Mekedatu Dam: ಪ್ರತಿಭಟನೆಯ ಎಚ್ಚರಿಕೆ ನೀಡಿದ ಎಐಎಡಿಎಂಕೆ
ಚೆನ್ನೈ, ಜೂನ್ 1: ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆಯು ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾದರೆ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕಕ್ಕೆ ಗುರುವಾರ ಎಚ್ಚರಿಕೆ ನೀಡಿದೆ.
ಕರ್ನಾಟಕದ ಈ ಕ್ರಮ ತಮಿಳುನಾಡನ್ನು ಮರುಭೂಮಿಯನ್ನಾಗಿ ಪರಿವರ್ತಿಸುವ ಪ್ರಯತ್ನವಾಗಿದೆ ಎಂದು ಎಐಎಡಿಎಂಕೆ ಆರೋಪಿಸಿದೆ. ಕಾವೇರಿ ನದಿಗೆ ಅಡ್ಡಲಾಗಿ ಜಲಾಶಯದ ಯೋಜನೆಗೆ ಮುಂದಾಗಿರುವ ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ವರದಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ತಮಿಳುನಾಡು ವಿರೋಧ ಪಕ್ಷದ ನಾಯಕ ಕೆ ಪಳನಿಸ್ವಾಮಿ, ನೆರೆಯ ರಾಜ್ಯಗಳು ಕೆಳ ನದಿಯ ರಾಜ್ಯಗಳ ಹಿತಾಸಕ್ತಿ ವಿರುದ್ಧವಾಗಿ ವರ್ತಿಸಬಾರದು ಎಂದು ಹೇಳಿದರು.

ಅಂತರ ರಾಜ್ಯ ನದಿ ನೀರಿನ ವಿವಾದಗಳ ಕಾಯಿದೆ 1956 ರ ಪ್ರಕಾರ, ಕರ್ನಾಟಕವು ನದಿಯ ನೈಸರ್ಗಿಕ ಮಾರ್ಗವನ್ನು ತಡೆಯುವ ಅಥವಾ ಬದಲಾಯಿಸುವ ಹಕ್ಕನ್ನು ಹೊಂದಿಲ್ಲ. ಕಾವೇರಿ ಜಲವಿವಾದದ ಅಂತಿಮ ತೀರ್ಪಿನಲ್ಲಿಯೂ ಸಹ ನದಿಯ ಕೆಳಭಾಗದ ರಾಜ್ಯಗಳ ಅನುಮೋದನೆಯಿಲ್ಲದೆ ಯಾವುದೇ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳಬಾರದು ಎಂಬುದು ಸ್ಪಷ್ಟವಾಗಿದೆ ಎಂದು ಪಳನಿಸ್ವಾಮಿ ತಿಳಿಸಿದ್ದಾರೆ.
ಹೀಗಿರುವಾಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಘೋಷಣೆ ತಮಿಳುನಾಡಿನ ಹಿತಾಸಕ್ತಿಗೆ ವಿರುದ್ಧವಾಗಿದೆ. ಮೇಕೆದಾಟು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸುವ ಯಾವುದೇ ಕ್ರಮವು ನೀರಾವರಿ ಮತ್ತು ಕುಡಿಯಲು ಕಾವೇರಿ ನೀರನ್ನು ಅವಲಂಬಿಸಿರುವ ತಮಿಳುನಾಡನ್ನು ಮರುಭೂಮಿಯನ್ನಾಗಿ ಪರಿವರ್ತಿಸುತ್ತದೆ ಎಂದು ಅವರು ಪ್ರತಿಪಾದಿಸಿದರು.
ಕಾವೇರಿ ವಿಚಾರದಲ್ಲಿ ಇಲ್ಲಿ ಆಡಳಿತಾರೂಢ ಡಿಎಂಕೆಯನ್ನು ಅವಲಂಬಿಸುವುದರಲ್ಲಿ ಅರ್ಥವಿಲ್ಲ. ಮೇಕೆದಾಟು ಎಂಬಲ್ಲಿ ಅಣೆಕಟ್ಟು ನಿರ್ಮಿಸುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪ್ರಯತ್ನವನ್ನು ಎಐಎಡಿಎಂಕೆ ತೀವ್ರವಾಗಿ ಖಂಡಿಸುತ್ತದೆ. ತಮಿಳುನಾಡು ಮರುಭೂಮಿಯಾಗುವುದನ್ನು ತಡೆಯಲು ಎಐಎಡಿಎಂಕೆ ಪ್ರತಿಭಟನೆಗಳನ್ನು ಆಯೋಜಿಸುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ ಎಂದು ಪಳನಿಸ್ವಾಮಿ ಹೇಳಿದರು.
ತಮಿಳುನಾಡು ಸಿಪಿಐ ರಾಜ್ಯ ಕಾರ್ಯದರ್ಶಿ ಆರ್ ಮುತರಸನ್ ಕೂಡ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಪ್ರಯತ್ನವನ್ನು ಖಂಡಿಸಿದ್ದು, ಕಾವೇರಿ ವಿವಾದದ ಅಂತಿಮ ತೀರ್ಪಿನಲ್ಲಿ ಕೇರಳ, ಪುದುಚೇರಿ ಮತ್ತು ತಮಿಳುನಾಡು ಅನುಮೋದನೆಯಿಲ್ಲದೆ ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ನಿರ್ಮಾಣವನ್ನು ಕೈಗೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.
ಮೇಕೆದಾಟು ಎಂಬಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಾಣಕ್ಕೆ ಮುಂದಾಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ತಮಿಳುನಾಡು ಸರ್ಕಾರವೂ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ನೆರೆಯ ರಾಜ್ಯಕ್ಕೆ ನೀರಿನ ವಿಚಾರವಾಗಿ ತೆಗೆದುಕೊಂಡಿರುವ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಕಾವೇರಿ ವಿವಾದ ನ್ಯಾಯಾಧಿಕರಣದ ಆದೇಶ ಅಥವಾ ಸುಪ್ರೀಂ ಕೋರ್ಟ್ನ ಅಂತಿಮ ತೀರ್ಪಿನಲ್ಲಿ ಕರ್ನಾಟಕದ ಉದ್ದೇಶಿತ ಯೋಜನೆ ಯಾವುದೇ ಉಲ್ಲೇಖವನ್ನು ಹೊಂದಿಲ್ಲ ಎಂದು ಜಲಸಂಪನ್ಮೂಲ ರಾಜ್ಯ ಸಚಿವ ದುರೈಮುರುಗನ್ ಬುಧವಾರ ಶಿವಕುಮಾರ್ ಅವರಿಗೆ ಒತ್ತಿ ಹೇಳಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications