊಳ್ಳಲು ನಾಯಕರು ಸಿದ್ಧಗೊಳಿಸಿದ್ದಾರೆ. ನಿತ್ಯ 13 ರಿಂದ 16 ಕಿ.ಮೀ. ದೂರ ಪಾದಯಾತ್ರೆ ನಡೆಯಲಿದೆ. ಪ್ರತಿ 6 ರಿಂದ 8 ಕಿ.ಮೀ. ಅಂತರದಲ್ಲಿ ಊಟ ಮತ್ತು ವಿಶ್ರಾಂತಿಗೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಕನಿಷ್ಠ 4 ರಿಂದ 5 ಸಾವಿರ ಕಾರ್ಯಕರ್ತರನ್ನು ಒಗ್ಗೂಡಿಸುವ ಯೋಜನೆ ಮೂಲಕ ಬೃಹತ್‌ ಹೋರಾಟವಾಗಿ ಬಿಂಬಸಲು ಡಿಕೆ ಶಿವಕುಮಾರ್‌ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಮೇಕೆದಾಟಿನಿಂದ ಕುಂಬಳಗೋಡುವರೆಗೆ ಸಂಸದ ಡಿಕೆ ಸುರೇಶ್‌ ಪಾದಯಾತ್ರೆ ನೇತೃತ್ವ ವಹಿಸಿದರೆ ಅಲ್ಲಿಂದ ಡಿ.ಕೆ. ಶಿವಕುಮಾರ್‌ ಬೆಂಗಳೂರುವರೆಗಿನ ನೇತೃತ್ವ ವಹಿಸಿಕೊಳ್ಳಲಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+