ಮೇಲುಕೋಟೆ ನರಸರಾಜ ಭಟ್ಟರು ಇನ್ನೂ ನಾಪತ್ತೆ!

ಬುಧವಾರ ಎಸಿ ವಾಣಿ ಅವರು ನೋಟಿಸ್ ಜಾರಿಗೊಳಿಸಿದ್ದು ವಿಚಾರಣೆಗೆ ಹಾಜರಾಗುವಂತೆ ಎಲ್ಲಾ ಒಂಭತ್ತು ಜನರಿಗೆ ಸೂಚನೆ ನೀಡಿದ್ದಾರೆ. ದೇವಾಲಯದ ಪ್ರಧಾನ ಅರ್ಚಕ ನರಸರಾಜ ಭಟ್, ಅವರ ಸಹೋದರ ವರದರಾಜ್ ಭಟ್ ಮತ್ತು ಮುಜರಾಯಿ ಇಲಾಖೆಯ ಇತರ ಏಳು ಮಂದಿ ನೌಕರರಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಎಸಿ ವಾಣಿ ಹೇಳಿದ್ದಾರೆ.
2009 ರಿಂದ ಮುಜರಾಯಿ ಇಲಾಖೆ ನೌಕರರಾಗಿ ದೇವಾಲಯದಲ್ಲಿ ಕಾರ್ಯನಿರ್ವಹಿಸಿದ ಏಳು ಜನರು ವಿಚಾರಣೆಗೆ ಹಾಜರಾಗಬೇಕಾಗಿದೆ. ಅರ್ಚಕ ನರಸರಾಜ್ ಭಟ್ ಮತ್ತು ವರದರಾಜ್ ಭಟ್ ಇನ್ನೂ ತಮ್ಮ ನೋಟಿಸ್ ಅನ್ನು ಪಡೆಯಬೇಕಾಗಿದೆ. ಈ ಇಬ್ಬರು ಜುಲೈನಿಂದ ನಾಪತ್ತೆಯಾಗಿದ್ದು, ಎಲ್ಲಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. (ಮೇಲುಕೋಟೆ : ಪೊಲೀಸರಿಗೆ ಹೆದರಿದ ಅರ್ಚಕರು ಪರಾರಿ)
ಮುಜರಾಯಿ ಇಲಾಖೆಯ ನೌಕರರು ವಿಚಾರಣೆ ವೇಳೆ ದೇವಸ್ಥಾನದಲ್ಲಿನ ರತ್ನಾಂಗಿ ಆಭರಣ ಅದನ್ನು ನೀಡಿದವರು ಮುಂತಾದ ವಿವರಗಳನ್ನು ನೀಡಬೇಕಾಗಿದೆ. ಆದರೆ, ದೇವಾಲಯದ ಪ್ರಧಾನ ಅರ್ಚಕರು ಪತ್ತೆಯಾಗದ ಹೊರತು ಪ್ರಕರಣ ಕುರಿತು ತನಿಖೆ ಪೂರ್ಣಗೊಳ್ಳಲು ಸಾಧ್ಯವಿಲ್ಲ, ಅವರ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ತಿರಸ್ಕಾರವಾಗಿದ್ದೂ ಅವರು ಪತ್ತೆಯಾಗಿಲ್ಲ. (ಮೇಲುಕೋಟೆ ದೇವಾಲಯಕ್ಕೆ ಆಡಳಿತಾಧಿಕಾರಿ ನೇಮಕ)
ನರಸರಾಜ ಭಟ್ ಎಲ್ಲಿ : ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿನ ರತ್ನಾಂಗಿ ಆಭರಣದ ಅವ್ಯವಹಾರ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದು, ಅರ್ಚಕ ನರಸರಾಜ ಭಟ್ಟರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದ ತಕ್ಷಣ ಅವರು, ತಲೆಮರೆಸಿಕೊಂಡಿದ್ದಾರೆ.
ಮುಜರಾಯಿ ಸಚಿವರ ಆದೇಶದಂತೆ ಮಂಡ್ಯ ಜಿಲ್ಲಾಧಿಕಾರಿ ಬಿ.ಎಸ್.ಕೃಷ್ಣಯ್ಯ, ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೆ ಮೇಲುಕೋಟೆ ಠಾಣೆಯಲ್ಲಿ ನರಸರಾಜ ಭಟ್ಟ ವಿರುದ್ಧ ದೂರು ದಾಖಲಿಸುವಂತೆ ದೂರು ಸೂಚಿಸಿದ್ದರು. ಜು.18 ರಂದು ಅವರ ವಿರುದ್ಧ ದೂರು ದಾಖಲಾಗಿದ್ದು, ಅಂದಿನಿಂದಲೂ ಭಟ್ಟರು ಮತ್ತು ಅವರ ಸಹೋದರ ನಾಪತ್ತೆಯಾಗಿದ್ದಾರೆ.
ಯಾವ ಪ್ರಕರಣ : ನರಸರಾಜ ಭಟ್ಟರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 406 (ನಂಬಿಕೆ ದ್ರೋಹ), 408 (ಕರ್ತವ್ಯದಲ್ಲಿ ವಂಚನೆ), 420 (ಮೋಸ)ರ ಅಡಿ ಮೇಲುಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿರೀಕ್ಷಣಾ ಜಾಮೀನು ನೀಡುವಂತೆ ಭಟ್ಟರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ. ಆದರೂ ಭಟ್ಟರು ಇನ್ನೂ ಪತ್ತೆಯಾಗಿಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications