Get Updates
Get notified of breaking news, exclusive insights, and must-see stories!

ಮೇಕೆದಾಟು ಯೋಜನೆ: ತಮಿಳುನಾಡು ನಿರ್ಣಯದ ವಿರುದ್ಧ ಕರ್ನಾಟಕದಿಂದ ಖಂಡನಾ ನಿರ್ಣಯ

ಬೆಂಗಳೂರು, ಮಾರ್ಚ್ 22: ಮೇಕೆದಾಟು ಜಲಾಶಯ ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ನಿರ್ಣಯ ಅಂಗೀಕರಿಸಿದ ಒಂದು ದಿನದ ನಂತರ, ತಮಿಳುನಾಡಿನ ನಿಲುವನ್ನು ಖಂಡಿಸಿ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಅಂಗೀಕರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಪಕ್ಷಾತೀತವಾಗಿ ಕರ್ನಾಟಕ ವಿಧಾನಸಭೆಯ ಸದಸ್ಯರು ನಿರ್ಣಯವನ್ನು ಬೆಂಬಲಿಸಲು ಒಪ್ಪಿಕೊಂಡಿದ್ದು, ಮಂಗಳವಾರ ಸಂಜೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯ ಸರ್ಕಾರ ಬುಧವಾರ (ಮಾ.23) ಅಂಗೀಕಾರ ಪಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕವು ಕಾವೇರಿಗೆ ಸಂಬಂಧಿಸಿದ ಯಾವುದೇ ಯೋಜನೆಯನ್ನು ಕೈಗೆತ್ತಿಕೊಂಡಾಗಲೂ ತಮಿಳುನಾಡು ಅದನ್ನು ವಿರೋಧಿಸುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದು, "ತಮಿಳುನಾಡು ವಾಸ್ತವವಾಗಿ ತಮ್ಮ ಪಾಲಿನಲ್ಲದ ಹೆಚ್ಚುವರಿ ನೀರನ್ನು ಬಳಸಿಕೊಳ್ಳುತ್ತಿದೆ ಮತ್ತು ಯಾವುದೇ ಅನುಮತಿಯಿಲ್ಲದೆ ದಕ್ಷಿಣಕ್ಕೆ ಜಲಾಶಯದ ಕಾಮಗಾರಿಯನ್ನು ತೆಗೆದುಕೊಳ್ಳುತ್ತಿದೆ. ಇದು ಕಾನೂನುಬಾಹಿರ, ನಾವು ಇದರ ವಿರುದ್ಧವೂ ನಿರ್ಣಯವನ್ನು ಅಂಗೀಕರಿಸುತ್ತೇವೆ. ನಾವು ಕಾನೂನು ತಜ್ಞರೊಂದಿಗೆ ಚರ್ಚಿಸಿ ನಿರ್ಣಯವನ್ನು ಅಂಗೀಕರಿಸುತ್ತೇವೆ. ಉಭಯ ಸದನಗಳಲ್ಲಿ ಬುಧವಾರ ತಮಿಳುನಾಡು ಸರ್ಕಾರದ ನಿರ್ಧಾರದ ವಿರುದ್ಧ ನಿರ್ಣಯ ಅಂಗೀಕರಿಸುತ್ತೇವೆ,'' ಎಂದು ಹೇಳಿದರು.

Mekedatu Project: Karnataka Govt To Pass Condemn Resolution Against Tamil Nadu Resolution

ಕೆಲವು ವರ್ಷಗಳ ಹಿಂದೆ ಕಾವೇರಿ ಅಂತಿಮ ಆದೇಶ ಬಂದಿದ್ದರೂ, ತಮಿಳುನಾಡು ಸರ್ಕಾರವು ಸಮಸ್ಯೆಯನ್ನು ಜೀವಂತವಾಗಿಡಲು ಬಯಸಿದೆ ಮತ್ತು ವಿವಿಧ ಮಾರ್ಗಗಳ ಮೂಲಕ ಪ್ರಯತ್ನಿಸುತ್ತಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ತಮಿಳುನಾಡು ಸರ್ಕಾರ ನಮ್ಮ ಮೌನವನ್ನು ದೌರ್ಬಲ್ಯವೆಂದು ಪರಿಗಣಿಸಬಾರದು, ನಾವು ಅವರಿಗೆ ತಕ್ಕ ಉತ್ತರವನ್ನು ನೀಡಲಿದ್ದೇವೆ ಎಂದು ಕಿಡಿಕಾರಿದರು.

ಇದಕ್ಕೂ ಮುನ್ನ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಎಲ್ಲ ಪಕ್ಷಗಳ ಸದಸ್ಯರು ಮೇಕೆದಾಟು ಜಲಾಶಯದ ಯೋಜನೆಯನ್ನು ನಿಲ್ಲಿಸುವ ತಮಿಳುನಾಡು ಸರ್ಕಾರದ ನಿರ್ಣಯವನ್ನು ಖಂಡಿಸಿದರು. ತಮಿಳುನಾಡು ಅನಗತ್ಯ ಅಡ್ಡಿ ಉಂಟು ಮಾಡುತ್ತಿರುವುದು ಕೆಟ್ಟ ನಿದರ್ಶನ ಎಂದರು. ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, "ನ್ಯಾಯಾಧಿಕರಣದ ಆದೇಶದಂತೆ ಕರ್ನಾಟಕವು ಸಾಮಾನ್ಯ ವರ್ಷಗಳಲ್ಲಿ 177.25 ಟಿಎಂಸಿ ಕಾವೇರಿ ನೀರನ್ನು ಬಿಡುತ್ತಿದೆ''.

Mekedatu Project: Karnataka Govt To Pass Condemn Resolution Against Tamil Nadu Resolution

"ನಾವು ಹೆಚ್ಚುವರಿ ನೀರನ್ನು ಕುಡಿಯುವ ನೀರಿಗೆ ಮತ್ತು ವಿದ್ಯುತ್ ಉತ್ಪಾದನೆಗೆ ಬಳಸುತ್ತಿದ್ದೇವೆ. ನಾವು ಅದನ್ನು ನೀರಾವರಿಗೆ ಬಳಸುತ್ತಿಲ್ಲ. ವಾಸ್ತವವಾಗಿ ಕಳೆದ ಏಳು ವರ್ಷಗಳಲ್ಲಿ ಕರ್ನಾಟಕವು ತಮ್ಮ ಹಂಚಿಕೆಯನ್ನು ಹೊರತುಪಡಿಸಿ 582 ಟಿಎಂಸಿ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದೆ. ತಮಿಳುನಾಡು ಸರ್ಕಾರ ಮೇಕೆದಾಟು ಜಲಾಶಯದ ಯೋಜನೆ ನಿಲ್ಲಿಸುವ ಹಕ್ಕು ಇಲ್ಲ,'' ಎಂದ ಅವರು, ಜಲ, ನೆಲ, ಸೀಮೆ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ನಮಗೆ ಕರ್ನಾಟಕ ಹಾಗೂ ಜನತೆಯ ಹಿತವೇ ಮುಖ್ಯ ಎಂದು ಎಂದರು.

Mekedatu Project: Karnataka Govt To Pass Condemn Resolution Against Tamil Nadu Resolution

ಮೇಕೆದಾಟು ಜಲಾಶಯವನ್ನು ನಿರ್ಮಿಸಲು ಕರ್ನಾಟಕವು ತಮಿಳುನಾಡಿನ ಕೃಪೆಯಲ್ಲಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದು, "ಇಂತಹ ನಿರ್ಣಯವನ್ನು ಅಂಗೀಕರಿಸುವ ಮೂಲಕ ತಮಿಳುನಾಡು ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಮತ್ತು ಅವರು ಹಾಗೆ ಮಾಡುತ್ತಿರುವುದು ಇದೇ ಮೊದಲಲ್ಲ,'' ಎಂದು ತಿಳಿಸಿದರು.

"ಸಿಎಂ ಬೊಮ್ಮಾಯಿ ಅವರು ಈಗಾಗಲೇ ಕೇಂದ್ರ ಜಲಶಕ್ತಿ ಸಚಿವರು ಮತ್ತು ಇತರ ಅಧಿಕಾರಿಗಳಿಗೆ ಮೇಕೆದಾಟು ಕುರಿತು ಸಂದೇಶವನ್ನು ರವಾನಿಸಿದ್ದಾರೆ ಮತ್ತು ಅಗತ್ಯವಿದ್ದರೆ ಅವರು ಮಾಡುತ್ತಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನೂ ಭೇಟಿ ಮಾಡುತ್ತೇನೆ. ಕರ್ನಾಟಕಕ್ಕೆ ಬೇಕಾಗಿರುವುದು ಪರಿಸರ ಅನುಮತಿ ಮತ್ತು ವಿವರವಾದ ಯೋಜನಾ ವರದಿಗೆ ಅನುಮೋದನೆ, ಅದನ್ನು ನಾವು ಪಡೆಯುತ್ತೇವೆ,'' ಎಂದು ಬಿಎಸ್‌ವೈ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+