ಮೇಲುಕೋಟೆಗೆ ಕೇಳಿದ್ದು 500 ಕೋಟಿ ರು ಸಿಕ್ಕಿದ್ದು 20 ಕೋಟಿ
ಮೇಲುಕೋಟೆ, ಅ.06: ವೈಷ್ಣವರ ಪವಿತ್ರಕ್ಷೇತ್ರ ಮೇಲುಕೋಟೆ ಅಭಿವೃದ್ಧಿ ಹಾಗೂ ವಿಶಿಷ್ಟಾದೈತ ಪ್ರತಿಪಾದಕ ಶ್ರೀರಾಮಾನುಜಾಚಾರ್ಯರ ಜಯಂತಿ ಆಚರಣೆಗಾಗಿ 500 ಕೋಟಿ ರು ಕೇಳಿದ್ದ ಜಿಲ್ಲಾಡಳಿತಕ್ಕೆ 20ಕೋಟಿ ರು ಮಾತ್ರ ಮಂಜೂರಾಗಿದೆ.
ಇತಿಹಾಸ ಪ್ರಸಿದ್ಧ ಕ್ಷೇತ್ರ ಮೇಲುಕೋಟೆಯಲ್ಲಿ 20 ಕೋಟಿ ರು ವೆಚ್ಚದಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತದೆ ಎಂದು ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಮೇಲುಕೋಟೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಡಾ.ಅಜಯ್ ನಾಗಭೂಷಣ್ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಈ ವಿಷಯ ಹಂಚಿಕೊಂಡಿದ್ದಾರೆ.
ಮೇಲುಕೋಟೆ ಅಭಿವೃದ್ಧಿ ಕಾರ್ಯ ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಹೀಗಾಗಿ ಇಪ್ಪತ್ತು ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಯ ನೀಲನಕ್ಷೆ ತಯಾರಿಸಿ ಅಕ್ಟೋಬರ್ 20 ರಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುತ್ತದೆ. ಅನುದಾನದ ಮೊತ್ತ ಶೀಘ್ರವೇ ಬಿಡುಗಡೆ ಮಾಡಿಸಲಾಗುತ್ತದೆ ಎಂದರು. [ಮೇಲುಕೋಟೆ ವೈರಮುಡಿ ಕ್ಷೇತ್ರ ಪುರಾಣ]

ವಿವಿಧ ಯೋಜನೆ: ವಸತಿಸಮುಚ್ಚಯಗಳ ನಿರ್ಮಾಣ, ಮೇಲುಕೋಟೆ ಸಂಪರ್ಕ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು, ಒಳಚರಂಡಿ ವ್ಯವಸ್ಥೆ, ವ್ಯವಸ್ಥಿತವಾದ ಅಂಗಡಿಗಳ ನಿರ್ಮಾಣ, ಭಕ್ತರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಪ್ರವಾಸಿ ಮಾಹಿತಿ ಕೇಂದ್ರ ಸ್ಥಾಪನೆ, ಕಲ್ಯಾಣಿ ಮತ್ತು ದೇವಸ್ಥಾನದ ಬಳಿ ಶುದ್ಧೀಕರಿಸಿದ ಕುಡಿಯುವ ನೀರಿನ ಘಟಕ ಅಳವಡಿಕೆ, ಅನ್ನದಾನ ಭವನ, ಹೈಟೆಕ್ ಶೌಚಾಲಯಗಳ ನಿರ್ಮಾಣ, ಕಲ್ಯಾಣಿ ನೀರಿನಲ್ಲಿ ಸುರಕ್ಷತಾ ತಂತಿ ಅಳವಡಿಕೆ, ಯೋಗನರಸಿಂಹಸ್ವಾಮಿ ಬೆಟ್ಟದ ರಾಜಗೋಪುರ ನವೀಕರಣ, ಮೆಟ್ಟಿಲುಗಳ ದುರಸ್ತಿ, ಹಾಗೂ ಬೆಟ್ಟಕ್ಕೆ ರೋಪ್ ವೇ ಅಳವಡಿಕೆ, ಹೇಮಾವತಿ ವಸತಿಗೃಹಗಳನ್ನು ವಶಕ್ಕೆ ಪಡೆದು ಯಾತ್ರಿ ನಿವಾಸ ಮಾಡುವುದು ಪ್ರಮುಖ ಯೋಜನೆಗಳಾಗಿವೆ. [ರಾಮಾನುಜಾಚಾರ್ಯ 1000ನೇ ಜಯಂತಿಗೆ 500 ಕೋಟಿ ರು]

ಸಹಸ್ರಮಾನೋತ್ಸವ : 2017 ರಲ್ಲಿ ನಡೆಯುವ ಆಚಾರ್ಯ ರಾಮಾನುಜರ ಸಹಸ್ರಮಾನೋತ್ಸವನ್ನು ಅದ್ದೂರಿಯಾಗಿ ನಡೆಸಲು ಮಂಡ್ಯ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಪ್ರಾಥಮಿಕ ಅಭಿವೃದ್ಧಿಯ ಜೊತೆಗೆ ಹಲವಾರು ವಿಶೇಷ ಯೋಜನೆಗಳನ್ನು ಸಹ ಹಮ್ಮಿಕೊಂಡು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದಕ್ಕೂ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಿಸಲಾಗುತ್ತದೆ ಈ ಬಗ್ಗೆ ಮುಜರಾಯಿ ಮಂತ್ರಿ ಹಾಗೂ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿದ್ದಾರೆ ಎಂದರು.
ಪಾಂಡವಪುರ ಉಪ ವಿಭಾಗಾಧಿಕಾರಿ ಡಾ.ನಾಗರಾಜು, ಜಿಲ್ಲಾಧಿಕಾರಿ ಡಾ.ಅಜಯ್ ನಾಗಭೂಷಣ್, ಪ್ರವಾಸೋದ್ಯಮ ಇಲಾಖೆಯ ಮಂಡ್ಯ ಸಹಾಯಕ ನಿರ್ದೇಶಕ ಹರೀಶ್,ಪಾಂಡವಪುರ ತಹಶೀಲ್ದಾರ್ ಶಂಕರಪ್ಪ, ಮಂಡ್ಯ ಚುನಾವಣಾ ತಹಸೀಲ್ದಾರ್ ದಿನೇಶ್ ಚಂದ್ರ, ಸಾಹಿತಿ ತೈಲೂರು ವೆಂಕಟಕೃಷ್ಣ, ಮೇಲುಕೋಟೆ ಎಸ್.ಐ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಪಿಡಿಒ ಶೈಲಜಾ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications