ಮೇಕೆದಾಟು ಪಾದಯಾತ್ರೆ: ಡಿಕೆಶಿ ರಾಜಕೀಯ ಗುರು ಎಸ್.ಎಂ. ಕೃಷ್ಣ ಬರೆದ ಪತ್ರದಲ್ಲೇನಿದೆ?
ಬೆಂಗಳೂರು, ಜ.13: ಹೈಕೋರ್ಟ್ ತರಾಟೆ, ಸರ್ಕಾರದ ನಿರ್ಬಂಧಗಳ ಮಧ್ಯೆಯೂ ಮೇಕೆದಾಟು ಪಾದಯಾತ್ರೆ ಮುಂದುವರಿದಿದೆ. ಇದರ ಮಧ್ಯೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗುರು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪತ್ರವೊಂದನ್ನು ಬರೆದಿದ್ದಾರೆ.
ಕೆಸಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಎಸ್.ಎಂ.ಕೃಷ್ಣ ಅವರು ಜನಸಾಮಾನ್ಯರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಪಾದಯಾತ್ರೆಯನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.
ಯೋಜನೆ ಅನುಷ್ಠಾನಕ್ಕೆ ಸಹಮತವಿದೆ:
' ಬೆಂಗಳೂರಿನ ಭವಿಷ್ಯ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಬವಣೆಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯದ ಬಹುದಿನಗಳ ಬೇಡಿಕೆಯಾದ ಮೇಕೆದಾಟು ಆಣೆಕಟ್ಟು ನಿರ್ಮಾಣ ಸಂಬಂಧ ಸರ್ಕಾರಗಳ ಗಮನ ಸೆಳೆಯಲು ತಮ್ಮ ನೇತೃತ್ವದಲ್ಲಿ ಮೇಕೆದಾಟು ಸಂಗಮದಿಂದ ಬೆಂಗಳೂರಿನವರೆಗೆ 'ನೀರಿಗಾಗಿ ನಡಿಗೆ' ಪಾದಯಾತ್ರೆಗೆ ಆಹ್ವಾನಕ್ಕೆ ಧನ್ಯವಾದಗಳು. ಈ ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನನ್ನ ಸಂಪೂರ್ಣ ಸಹಮತವಿದೆ' ಎಂದು ಎಸ್.ಎಂ. ಕೃಷ್ಣ ಪತ್ರದಲ್ಲಿ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮನುಕುಲಕ್ಕೆ ಗಂಡಾಂತರವಾಗಿ ಕಾಡುತ್ತಿರುವ ಕೋವಿಡ್ ವೈರಸ್ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸುತ್ತಾ ವಿವಿಧ ರೀತಿಯಲ್ಲಿ ರೂಪಾಂತರಗೊಂಡು ನಮ್ಮನ್ನು ಕಾಡುತ್ತಿದೆ. ಇದರ ಬೇನೆಯಿಂದ ಇಡೀ ಪ್ರಪಂಚ ನಲುಗಿ ಹೋಗಿದ್ದು ಹಲವು ಸಾವು ನೋವುಗಳು ಸಂಭವಿಸಿ ಅನಾಹುತ ಸೃಷ್ಟಿಸಿದೆ. ಇದರ ನಿಯಂತ್ರಣಕ್ಕಾಗಿ ಸರ್ಕಾರಗಳು ಎಷ್ಟೇ ಪ್ರಯತ್ನಿಸಿದರೂ ಇನ್ನೂ ತಹಬದಿಗೆ ಬಂದಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು ವಿಶ್ವದ ನಗರಗಳ ಪಟ್ಟಿಯಲ್ಲಿ ಸ್ಥಾನಗಳಿಸಿದೆ. ಪ್ರಪಂಚದ ನಾನಾ ಮೂಲೆಗಳಿಂದ ಪ್ರತಿನಿತ್ಯ ಜನರು ಬಂದು ಹೋಗುತ್ತಿದ್ದಾರೆ. ಇದರ ಮಧ್ಯೆ ಕೊರೊನಾ ವೈರಸ್ ವೇಗವಾಗಿ ಹಬ್ಬುತ್ತಿದೆ. ಇಂತಹ ಸಂದರ್ಭದಲ್ಲಿ ತಾವು ಕೈಗೊಂಡಿರುವ ಪಾದಯಾತ್ರೆ ಕೋವಿಡ್ ನಿಯಂತ್ರಣ ಕ್ರಮಗಳಿಗೆ ಅಡ್ಡಿಪಡಿಸುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆಯನ್ನು ಕಾರ್ಯಗತಗೊಳಿಸಲು ಒಪ್ಪಿಗೆ ಸೂಚಿಸಿರುವುದರಿಂದ ಹಾಗೂ ನಾಡಿನ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಪಾದಯಾತ್ರೆಯನ್ನು ವಾಪಸ್ ಪಡೆಯಬೇಕು ಎಂದು ಎಸ್.ಎಂ. ಕೃಷ್ಣ ಅವರು ಉಭಯ ನಾಯಕರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
Recommended Video
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications