Get Updates
Get notified of breaking news, exclusive insights, and must-see stories!

ಕಾವೇರಿ ವಿವಾದಕ್ಕೆ ಮೇಕೆದಾಟು ಯೋಜನೆಯೇ ಪರಿಹಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್‌ 26: ಕಾವೇರಿ ಪ್ರತಿಭಟನೆ ಮತ್ತು ಬೆಂಗಳೂರು ಬಂದ್ 'ರಾಜಕೀಯ ಪ್ರೇರಿತ'. ಈ ವಿಷಯವನ್ನು ರಾಜಕೀಯಗೊಳಿಸುವುದು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದ್ದಾರೆ.

ಮೈಸೂರಿಗೆ ಬಂದಿರುವ ಸಿಎಂ, ಕರ್ನಾಟಕ ಮತ್ತು ತಮಿಳುನಾಡು ನಡುವಿನ ನೀರು ಹಂಚಿಕೆ ವಿವಾದಕ್ಕೆ ಮೇಕೆದಾಟು ಯೋಜನೆಯೇ ಪರಿಹಾರ ಎಂದು ತಿಳಿಸಿದರು.

Mekedatu project is the solution to Cauvery dispute: CM Siddaramaiah

ಪ್ರತಿಭಟನೆಗೆ ನಮಗೆ ಯಾವುದೇ ಆಕ್ಷೇಪವಿಲ್ಲ, ಆದರೆ ಯಾರೂ ಅದರ ಮೇಲೆ ರಾಜಕೀಯ ಮಾಡಬಾರದು. ರಾಜ್ಯದ ಹಿತದೃಷ್ಟಿಯಿಂದ ಈ ವಿಷಯವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು. ಬಂದ್‌ಗಳನ್ನು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ನಾವು ಅದನ್ನು ವಿರೋಧಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದರು.

ಕೇಂದ್ರದ ಮಧ್ಯಸ್ಥಿಕೆ ಕೋರಿ ಪ್ರಧಾನಿ ಮೋದಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ''ಪ್ರಧಾನಿ ಮಧ್ಯಸ್ಥಿಕೆ ಕೋರಿ ಎಚ್‌ಡಿ ದೇವೇಗೌಡರು ಪತ್ರ ಬರೆದಿದ್ದು, ನಾನು ಅದನ್ನು ಸ್ವಾಗತಿಸಿದ್ದೇನೆ. ಆದರೆ, ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿಕೊಳ್ಳುವುದು ರಾಜಕೀಯ. ರಾಜ್ಯ ಮತ್ತು ರೈತರ ಹಿತಕ್ಕಾಗಿ ನಾವು ಬದ್ಧರಾಗಿದ್ದೇವೆ. ನಮಗೆ ಅಧಿಕಾರ ಮುಖ್ಯವಲ್ಲ ರಾಜ್ಯದ ಹಿತವೇ ಮುಖ್ಯ ಎಂದು ಸಿಎಂ ಹೇಳಿದರು.

ಕಾವೇರಿ ವಿಚಾರದಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಕೇಳಿದಾಗ, ಮೇಕೆದಾಟು ಯೋಜನೆಯಿಂದ ಸಮಸ್ಯೆ ಬಗೆಹರಿಯಬಹುದು. ಇಲ್ಲಿಯವರೆಗೆ ಯಾವುದೇ ಪರಿಹಾರವಿಲ್ಲ. ಅದಕ್ಕಾಗಿ ಟ್ರಿಬ್ಯೂನಲ್ ಮತ್ತು ಸುಪ್ರೀಂ ಕೋರ್ಟ್ ಮುಂದೆ ಮನವಿ ಮಾಡಿದ್ದೇವೆ. ಇನ್ನೊಂದು ಪರಿಹಾರವೆಂದರೆ ಮೇಕೆದಾಟು ಯೋಜನೆ. 67 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ನೀರನ್ನು ಹಂಚಿಕೊಳ್ಳಲು ನೆರವಾಗುತ್ತದೆ. ಇದು ಎರಡೂ ರಾಜ್ಯಗಳಿಗೆ ಸಹಾಯ ಮಾಡುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ಬಂದ್‌ಗೆ ಎಚ್‌ಡಿ ದೇವೇಗೌಡ ಬೆಂಬಲ:

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಬಂದ್‌ಗೆ ಬೆಂಬಲ ಸೂಚಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಮನವಿ ಮಾಡಿದರು. "ನಾವು ಶಾಂತಿಯುತ ಪ್ರತಿಭಟನೆಗಳನ್ನು ನಡೆಸಬೇಕು ಮತ್ತು ಯಾವುದೇ ಆಸ್ತಿಯನ್ನು ನಾಶಪಡಿಸುವ ಮೂಲಕ ಯಾರೂ ಹಿಂಸಾಚಾರದಲ್ಲಿ ಪಾಲ್ಗೊಳ್ಳಬಾರದು. ನಾವು ನಮ್ಮ ಸಂದೇಶವನ್ನು ಶಾಂತಿಯುತ ರೀತಿಯಲ್ಲಿ ತಿಳಿಸಬೇಕು. ತಮಿಳುನಾಡಿನ ರೈತರು ನಮ್ಮ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ದೇವೇಗೌಡ ಹೇಳಿದ್ದರು.

ಇದು ಕಾಂಗ್ರೆಸ್ ಸರ್ಕಾರಕ್ಕೆ ಮಾಡಿದ ಅವಮಾನ: ಬಿಜೆಪಿ

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಮಾತನಾಡಿ, ಬಂದ್ ಕರೆಯನ್ನು ಬೆಂಬಲಿಸುವ ಮೂಲಕ ಬೆಂಗಳೂರಿನ ಜನತೆ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಂದೇಶ ರವಾನಿಸಿದ್ದಾರೆ. ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಹಲವು ಸಂಘಟನೆಗಳು ಬಂದ್ ಆಚರಿಸುತ್ತಿವೆ.

"ಬೆಂಗಳೂರಿನ ಜನರು ಬಂದ್‌ಗೆ ಬೆಂಬಲ ನೀಡಿದ್ದಾರೆ ಮತ್ತು ಅವರು ಸಿಎಂ ಮತ್ತು ಉಪ ಮುಖ್ಯಮಂತ್ರಿ ವಿರುದ್ಧ ಇದ್ದಾರೆ ಎಂಬ ಸಂದೇಶವನ್ನು ರವಾನಿಸಿದ್ದಾರೆ. ಇದು ಕಾಂಗ್ರೆಸ್ ಸರ್ಕಾರಕ್ಕೆ ಮಾಡಿದ ಅವಮಾನ. ರಾಜ್ಯದ ಹಿತ ಕಾಪಾಡಲು ಅವರು ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ ಜೈಲಿಗೆ ಹೋಗಿರಬೇಕು' ಎಂದು ರವಿಕುಮಾರ್ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+