ಮೇಕೆದಾಟು ಯೋಜನೆ: ಕರ್ನಾಟಕದಲ್ಲಿ ಶೀಘ್ರವೇ ಸಮೀಕ್ಷೆ ಆರಂಭ
ಬೆಂಗಳೂರು, ಜುಲೈ 28: ಕಾವೇರಿಗೆ ಅಡ್ಡಲಾಗಿ ತನ್ನ ಮಹತ್ವಾಕಾಂಕ್ಷೆಯ ಮೇಕೆದಾಟು ಸಮತೋಲನ ಜಲಾಶಯ ಯೋಜನೆಯನ್ನು ಜಾರಿಗೆ ತರಲು ಉತ್ಸುಕರಾಗಿರುವ ರಾಜ್ಯ ಸರ್ಕಾರವು ಶೀಘ್ರದಲ್ಲೇ ಕರ್ನಾಟಕದ ಗಡಿಗಳನ್ನು ನಿಗದಿಪಡಿಸಲು ಮತ್ತು ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿನ ಮರಗಳ ಎಣಿಕೆಗೆ ಸಮೀಕ್ಷೆಯನ್ನು ನಡೆಸಲಿದೆ.
ಈ ಯೋಜನೆಯು ಕುಡಿಯುವ ನೀರಿನ ಕೊರತೆಯನ್ನು ನಿವಾರಿಸುವುದು, ಜಲವಿದ್ಯುತ್ ಉತ್ಪಾದಿಸುವುದು ಮತ್ತು ತಮಿಳುನಾಡಿನ ಅಗತ್ಯಗಳನ್ನು ಪೂರೈಸಲು ಹೆಚ್ಚುವರಿ ನೀರನ್ನು ಸಂಗ್ರಹಿಸುವ ಗುರಿಯನ್ನು ಹೊಂದಿದೆ. ಸಮೀಕ್ಷೆ ನಡೆಸಲು ಸರ್ಕಾರ ತನ್ನ ವನ್ಯಜೀವಿ ಅಭಯಾರಣ್ಯಗಳಿಂದ 29 ಉಪ ವ್ಯಾಪ್ತಿಯ ಅರಣ್ಯ ಅಧಿಕಾರಿಗಳನ್ನು ನಿಯೋಜಿಸಿದೆ.

ಈ ಯೋಜನೆಗೆ ತಮಿಳುನಾಡು ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನ್ಯಾಯಾಧಿಕರಣದ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ. ಕಾವೇರಿಗೆ ಅಡ್ಡಲಾಗಿ ಬ್ಯಾರೇಜ್ ನಿರ್ಮಿಸುವ ಹಕ್ಕು ಕರ್ನಾಟಕಕ್ಕೆ ಇಲ್ಲ ಎಂದೂ ಅದು ಹೇಳಿದೆ. ಆದಾಗ್ಯೂ, ರಾಜ್ಯ ಸರ್ಕಾರವು ಪರಿಸರ ನಷ್ಟಗಳ ಸಮೀಕ್ಷೆ ಮತ್ತು ಮೌಲ್ಯಮಾಪನವನ್ನು ಶೀಘ್ರವಾಗಿ ಪೂರ್ಣಗೊಳಿಸಲು ಬಯಸುತ್ತದೆ.
ಈ ಯೋಜನೆಯಿಂದ 4,000 ಎಕರೆಗೂ ಹೆಚ್ಚು ಭೂಮಿ ಮುಳುಗಡೆಯಾಗುವ ನಿರೀಕ್ಷೆ ಇದೆ. ಆದರೆ, ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳಿಂದ ನೀರು ಬಿಡುತ್ತಿರುವುದರಿಂದ ಈ ಪ್ರಾಥಮಿಕ ಕಾಮಗಾರಿಗೆ ವಿಳಂಬವಾಗುತ್ತಿದೆ. ಕರ್ನಾಟಕ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು, ಪರಿಸರ ಅನುಮತಿ ಕೋರಿದೆ.
ಇದೇ ವೇಳೆ ಮೇಕೆದಾಟು ಸಮೀಪದ ಹೆಗನ್ನೂರು ನಿವಾಸಿ ಶಿವಕುಮಾರ್, ಯೋಜನೆಗಾಗಿ 10 ಎಕರೆ ಭೂಮಿ ಕಳೆದುಕೊಳ್ಳಬೇಕಾಗುತ್ತದೆ. ಮಡಿವಾಳ ಗ್ರಾಮದಲ್ಲಿ ಸುಮಾರು 400 ಎಕರೆ ಗುರುತಿಸಲಾಗಿದೆ. ಸಂಗಮ ಮತ್ತು ತಾಂಡ್ಯ ಕಾಲೋನಿ ಮುಳುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಸರಕಾರ ಪರ್ಯಾಯ ಭೂಮಿ ನೀಡುವ ಭರವಸೆ ನೀಡಿದೆ. ಜಮೀನು ಕಳೆದುಕೊಂಡವರು ಹೊಸದಾಗಿ ಕೃಷಿ ಆರಂಭಿಸಬೇಕಾಗಿರುವುದರಿಂದ ಅವರಿಗೂ ನಗದು ಪರಿಹಾರ ನೀಡಬೇಕು ಎಂದು ಶಿವಕುಮಾರ್ ಒತ್ತಾಯಿಸಿದರು. ಮೈಸೂರು ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಮಾತನಾಡಿ, ಸಮೀಕ್ಷೆಗೆ ನಿಯೋಜಿಸಲಾದ 29 ಅಧಿಕಾರಿಗಳ ಪೈಕಿ 12 ಮಂದಿ ತಮಗೆ ವರದಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications