Mekedatu Project: ಮೇಕೆದಾಟು ಯೋಜನೆ, ಕರ್ನಾಟಕಕ್ಕೆ ಹಿನ್ನಡೆ
ಬೆಂಗಳೂರು, ಫೆಬ್ರವರಿ 05: ಕೇಂದ್ರ ಬಜೆಟ್ 2025-26ರಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ರಾಜ್ಯದ ಕಾಂಗ್ರೆಸ್ ನಾಯಕರು ದೂರುತ್ತಿದ್ದಾರೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಯನ್ನು ಪರಿಗಣಿಸಿಲ್ಲ, ಜಿಎಸ್ಟಿ ಹಂಚಿಕೆಯಿಂದ ಹಿಡಿದು ವಿವಿಧ ಯೋಜನೆಗಳ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಆರೋಪ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲಿಯೇ ಮಹತ್ವದ ನೀರಾವರಿ ಯೋಜನೆ ವಿಚಾರವೊಂದರಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ.
ಕರ್ನಾಟಕ ಸರ್ಕಾರ ಉದ್ಯಾನ ನಗರಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ಡ್ಯಾಂ ನಿರ್ಮಾಣ ಮಾಡುವ ಪ್ರಸ್ತಾವನೆ ತಯಾರು ಮಾಡಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.

ಆದರೆ ಈಗ ಮೇಕೆದಾಟು ನೀರಾವರಿ ಯೋಜನೆ ವಿಚಾರದಲ್ಲಿಯೂ ಕರ್ನಾಟಕಕ್ಕೆ ಹಿನ್ನಡೆಯಾಗಿದೆ. ರಾಜ್ಯಸಭೆಯಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯ ಕಾವೇರಿ ನದಿಗೆ ಅಡ್ಡಲಾಗಿ ಡ್ಯಾಂ ನಿರ್ಮಾಣ ಮಾಡುವ ಕುರಿತ ಪ್ರಸ್ತಾವನೆ ಕುರಿತು ಉತ್ತರವನ್ನು ನೀಡಿದೆ.
2025-26ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್ ಒಂದನ್ನು ಹಾಕಿದ್ದರು. ಕೇಂದ್ರ ಬಜೆಟ್ ವಿಚಾರದಲ್ಲಿ ಕರ್ನಾಟಕದ ನಿರೀಕ್ಷೆಗಳೇನು? ಎಂದು ಪಟ್ಟಿ ನೀಡಿದ್ದರು. ಇದರಲ್ಲಿ ಮೇಕೆದಾಟು ಯೋಜನೆ ಕುರಿತು ಅವರು ಪ್ರಸ್ತಾಪ ಮಾಡಿದ್ದರು.
ಸಿದ್ದರಾಮಯ್ಯ ಬೇಡಿಕೆಯಲ್ಲಿ, 'ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮತ್ತು 400 ಮೆಗಾವಾಟ್ ವಿದ್ಯುತ್ ಉತ್ಪಾದನೆಗಾಗಿಯೇ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಕೇಂದ್ರ ಸರ್ಕಾರ ಶೀಘ್ರವಾಗಿ ಈ ಯೋಜನೆಗೆ ಅನುಮತಿ ನೀಡಬೇಕು' ಎಂದು ಒತ್ತಾಯಿಸಿದ್ದರು.
ಕೇಂದ್ರ ಸರ್ಕಾರ ಹೇಳಿದ್ದೇನು?; ರಾಜ್ಯಸಭೆ ಸದಸ್ಯ ಎಸ್. ಕಲ್ಯಾಣಸುಂದರಂ ಕೇಳಿದ್ದ ಪ್ರಶ್ನೆಗೆ ಜಲಶಕ್ತಿ ಖಾತೆ ಸಚಿವ ರಾಜ್ ಭೂಷಣ್ ಚೌಧರಿ ಉತ್ತರ ನೀಡಿದ್ದಾರೆ. 'ಕಾವೇರಿ ನದಿಗೆ ಹೊಸ ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿಲ್ಲ' ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪಿನ ಅನ್ವಯ ಕಾವೇರಿ ನದಿ ಹರಿಯುವ ರಾಜ್ಯಗಳ ಒಪ್ಪಿಗೆ ಬಳಿಕ ಹೊಸ ನೀರಾವರಿ ಯೋಜನೆ ಕೈಗೊಳ್ಳಬಹುದು. ಆದರೆ ಅದಕ್ಕೆ ಕೇಂದ್ರ ಸರ್ಕಾರದ ಒಪ್ಪಿಗೆಯೂ ಅಗತ್ಯವಾಗಿದೆ.
ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಮೇಕೆದಾಟು ಬಳಿ ಡ್ಯಾಂ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಕರ್ನಾಟಕ ಸರ್ಕಾರ ಸಲ್ಲಿಕೆ ಮಾಡಿ 5 ವರ್ಷಗಳು ಕಳೆದಿವೆ. ತಮಿಳುನಾಡು ಸರ್ಕಾರ ಕಾವೇರಿ-ವೆಲ್ಲಾರ್-ಗುಂಡಾರ್ ಯೋಜನೆ ಕೈಗೊಂಡಿದೆ. ಆದರೆ ಇದಕ್ಕೆ ಸಹ ಇನ್ನೂ ಕೇಂದ್ರ ಸರ್ಕಾರದ ಒಪ್ಪಿಗೆ ಸಿಕ್ಕಿಲ್ಲ.
ಬಜೆಟ್ ಬಳಿಕ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, "ನಾವು ಮೇಕೆದಾಟು ಯೋಜನೆಗಾಗಿ ಹಲವಾರು ಬಾರಿ ಒತ್ತಾಯಿಸಿದ್ದೆವು. ಬೆಂಗಳೂರು ಅತಿ ಹೆಚ್ಚು ತೆರಿಗೆಯನ್ನು ಸಂಗ್ರಹಿಸಿಕೊಡುವ ನಗರವಾಗಿದೆ. ಈ ನಗರಕ್ಕೆ ಕುಡಿಯುವ ನೀರು ಸಮರ್ಪಕವಾಗಿ ಆಗಬೇಕಾದರೆ ಮೇಕೆದಾಟು ಯೋಜನೆ ಆಗಬೇಕು ಎಂದು ಒತ್ತಾಯಿಸಿದ್ದೆವು. ಆದರೆ ಈ ಬಜೆಟ್ನಲ್ಲಿ ನಮಗೆ ನಿರಾಸೆ ಉಂಟು ಮಾಡಿದ್ದಾರೆ" ಎಂದು ಹೇಳಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications