Get Updates
Get notified of breaking news, exclusive insights, and must-see stories!

ಮೇಲುಕೋಟೆಗೆ ಕೇಳಿದ್ದು 500 ಕೋಟಿ ರು ಸಿಕ್ಕಿದ್ದು 20 ಕೋಟಿ

ಮೇಲುಕೋಟೆ, ಅ.06: ವೈಷ್ಣವರ ಪವಿತ್ರಕ್ಷೇತ್ರ ಮೇಲುಕೋಟೆ ಅಭಿವೃದ್ಧಿ ಹಾಗೂ ವಿಶಿಷ್ಟಾದೈತ ಪ್ರತಿಪಾದಕ ಶ್ರೀರಾಮಾನುಜಾಚಾರ್ಯರ ಜಯಂತಿ ಆಚರಣೆಗಾಗಿ 500 ಕೋಟಿ ರು ಕೇಳಿದ್ದ ಜಿಲ್ಲಾಡಳಿತಕ್ಕೆ 20ಕೋಟಿ ರು ಮಾತ್ರ ಮಂಜೂರಾಗಿದೆ.

ಇತಿಹಾಸ ಪ್ರಸಿದ್ಧ ಕ್ಷೇತ್ರ ಮೇಲುಕೋಟೆಯಲ್ಲಿ 20 ಕೋಟಿ ರು ವೆಚ್ಚದಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತದೆ ಎಂದು ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಮೇಲುಕೋಟೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಡಾ.ಅಜಯ್ ನಾಗಭೂಷಣ್ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಈ ವಿಷಯ ಹಂಚಿಕೊಂಡಿದ್ದಾರೆ.

ಮೇಲುಕೋಟೆ ಅಭಿವೃದ್ಧಿ ಕಾರ್ಯ ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಹೀಗಾಗಿ ಇಪ್ಪತ್ತು ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಯ ನೀಲನಕ್ಷೆ ತಯಾರಿಸಿ ಅಕ್ಟೋಬರ್ 20 ರಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುತ್ತದೆ. ಅನುದಾನದ ಮೊತ್ತ ಶೀಘ್ರವೇ ಬಿಡುಗಡೆ ಮಾಡಿಸಲಾಗುತ್ತದೆ ಎಂದರು. [ಮೇಲುಕೋಟೆ ವೈರಮುಡಿ ಕ್ಷೇತ್ರ ಪುರಾಣ]

Melukote Development Ramanujacharya Birth Anniversary Funds Mandya

ವಿವಿಧ ಯೋಜನೆ: ವಸತಿಸಮುಚ್ಚಯಗಳ ನಿರ್ಮಾಣ, ಮೇಲುಕೋಟೆ ಸಂಪರ್ಕ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು, ಒಳಚರಂಡಿ ವ್ಯವಸ್ಥೆ, ವ್ಯವಸ್ಥಿತವಾದ ಅಂಗಡಿಗಳ ನಿರ್ಮಾಣ, ಭಕ್ತರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಪ್ರವಾಸಿ ಮಾಹಿತಿ ಕೇಂದ್ರ ಸ್ಥಾಪನೆ, ಕಲ್ಯಾಣಿ ಮತ್ತು ದೇವಸ್ಥಾನದ ಬಳಿ ಶುದ್ಧೀಕರಿಸಿದ ಕುಡಿಯುವ ನೀರಿನ ಘಟಕ ಅಳವಡಿಕೆ, ಅನ್ನದಾನ ಭವನ, ಹೈಟೆಕ್ ಶೌಚಾಲಯಗಳ ನಿರ್ಮಾಣ, ಕಲ್ಯಾಣಿ ನೀರಿನಲ್ಲಿ ಸುರಕ್ಷತಾ ತಂತಿ ಅಳವಡಿಕೆ, ಯೋಗನರಸಿಂಹಸ್ವಾಮಿ ಬೆಟ್ಟದ ರಾಜಗೋಪುರ ನವೀಕರಣ, ಮೆಟ್ಟಿಲುಗಳ ದುರಸ್ತಿ, ಹಾಗೂ ಬೆಟ್ಟಕ್ಕೆ ರೋಪ್ ವೇ ಅಳವಡಿಕೆ, ಹೇಮಾವತಿ ವಸತಿಗೃಹಗಳನ್ನು ವಶಕ್ಕೆ ಪಡೆದು ಯಾತ್ರಿ ನಿವಾಸ ಮಾಡುವುದು ಪ್ರಮುಖ ಯೋಜನೆಗಳಾಗಿವೆ. [ರಾಮಾನುಜಾಚಾರ್ಯ 1000ನೇ ಜಯಂತಿಗೆ 500 ಕೋಟಿ ರು]

KS Puttanaiah

ಸಹಸ್ರಮಾನೋತ್ಸವ : 2017 ರಲ್ಲಿ ನಡೆಯುವ ಆಚಾರ್ಯ ರಾಮಾನುಜರ ಸಹಸ್ರಮಾನೋತ್ಸವನ್ನು ಅದ್ದೂರಿಯಾಗಿ ನಡೆಸಲು ಮಂಡ್ಯ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಪ್ರಾಥಮಿಕ ಅಭಿವೃದ್ಧಿಯ ಜೊತೆಗೆ ಹಲವಾರು ವಿಶೇಷ ಯೋಜನೆಗಳನ್ನು ಸಹ ಹಮ್ಮಿಕೊಂಡು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದಕ್ಕೂ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಿಸಲಾಗುತ್ತದೆ ಈ ಬಗ್ಗೆ ಮುಜರಾಯಿ ಮಂತ್ರಿ ಹಾಗೂ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿದ್ದಾರೆ ಎಂದರು.

ಪಾಂಡವಪುರ ಉಪ ವಿಭಾಗಾಧಿಕಾರಿ ಡಾ.ನಾಗರಾಜು, ಜಿಲ್ಲಾಧಿಕಾರಿ ಡಾ.ಅಜಯ್ ನಾಗಭೂಷಣ್, ಪ್ರವಾಸೋದ್ಯಮ ಇಲಾಖೆಯ ಮಂಡ್ಯ ಸಹಾಯಕ ನಿರ್ದೇಶಕ ಹರೀಶ್,ಪಾಂಡವಪುರ ತಹಶೀಲ್ದಾರ್ ಶಂಕರಪ್ಪ, ಮಂಡ್ಯ ಚುನಾವಣಾ ತಹಸೀಲ್ದಾರ್ ದಿನೇಶ್ ಚಂದ್ರ, ಸಾಹಿತಿ ತೈಲೂರು ವೆಂಕಟಕೃಷ್ಣ, ಮೇಲುಕೋಟೆ ಎಸ್.ಐ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಪಿಡಿಒ ಶೈಲಜಾ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+