ಮೇಲುಕೋಟೆ ನರಸರಾಜ ಭಟ್ಟರು ಇನ್ನೂ ನಾಪತ್ತೆ!

ಬುಧವಾರ ಎಸಿ ವಾಣಿ ಅವರು ನೋಟಿಸ್ ಜಾರಿಗೊಳಿಸಿದ್ದು ವಿಚಾರಣೆಗೆ ಹಾಜರಾಗುವಂತೆ ಎಲ್ಲಾ ಒಂಭತ್ತು ಜನರಿಗೆ ಸೂಚನೆ ನೀಡಿದ್ದಾರೆ. ದೇವಾಲಯದ ಪ್ರಧಾನ ಅರ್ಚಕ ನರಸರಾಜ ಭಟ್, ಅವರ ಸಹೋದರ ವರದರಾಜ್ ಭಟ್ ಮತ್ತು ಮುಜರಾಯಿ ಇಲಾಖೆಯ ಇತರ ಏಳು ಮಂದಿ ನೌಕರರಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಎಸಿ ವಾಣಿ ಹೇಳಿದ್ದಾರೆ.
2009 ರಿಂದ ಮುಜರಾಯಿ ಇಲಾಖೆ ನೌಕರರಾಗಿ ದೇವಾಲಯದಲ್ಲಿ ಕಾರ್ಯನಿರ್ವಹಿಸಿದ ಏಳು ಜನರು ವಿಚಾರಣೆಗೆ ಹಾಜರಾಗಬೇಕಾಗಿದೆ. ಅರ್ಚಕ ನರಸರಾಜ್ ಭಟ್ ಮತ್ತು ವರದರಾಜ್ ಭಟ್ ಇನ್ನೂ ತಮ್ಮ ನೋಟಿಸ್ ಅನ್ನು ಪಡೆಯಬೇಕಾಗಿದೆ. ಈ ಇಬ್ಬರು ಜುಲೈನಿಂದ ನಾಪತ್ತೆಯಾಗಿದ್ದು, ಎಲ್ಲಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. (ಮೇಲುಕೋಟೆ : ಪೊಲೀಸರಿಗೆ ಹೆದರಿದ ಅರ್ಚಕರು ಪರಾರಿ)
ಮುಜರಾಯಿ ಇಲಾಖೆಯ ನೌಕರರು ವಿಚಾರಣೆ ವೇಳೆ ದೇವಸ್ಥಾನದಲ್ಲಿನ ರತ್ನಾಂಗಿ ಆಭರಣ ಅದನ್ನು ನೀಡಿದವರು ಮುಂತಾದ ವಿವರಗಳನ್ನು ನೀಡಬೇಕಾಗಿದೆ. ಆದರೆ, ದೇವಾಲಯದ ಪ್ರಧಾನ ಅರ್ಚಕರು ಪತ್ತೆಯಾಗದ ಹೊರತು ಪ್ರಕರಣ ಕುರಿತು ತನಿಖೆ ಪೂರ್ಣಗೊಳ್ಳಲು ಸಾಧ್ಯವಿಲ್ಲ, ಅವರ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ತಿರಸ್ಕಾರವಾಗಿದ್ದೂ ಅವರು ಪತ್ತೆಯಾಗಿಲ್ಲ. (ಮೇಲುಕೋಟೆ ದೇವಾಲಯಕ್ಕೆ ಆಡಳಿತಾಧಿಕಾರಿ ನೇಮಕ)
ನರಸರಾಜ ಭಟ್ ಎಲ್ಲಿ : ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿನ ರತ್ನಾಂಗಿ ಆಭರಣದ ಅವ್ಯವಹಾರ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದು, ಅರ್ಚಕ ನರಸರಾಜ ಭಟ್ಟರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದ ತಕ್ಷಣ ಅವರು, ತಲೆಮರೆಸಿಕೊಂಡಿದ್ದಾರೆ.
ಮುಜರಾಯಿ ಸಚಿವರ ಆದೇಶದಂತೆ ಮಂಡ್ಯ ಜಿಲ್ಲಾಧಿಕಾರಿ ಬಿ.ಎಸ್.ಕೃಷ್ಣಯ್ಯ, ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೆ ಮೇಲುಕೋಟೆ ಠಾಣೆಯಲ್ಲಿ ನರಸರಾಜ ಭಟ್ಟ ವಿರುದ್ಧ ದೂರು ದಾಖಲಿಸುವಂತೆ ದೂರು ಸೂಚಿಸಿದ್ದರು. ಜು.18 ರಂದು ಅವರ ವಿರುದ್ಧ ದೂರು ದಾಖಲಾಗಿದ್ದು, ಅಂದಿನಿಂದಲೂ ಭಟ್ಟರು ಮತ್ತು ಅವರ ಸಹೋದರ ನಾಪತ್ತೆಯಾಗಿದ್ದಾರೆ.
ಯಾವ ಪ್ರಕರಣ : ನರಸರಾಜ ಭಟ್ಟರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 406 (ನಂಬಿಕೆ ದ್ರೋಹ), 408 (ಕರ್ತವ್ಯದಲ್ಲಿ ವಂಚನೆ), 420 (ಮೋಸ)ರ ಅಡಿ ಮೇಲುಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿರೀಕ್ಷಣಾ ಜಾಮೀನು ನೀಡುವಂತೆ ಭಟ್ಟರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ. ಆದರೂ ಭಟ್ಟರು ಇನ್ನೂ ಪತ್ತೆಯಾಗಿಲ್ಲ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications